ಸಚಿವ ಈಶ್ವರ್ ಖಂಡ್ರೆ 
ರಾಜ್ಯ

ಪಿಒಪಿ ಗಣೇಶನ ಮಾರಾಟ ಮಾಡಿದ್ರೆ ಹುಷಾರ್: ಸಚಿವ ಈಶ್ವರ್‌ ಖಂಡ್ರೆ ಖಡಕ್ ಎಚ್ಚರಿಕೆ

ಆದೇಶವನ್ನು ಉಲ್ಲಂಘಿಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ವಾಯು ಮತ್ತು ಜಲ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಅವರು ಹೇಳಿದರು. ಇಲ್ಲಿಯವರೆಗೆ ಕೇವಲ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಬೆಂಗಳೂರು: ಈ ಬಾರಿ ಗಾರಿ ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಗುರುವಾರ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.

ಆದೇಶವನ್ನು ಉಲ್ಲಂಘಿಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ವಾಯು ಮತ್ತು ಜಲ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಅವರು ಹೇಳಿದರು. ಇಲ್ಲಿಯವರೆಗೆ ಕೇವಲ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು. ಆದರೆ ಈಗ ಸಾಕಷ್ಟು ಮುಂಚಿತವಾಗಿಯೇ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಖಂಡ್ರೆ, ಪರಿಸರ ಸ್ನೇಹಿ ವಿಗ್ರಹಗಳನ್ನು ಉತ್ತೇಜಿಸಲು ಮತ್ತು ಹಸಿರು ಪಟಾಕಿಗಳ ಬಳಕೆಯನ್ನು ಉತ್ತೇಜಿಸಲು ಜಿಲ್ಲಾಧಿಕಾರಿಗಳ ಅಡಿಯಲ್ಲಿ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಶಿರೂರು ಮತ್ತು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಬಗ್ಗೆ ಪ್ರಸ್ತಾಪಿಸಿದ ಖಂಡ್ರೆ, ಪರಿಸರವನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. ಸರ್ಕಾರವು ಪಿಒಪಿ ವಿಗ್ರಹಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ಸಾಗಣೆಯನ್ನು ನಿಷೇಧಿಸಿದೆ, ಆದರೂ ಅವು ಬಳಕೆಯಲ್ಲಿವೆ ಎಂದು ಕಂಡುಬಂದ ಉದಾಹರಣೆಗಳಿವೆ. ಹೀಗಾಗಿ ಕಠಿಣ ಕ್ರಮ ಕೈಗೊಳ್ಳಲು, ಪೊಲೀಸ್, ಸಾರಿಗೆ ಮತ್ತು ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಲು ಪರಿಸರ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆಗೆ ಲಿಖಿತ ಅನುಮತಿ ನೀಡುವಾಗ ಕಡ್ಡಾಯವಾಗಿ ಪಿಒಪಿ ಮೂರ್ತಿಗಳನ್ನು ಬಳಸುವಂತಿಲ್ಲ, ಪಟಾಕಿ ಸಿಡಿಸುವಂತಿಲ್ಲ, ಪರಿಸರ ಸ್ನೇಹಿಯಾಗಿ ವಿಗ್ರಹಗಳನ್ನು ವಿಸರ್ಜಿಸಲಾಗುವುದು ಎಂದು ಮುಚ್ಚಳಿಕೆ ಬರೆಸಿಕೊಳ್ಳುವಂತೆ ಖಂಡ್ರೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್