ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭರವಸೆ ಬೆನ್ನಲ್ಲೇ KARD ಮುಷ್ಕರ ಅಂತ್ಯ

ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘವು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿತ್ತು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆನ್ನಲ್ಲೇ ಕರ್ನಾಟಕ ಸ್ಥಾನಿಕ ವೈದ್ಯರ ಸಂಘವು (ಕೆಎಆರ್‌ಡಿ) ಮುಷ್ಕರವನ್ನು ಹಿಂದಕ್ಕೆ ಪಡೆದುಕೊಂಡಿದೆ.

ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಥಾನಿಕ ವೈದ್ಯರ ಶಿಷ್ಯವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ಸ್ಥಾನಿಕ ವೈದ್ಯರ ಸಂಘವು ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿತ್ತು.

ಬುಧವಾರ ಬಾಗಲಕೋಟೆಗೆ ತೆರಳುವುದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂನಲ್ಲಿ ತಮ್ಮ ನಿವಾಸದಲ್ಲಿ ಕೆಎಆರ್‌ಡಿ ಸದಸ್ಯರನ್ನು ಭೇಟಿ ಮಾಡಿದರು.

ಈ ವೈದ್ಯರು, ವಾರಕ್ಕೆ 70-80 ಗಂಟೆಗಳ ಕಾಲ ಕೆಲಸ ಮಾಡಿದರೂ ನಮ್ಮಗಳಿಕೆ ಕಡಿಮೆಯಿದೆ ಎಂದು ಅಳಲು ತೋಡಿಕೊಂಡರು. ಶಿಷ್ಯವೇತನ ಹೆಚ್ಚಳಕ್ಕೆ ಮನವ ಮಾಡಿಕೊಂಡರು.

ಮಾತುಕತೆ ಬಳಿಕ ಮುಖ್ಯಮಂತ್ರಿಗಳು ಸ್ನಾತಕೋತ್ತರ ಪದವೀಧರರು ಮತ್ತು ಸೂಪರ್-ಸ್ಪೆಷಾಲಿಟಿ ನಿವಾಸಿ ವೈದ್ಯರಿಗೆ ಶಿಷ್ಯವೇತನವನ್ನು ಶೇ.25ರಷ್ಟು ಹೆಚ್ಚಳ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳಿಂದ ಇನ್ನೂ ಅಧಿಕೃತ ಆದೇಶಗಳು ಬಂದಲ್ಲ. ಆದರೆ, ಭರವಸೆ ಬೆನ್ನಲ್ಲೇ ಮುಷ್ಕರ ವಾಪಸ್ ಪಡೆಯಲಾಗಿದೆ. ಇಂದಿನಿಂದ ಕೆಎಆರ್‌ಡಿ ಸದಸ್ಯರು ತಮ್ಮ ತಮ್ಮ ಸೇವೆಗಳನ್ನು ಪುನರಾರಂಭಿಸುತ್ತಾರೆಂದು ಕೆಎಆರ್‌ಡಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶವಿರೋಧಿ ಚಟುವಟಿಕೆ ಆರೋಪ: ಕಾಶ್ಮೀರ ಟೈಮ್ಸ್ ದಿನಪತ್ರಿಕೆ ಕಚೇರಿಯ SIA ದಾಳಿ; Ak-47 ಕಾರ್ಟ್ರಿಡ್ಜ್‌, ಗ್ರೆನೇಡ್ ಲಿವರ್‌ ವಶಕ್ಕೆ!

ರೋಚಕ ಘಟ್ಟ ತಲುಪಿದ 'ಸಿಎಂ ಬದಲಾವಣೆ' ಚರ್ಚೆ: ಡಿಕೆಶಿ ಪರ ಶಾಸಕರು ದಿಢೀರ್ ದೆಹಲಿ ಯಾತ್ರೆ; ಹೈಕಮಾಂಡ್ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಜ್ಜು!

ಅಕ್ರಮ ವಲಸಿಗರಿಗೆ ಅಸ್ಸಾಂ ಸರ್ಕಾರದ 'ಶಾಕ್': 'ಅತ್ಯಪರೂಪದ ಕಾನೂನು' ಜಾರಿ, 24 ಗಂಟೆಯೊಳಗೆ ಗಡಿಪಾರು!

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!

ಭಾರತದ ಬೆನ್ನಿಗೆ ಚೂರಿ?: ದೆಹಲಿ ಬಾಂಬ್ ಸ್ಫೋಟಕ್ಕೂ ಅಫ್ಘಾನಿಸ್ತಾನಕ್ಕೂ ನಂಟು ಬಹಿರಂಗ; ಕರ್ನಾಟಕಕ್ಕೂ ಉಗ್ರನ ಭೇಟಿ!

SCROLL FOR NEXT