ಪ್ರಾತಿನಿಧಿಕ ಚಿತ್ರ 
ರಾಜ್ಯ

ಐಷಾರಾಮಿ ಪ್ರದೇಶಗಳ ಗುರಿಯಾಗಿಸಿ ದರೋಡೆ: ಖತರ್ನಾಕ್‌ ಕಳ್ಳರ ಗ್ಯಾಂಗ್‌ ಅಂದರ್

ಮಾರಾಕಾಸ್ತ್ರ, ಮೆಣಸಿನ ಪುಡಿ ಇಟ್ಟುಕೊಳ್ಳುತ್ತಿದ್ದ ಆರೋಪಿಗಳು ಐಷಾರಾಮಿ ಮನೆಗಳಿರುವ ಪ್ರದೇಶಗಳಿಗೆ ಹೋಗಿ ಕಾರಿನ ಗಾಜು ಹೊಡೆದು ಕಾರಿನಲ್ಲಿದ್ದ ಲ್ಯಾಪ್‌ ಟಾಪ್‌ ಗಳನ್ನು ಹೊತ್ತೊಯ್ಯುತ್ತಿದ್ದರು.

ಬೆಂಗಳೂರು: ನಗರದ ಐಷಾರಾಮಿ ಪ್ರದೇಶಗಳಲ್ಲಿನ ಮನೆಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ವೊಂದನ್ನು ಇಂದಿರಾನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಮುರಳಿ (38), ಸೆಂಥಿಲ್ (50), ಮೂರ್ತಿ (49) ಮತ್ತು ಜಾನ್ (35) ಎಂದು ಗುರ್ತಿಸಲಾಗಿದೆ. ಆರೋಪಿಗಳೆಲ್ಲರೂ ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯವರಾಗಿದ್ದು, ಕಳ್ಳತನ ಮಾಡಲು ಬೆಂಗಳೂರಿಗೆ ಬರುತ್ತಿದ್ದರು.

ಮಾರಾಕಾಸ್ತ್ರ, ಮೆಣಸಿನ ಪುಡಿ ಇಟ್ಟುಕೊಳ್ಳುತ್ತಿದ್ದ ಆರೋಪಿಗಳು ಐಷಾರಾಮಿ ಮನೆಗಳಿರುವ ಪ್ರದೇಶಗಳಿಗೆ ಹೋಗಿ ಕಾರಿನ ಗಾಜು ಹೊಡೆದು ಕಾರಿನಲ್ಲಿದ್ದ ಲ್ಯಾಪ್‌ ಟಾಪ್‌ ಗಳನ್ನು ಹೊತ್ತೊಯ್ಯುತ್ತಿದ್ದರು. ನಂತರ ಈ ವಸ್ತುಗಳನ್ನು ಜಾನ್ ಮಾರಾಟ ಮಾಡುತ್ತಿದ್ದ.

ಕಳ್ಳತನದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದರು. ಆಗಸ್ಟ್ 15 ರಂದು ಅತ್ತಿಬೆಲೆ ಬಲ್ ನಿಲ್ದಾಣದ ಬಳಿ ಜಾನ್'ನನ್ನು ಬಂಧನಕ್ಕೊಳಪಡಿಸಿದ್ದರು. ಈತ ನೀಡಿದ ಮಾಹಿತಿ ಆಧಾರದ ಮೇಲೆ ಮೂವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಈವರೆಗೂ 8 ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ. ಆರೋಪಗಳಿಂದ 7 ಲ್ಯಾಪ್ ಟಾಪ್ ಗಳು ಮತ್ತು 5.85 ಲಕ್ಷ ರೂ. ಮೌಲ್ಯದ ಇತರೆ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT