ಎಂಬಿ ಪಾಟೀಲ್ 
ರಾಜ್ಯ

ಕೆಐಎಡಿಬಿ ನಿವೇಶನ ಹಂಚಿಕೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ: ಎಂ.ಬಿ ಪಾಟೀಲ್

377.69 ಎಕರೆಯಲ್ಲಿ 193 ನಿವೇಶನಗಳಿಗೆ ಅರ್ಜಿ ಆಹ್ವಾನಿಸಿದ್ದು, 43 ನಿವೇಶನಗಳನ್ನು ಮಾತ್ರ ಮಂಜೂರು ಮಾಡಲಾಗಿದೆ.

ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ)ಯಿಂದ ಸಿಎ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪವನ್ನು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಳ್ಳಿಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಎಂಬಿ ಪಾಟೀಲ್, "ಸಿಎ ನಿವೇಶನ ಹಂಚಿಕೆಯಲ್ಲಿ ಯಾವುದೇ ನಿಯಮ ಉಲ್ಲಂಘಿಸಿಲ್ಲ. ಎಲ್ಲಾ ವಿಧಾನ ಅನುಸರಿಸಿ ಪಾರದರ್ಶಕವಾಗಿ ಹಂಚಿಕೆ ನಡೆದಿದೆ. ಕೆಲ ವಾರಗಳ ಹಿಂದೆ ಸಾಮಾಜಿಕ ಕಾರ್ಯಕರ್ತರೊಬ್ಬರು ಈ ಆರೋಪ ಮಾಡಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದರು. ಅದೇ ಅರ್ಜಿಯನ್ನು ಮತ್ತೆ ನೀಡಲಾಗಿದೆ ಎಂದು ಹೇಳಿದರು.

377.69 ಎಕರೆಯಲ್ಲಿ 193 ನಿವೇಶನಗಳಿಗೆ ಅರ್ಜಿ ಆಹ್ವಾನಿಸಿದ್ದು, 43 ನಿವೇಶನಗಳನ್ನು ಮಾತ್ರ ಮಂಜೂರು ಮಾಡಲಾಗಿದೆ. ಉಳಿದ ನಿವೇಶನಗಳು ಇನ್ನೂ ಹಂಚಿಕೆಯಾಗಿಲ್ಲ. ನಿರ್ದಿಷ್ಟ ಸೈಟ್‌ಗೆ ಒಂದೇ ಅರ್ಜಿ ಸ್ವೀಕರಿಸಿದ ಸಂದರ್ಭಗಳಲ್ಲಿ, ಅರ್ಹ ಅರ್ಜಿದಾರರಿಗೆ ಅವಕಾಶ ಸಿಗುವಂತೆ ನೋಡಿಕೊಳ್ಳಲು ಮತ್ತೆ ಅರ್ಜಿಗಳನ್ನು ಕರೆಯಲಾಗುತ್ತಿದೆ ಎಂದು ಅವರು ಹೇಳಿದರು.

ಮೊದಲ ಬಾರಿಗೆ ಸಿಎ ಸೈಟ್‌ಗಳ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿ, ಪಂಗಡಕ್ಕೆ ಶೇ. 24.10 ರಷ್ಟು ಮೀಸಲಾತಿ ಪರಿಚಯಿಸಲಾಗಿದೆ. ತಮ್ಮ ಅವಧಿಯಲ್ಲಿ ಸಿಎ ನಿವೇಶನಗಳ ದರ ಇಳಿಕೆ ಮಾಡಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT