ಸ್ವಾತಿ-ಮೋಹನ್ 
ರಾಜ್ಯ

ಮಂಡ್ಯ: ನೇಣು ಬಿಗಿದುಕೊಂಡು ಪತ್ನಿ ಆತ್ಮಹತ್ಯೆ; ಹೆದರಿ ಕೆರೆಗೆ ಹಾರಿದ ಪತಿ, ಒಂದು ವರ್ಷದ ಮಗು ಅನಾಥ!

ಮೋಹನ್ ಹಾಗೂ ಸ್ವಾತಿ ಮೃತ ದಂಪತಿಯಾಗಿದ್ದು ಕಳೆದ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಒಂದು ಹೆಣ್ಣು ಮಗು ಹುಟ್ಟಿದ್ದು, ಇದೀಗ ದಂಪತಿಯ ಕಲಹಕ್ಕೆ ಇಬ್ಬರು ಸಾವನ್ನಪ್ಪಿದ್ದು ಕೂಸು ಬಡವಾಗಿದೆ.

ಮಂಡ್ಯ: ಕೌಟುಂಬಿಕ ಕಲಹದಿಂದ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪತಿ ಕೆರೆಗೆ ಹಾರಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್‌ ಪೇಟೆ ತಾಲೂಕಿನ ಗದ್ದೆಹೊಸರು ಗ್ರಾಮದಲ್ಲಿ ನಡೆದಿದೆ.

ತಂದೆ-ತಾಯಿ ಇಬ್ಬರನ್ನು ಕಳೆದುಕೊಂಡಿರುವ ಒಂದು ವರ್ಷದ ಮಗು ಇದೀಗ ಅನಾಥವಾಗಿದೆ. ಮೋಹನ್ ಹಾಗೂ ಸ್ವಾತಿ ಮೃತ ದಂಪತಿಯಾಗಿದ್ದು ಕಳೆದ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಒಂದು ಹೆಣ್ಣು ಮಗು ಹುಟ್ಟಿದ್ದು, ಇದೀಗ ದಂಪತಿಯ ಕಲಹಕ್ಕೆ ಇಬ್ಬರು ಸಾವನ್ನಪ್ಪಿದ್ದು ಕೂಸು ಬಡವಾಗಿದೆ.

ಮೋಹನ್ ಮತ್ತು ಸ್ವಾತಿ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು. ಆದರೆ ನಿನ್ನೆ ಸಂಜೆ ಮತ್ತೆ ಮನೆಯಲ್ಲಿ ಯಾರು ಇಲ್ಲದೇ ಇಬ್ಬರ ನಡುವೆ ಜಗಳ ವಿಕೋಪಕ್ಕೆ ತಿರುಗಿದೆ‌. ನಂತರ ಸ್ವಾತಿ ಅವರ ಅಣ್ಣ, ಹೆಣ್ಣು ಮಗುವನ್ನು ಕರೆದುಕೊಂಡು ಮನೆಗೆ ಬಂದು ನೋಡಿದಾಗ ಸ್ವಾತಿ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ನೇತಾಡುತ್ತಿತ್ತು. ಇದರಿಂದ ಕೆರಳಿದ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿದರು. ಇದನ್ನು ಕಂಡ‌ ಮೋಹನ್ ಅಲ್ಲಿಂದ ಪರಾರಿಯಾಗಿದ್ದನು.

ಆದರೆ ಇಂದು ಬೆಳಗ್ಗೆ ಮನೆಯಿಂದ ಅರ್ಧ ಕಿ.ಮೀ ದೂರದಲ್ಲಿ ಇದ್ದ ಕೆರೆಯಲ್ಲಿ ಮೋಹನ್ ಶವ ಸಹ ಪತ್ತೆಯಾಗಿದೆ. ಮೋಹನ್ ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಇನ್ನು ಆನ್ ಲೈನ್ ಬೆಟ್ಟಿಂಗ್ ಕ್ಕಾಗಿ ಹಣ ನೀಡುವಂತೆ ಸ್ವಾತಿಗೆ ಕಿರುಕುಳ ನೀಡುತ್ತಿದ್ದ ಎಂದು ಸ್ವಾತಿಯ ಘೋಷಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT