ರಾಜ್ಯ

ಟಿ ನರಸೀಪುರದ ಹೊಟೇಲ್ ವೊಂದರಲ್ಲಿ ಸ್ಫೋಟಕ ಪತ್ತೆ: ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ

ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೈಸೂರು: ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.

ಅಪರಿಚಿತರು ನೀಲಿ ಬಣ್ಣದ ಪ್ಲಾಸ್ಟಿಕ್​ನಲ್ಲಿ ಸ್ಫೋಟಕ ವಸ್ತುಗಳನ್ನು ಇಟ್ಟು ಪರಾರಿಯಾಗಿದ್ದಾರೆ. ಈ ಸ್ಫೋಟಕ ವಸ್ತುಗಳನ್ನು ನೋಡಿದ ಹೋಟೆಲ್​ ಸಿಬ್ಬಂದಿ ಕೂಡಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಸ್ಫೋಟಕಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಟ್ಯೂಬ್ ಆಕಾರದಲ್ಲಿರುವ 9 ಸ್ಪೋಟಕ ಮತ್ತು ಒಂದು ನಾಡ ಬಾಂಬ್ ಆಕಾರದ ವಸ್ತು ಪತ್ತೆಯಾಗಿದೆ.

ಮಾನವ-ಪ್ರಾಣಿ ಸಂಘರ್ಷ: ಕಲ್ಲು ಗಣಿಗಾರಿಕೆಗೆ ಮತ್ತು ಪ್ರಾಣಿಗಳ ಬೇಟೆಗೆ ಸ್ಫೋಟಕಗಳನ್ನು ಬಳಸಲು ತೆಗೆದುಕೊಂಡು ಹೋಗಿರಬಹುದು ಎಂದು ಸಂದೇಹಪಡಲಾಗಿದೆ. ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದವರು ಸ್ಪೋಟಕ ವಸ್ತುಗಳನ್ನು ವಶಕ್ಕೆ ಪಡೆದು, ಹೋಟೆಲ್​ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕಿದ್ದಾರೆ. ಟಿ. ನರಸಿಪುರ ತಾಲೂಕಿನಲ್ಲಿ ಮಾನವ-ಪ್ರಾಣಿ ಸಂಘರ್ಷ ಆಗಾಗ ನಡೆಯುತ್ತಿರುತ್ತದೆ. ಪ್ರಾಣಿಗಳನ್ನು ಬೇಟೆಯಾಡಲು ಅಪರಿಚಿತರು ಸ್ಫೋಟಕಗಳನ್ನು ತೆಗೆದುಕೊಂಡು ಹೋಗುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದೆ.

ಕಳೆದ ವರ್ಷ ಮೈಸೂರು ದಸರಾ ಮೇಲೆ ಉಗ್ರರ ಕರಿ ನೆರಳು ಬಿದ್ದು ಶಂಕಿತರನ್ನು ವಶಕ್ಕೆ ಪಡೆಯಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT