ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭರವಸೆ ಬೆನ್ನಲ್ಲೇ KARD ಮುಷ್ಕರ ಅಂತ್ಯ

ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘವು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿತ್ತು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆನ್ನಲ್ಲೇ ಕರ್ನಾಟಕ ಸ್ಥಾನಿಕ ವೈದ್ಯರ ಸಂಘವು (ಕೆಎಆರ್‌ಡಿ) ಮುಷ್ಕರವನ್ನು ಹಿಂದಕ್ಕೆ ಪಡೆದುಕೊಂಡಿದೆ.

ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘವು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿತ್ತು.

ಬುಧವಾರ ಬಾಗಲಕೋಟೆಗೆ ತೆರಳುವುದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂನಲ್ಲಿ ತಮ್ಮ ನಿವಾಸದಲ್ಲಿ ಕೆಎಆರ್‌ಡಿ ಸದಸ್ಯರನ್ನು ಭೇಟಿ ಮಾಡಿದರು.

ಈ ವೈದ್ಯರು, ವಾರಕ್ಕೆ 70-80 ಗಂಟೆಗಳ ಕಾಲ ಕೆಲಸ ಮಾಡಿದರೂ ನಮ್ಮಗಳಿಕೆ ಕಡಿಮೆಯಿದೆ ಎಂದು ಅಳಲು ತೋಡಿಕೊಂಡರು. ಶಿಷ್ಯವೇತನ ಹೆಚ್ಚಳಕ್ಕೆ ಮನವ ಮಾಡಿಕೊಂಡರು.

ಮಾತುಕತೆ ಬಳಿಕ ಮುಖ್ಯಮಂತ್ರಿಗಳು ಸ್ನಾತಕೋತ್ತರ ಪದವೀಧರರು ಮತ್ತು ಸೂಪರ್-ಸ್ಪೆಷಾಲಿಟಿ ನಿವಾಸಿ ವೈದ್ಯರಿಗೆ ಶಿಷ್ಯವೇತನವನ್ನು ಶೇ.25ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳಿಂದ ಇನ್ನೂ ಅಧಿಕೃತ ಆದೇಶಗಳು ಬಂದಲ್ಲ. ಆದರೆ, ಭರವಸೆ ಬೆನ್ನಲ್ಲೇ ಮುಷ್ಕರ ವಾಪಸ್ ಪಡೆಯಲಾಗಿದೆ. ಇಂದಿನಿಂದ ಕೆಎಆರ್‌ಡಿ ಸದಸ್ಯರು ತಮ್ಮ ತಮ್ಮ ಸೇವೆಗಳನ್ನು ಪುನರಾರಂಭಿಸುತ್ತಾರೆಂದು ಕೆಎಆರ್‌ಡಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಡಾರ್ಜಿಲಿಂಗ್‌ನಲ್ಲಿ ಭಾರೀ ಮಳೆ; ಭೂಕುಸಿತದಲ್ಲಿ ಮಕ್ಕಳು ಸೇರಿ ಕನಿಷ್ಠ 20 ಮಂದಿ ಸಾವು

ರಿಷಬ್ ಶೆಟ್ಟಿ ದೃಶ್ಯಕಾವ್ಯಕ್ಕೆ ಬಹುಪರಾಕ್: 4ನೇ ದಿನಕ್ಕೆ ಜಗತ್ತಿನಾದ್ಯಂತ 300 ಕೋಟಿ ಕಲೆಕ್ಷನ್ ದಾಖಲೆ ಬರೆದ 'ಕಾಂತಾರ'!

World cup 2025: ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್: Pak'ಗೆ 248 ರನ್ ಟಾರ್ಗೆಟ್ ನೀಡಿದ ಭಾರತ!

India-Pakistan ಪಂದ್ಯದ ವೇಳೆ ಹೈಡ್ರಾಮಾ: ಮೊದಲು ನಾಟೌಟ್ ನಂತರ Out ಘೋಷಣೆ; 4ನೇ ಅಂಪೈರ್ ಜೊತೆ Pak ನಾಯಕಿ ವಾಗ್ವಾದ, Video

22 ವರ್ಷಗಳ ನಂತರ ಬಿಹಾರ ಮತದಾರರ ಪಟ್ಟಿ 'ಶುದ್ಧೀಕರಿಸಲಾಗಿದೆ'; ದೇಶಾದ್ಯಂತ ವಿಸ್ತರಣೆ: CEC

SCROLL FOR NEXT