ಸ್ವಾತಿ-ಮೋಹನ್ 
ರಾಜ್ಯ

ಮಂಡ್ಯ: ನೇಣು ಬಿಗಿದುಕೊಂಡು ಪತ್ನಿ ಆತ್ಮಹತ್ಯೆ; ಹೆದರಿ ಕೆರೆಗೆ ಹಾರಿದ ಪತಿ, ಒಂದು ವರ್ಷದ ಮಗು ಅನಾಥ!

ಮೋಹನ್ ಹಾಗೂ ಸ್ವಾತಿ ಮೃತ ದಂಪತಿಯಾಗಿದ್ದು ಕಳೆದ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಒಂದು ಹೆಣ್ಣು ಮಗು ಹುಟ್ಟಿದ್ದು, ಇದೀಗ ದಂಪತಿಯ ಕಲಹಕ್ಕೆ ಇಬ್ಬರು ಸಾವನ್ನಪ್ಪಿದ್ದು ಕೂಸು ಬಡವಾಗಿದೆ.

ಮಂಡ್ಯ: ಕೌಟುಂಬಿಕ ಕಲಹದಿಂದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪತಿ ಕೆರೆಗೆ ಹಾರಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್‌ ಪೇಟೆ ತಾಲೂಕಿನ ಗದ್ದೆಹೊಸರು ಗ್ರಾಮದಲ್ಲಿ ನಡೆದಿದೆ.

ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡಿರುವ ಒಂದು ವರ್ಷದ ಮಗು ಇದೀಗ ಅನಾಥವಾಗಿದೆ. ಮೋಹನ್ ಹಾಗೂ ಸ್ವಾತಿ ಮೃತ ದಂಪತಿಯಾಗಿದ್ದು ಕಳೆದ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಒಂದು ಹೆಣ್ಣು ಮಗು ಹುಟ್ಟಿದ್ದು, ಇದೀಗ ದಂಪತಿಯ ಕಲಹಕ್ಕೆ ಇಬ್ಬರು ಸಾವನ್ನಪ್ಪಿದ್ದು ಕೂಸು ಬಡವಾಗಿದೆ.

ಮೋಹನ್ ಮತ್ತು ಸ್ವಾತಿ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು. ಆದರೆ ನಿನ್ನೆ ಸಂಜೆ ಮತ್ತೆ ಮನೆಯಲ್ಲಿ ಯಾರು ಇಲ್ಲದೇ ಇಬ್ಬರ ನಡುವೆ ಜಗಳ ವಿಕೋಪಕ್ಕೆ ತಿರುಗಿದೆ‌. ನಂತರ ಸ್ವಾತಿ ಅವರ ಅಣ್ಣ, ಹೆಣ್ಣು ಮಗುವನ್ನು ಕರೆದುಕೊಂಡು ಮನೆಗೆ ಬಂದು ನೋಡಿದಾಗ ಸ್ವಾತಿ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿತ್ತು. ಇದರಿಂದ ಕೆರಳಿದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದರು. ಇದನ್ನು ಕಂಡ‌ ಮೋಹನ್ ಅಲ್ಲಿಂದ ಪರಾರಿಯಾಗಿದ್ದನು.

ಆದರೆ ಇಂದು ಬೆಳಗ್ಗೆ ಮನೆಯಿಂದ ಅರ್ಧ ಕಿ.ಮೀ ದೂರದಲ್ಲಿ ಇದ್ದ ಕೆರೆಯಲ್ಲಿ ಮೋಹನ್ ಶವ ಸಹ ಪತ್ತೆಯಾಗಿದೆ. ಮೋಹನ್ ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಇನ್ನು ಆನ್ ಲೈನ್ ಬೆಟ್ಟಿಂಗ್ ಕ್ಕಾಗಿ ಹಣ ನೀಡುವಂತೆ ಸ್ವಾತಿಗೆ ಕಿರುಕುಳ ನೀಡುತ್ತಿದ್ದ ಎಂದು ಸ್ವಾತಿಯ ಘೋಷಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT