ಜಯಶ್ರೀ-ಕಿರಣ್ 
ರಾಜ್ಯ

ಉಡುಪಿ: ಪತ್ನಿಯ ರೀಲ್ಸ್ ಹುಚ್ಚಾಟದಿಂದ ಬೇಸತ್ತು ಕತ್ತಿಯಿಂದ ಕೊಚ್ಚಿ ಕೊಂದ ಪತಿ!

ಮೃತ ಮಹಿಳೆಯನ್ನು 28 ವರ್ಷದ ಜಯಶ್ರೀ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ 30 ವರ್ಷದ ಕಿರಣ್ ಉಪಾಧ್ಯನನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಉಡುಪಿ: ರೀಲ್ಸ್ ಹುಚ್ಚಿಗೆ ಬಿದ್ದಿದ್ದ ಪತ್ನಿಯನ್ನು ಕತ್ತಿಯಿಂದ ಕೊಚ್ಚಿ ಕೊಂದಿರುವ ಭೀಕರ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ನಡೆದಿದೆ. ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಮೃತ ಮಹಿಳೆಯನ್ನು 28 ವರ್ಷದ ಜಯಶ್ರೀ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ 30 ವರ್ಷದ ಕಿರಣ್ ಉಪಾಧ್ಯನನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಇಂದು ಬೆಳಗ್ಗೆ ಜಯಶ್ರೀ ಅನ್ನು ಕಿರಣ್ ಉಪಾಧ್ಯ ಕೊಲೆ ಮಾಡಿದ್ದಾನೆ.

ಸದ್ಯ ಕಿರಣ್ ಉಪಾಧ್ಯನನ್ನು ಕೋಟ ಪೊಲೀಸರು ಬಂಧಿಸಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಸಾಮಾಜಿಕ ಜಾಲತಾಣ ಇನ್ಸ್‌ಸ್ಟಾಗ್ರಾಮ್ ರೀಲ್ಸ್‌ನಲ್ಲಿ ಜಯಶ್ರೀ ಹೆಚ್ಚು ಸಮಯ ಕಳೆಯುತ್ತಿದ್ದಳು ಎನ್ನುವ ಕ್ಷುಲ್ಲಕ ಕಾರಣಕ್ಕೆ ಕಿರಣ್ ಕಸಿವಿಸಿಕೊಂಡಿದ್ದು ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT