ಸಂಗ್ರಹ ಚಿತ್ರ 
ರಾಜ್ಯ

ಆಟೋ ಮೇಲೆ ಉರುಳಿ ಬಿದ್ದ ಮರ: ಚಾಲಕ ಸೇರಿ ಇಬ್ಬರಿಗೆ ಗಾಯ, 10 ದಿನದಲ್ಲಿ 3ನೇ ಘಟನೆ

ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಪಾಲಿಕೆಗೆ ನೂರಾರು ದೂರವಾಣಿ ಕರೆಗಳು ಬಂದಿದ್ದವು. ಆದರೆ, ಯಾವುದೇ ಸಾವು-ನೋವುಗಳು ವರದಿಯಾಗಿರಲಿಲ್ಲ. ಕಳೆದ 10 ದಿನಗಳಿಂದ ಮರ ಬಿದ್ದು ಹಲವರು ಗಾಯಗೊಳ್ಳುತ್ತಿರುವುದು, ಸಾವುಗಳು ವರದಿಯಾಗುತ್ತಿವೆ.

ಬೆಂಗಳೂರು: ಚಲಿಸುತ್ತಿದ್ದ ಆಟೋ ಮೇಲೆ ಮರವೊಂದು ಉರುಳಿ ಬಿದ್ದು, ಚಾಲಕ ಸೇರಿ ಇಬ್ಬರಿಗೆ ಗಾಯಗಳಾಗಿರುವ ಘಟನೆ ಸದಾಶಿವನಗರ ಪೊಲೀಸ್ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ.

ಗಾಯಾಳು ಜೀವ ಎಂ ಅವರು ಖಾಸಗಿ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಟೋ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾನೆಂದು ತಿಳಿದುಬಂದಿದೆ, ನಿನ್ನೆ ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಆಟೋ ಜೊತೆಗೆ ಮತ್ತೊಂದು ವಾಹನಕ್ಕೂ ಹಾನಿಯಾಗಿದ್ದು, ಚಾಲಕನ ಕೈ ಮೂಳೆ ಮುರಿತಗೊಂಡಿದೆ ಎಂದು ತಿಳಿದುಬಂದಿದೆ. ಆಗಸ್ಟ್ 12 ರಿಂದ ಈ ವರೆಗೂ ಒಟ್ಟು 3 ಘಟನೆಗಳು ವರದಿಯಾಗಿವೆ.

ಬಿಬಿಎಂಪಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಬಿ.ಎಲ್.ಜಿ.ಸ್ವಾಮಿ ಮಾತನಾಡಿ, ಅರಣ್ಯಾಧಿಕಾರಿ ಹಾಗೂ ಬಿಬಿಎಂಪಿ ಅರಣ್ಯ ವಿಭಾಗದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮರ ಬಿದ್ದ ಪರಿಣಾಮ ಜೀವ ಅವರ ತಲೆಗೆ ಗಂಭೀರವಾದ ಗಾಯವಾಗಿದೆ. ವೈದ್ಯರು 24 ಗಂಟೆಗಳ ಕಾಲ ನಿಗಾದಲ್ಲಿರಿಸಿದ್ದಾರೆ. ಬೆನ್ನುಹಿರಿ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದು, ಆತನ ಮನೆಯವರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರೂ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ.

ಮತ್ತೊಬ್ಬ ವಾಹನದ ಚಾಲಕನ ಕೈ ಮೂಳೆ ಮುರಿತಗೊಂಡಿದ್ದು, ಆತನನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಪಾಲಿಕೆ ಚಿಕಿತ್ಸೆಯ ವೆಚ್ಚವನ್ನು ಭರಿಸಲಿದೆ ಎಂದು ತಿಳಿಸಿದ್ದಾರೆ.

ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಬಿಬಿಎಂಪಿಗೆ ನೂರಾರು ದೂರವಾಣಿ ಕರೆಗಳು ಬಂದಿದ್ದವು. ಆದರೆ, ಯಾವುದೇ ಸಾವು-ನೋವುಗಳು ವರದಿಯಾಗಿರಲಿಲ್ಲ. ಕಳೆದ 10 ದಿನಗಳಿಂದ ಮರ ಬಿದ್ದು ಹಲವರು ಗಾಯಗೊಳ್ಳುತ್ತಿರುವುದು, ಸಾವುಗಳು ವರದಿಯಾಗುತ್ತಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT