ವೈದ್ಯರ ಪ್ರತಿಭಟನೆ ಚಿತ್ರ 
ರಾಜ್ಯ

ಬೆಂಗಳೂರು: ಸ್ಥಾನಿಕ ವೈದ್ಯರ ಶಿಷ್ಯ ವೇತನ ಶೇ. 25 ರಷ್ಟು ಹೆಚ್ಚಳ!

ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಶಿಷ್ಯವೇತನ ಹೆಚ್ಚಿಸಿ ಆದೇಶ ಹೊರಡಿಸುವಂತೆ ಸೂಚನೆ ನೀಡಿದ್ದು, ಪರಿಷ್ಕೃತ ಶಿಷ್ಯವೇತನ ಆಗಸ್ಟ್ 1 ರಿಂದ ಅನ್ವಯ

ಬೆಂಗಳೂರು: ಹಿರಿಯ ಸ್ಥಾನಿಕ ವೈದ್ಯರು ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯ ವೇತನವನ್ನು ಶೇ . 25 ರಷ್ಟು ಹೆಚ್ಚಿಸಿ ಕರ್ನಾಟಕ ವೈದ್ಯಕೀಯ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ಇಲ್ಲಿನ ಸ್ಥಾನಿಕ ವೈದ್ಯರ ಯಶಸ್ವಿ ಮುಷ್ಕರದ ನಂತರ ಈ ಆದೇಶ ಹೊರಡಿಸಲಾಗಿದೆ.

ಮೂಲಗಳ ಪ್ರಕಾರ, ಮುಷ್ಕರದಿಂದಾಗಿ ಕಳೆದ 15- 20 ದಿನಗಳಿಂದ ತುರ್ತು ಸೇವೆಗಳು ಮಾತ್ರ ಲಭ್ಯವಿದ್ದವು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮಧ್ಯಪ್ರವೇಶಿಸಿದ ನಂತರ ಸ್ಥಾನಿಕ ವೈದ್ಯರು ಮುಷ್ಕರವನ್ನು ಹಿಂತೆಗೆದುಕೊಂಡರು.

ಸಚಿವರು ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಶಿಷ್ಯವೇತನ ಹೆಚ್ಚಿಸಿ ಆದೇಶ ಹೊರಡಿಸುವಂತೆ ಸೂಚನೆ ನೀಡಿದ್ದು, ಪರಿಷ್ಕೃತ ಶಿಷ್ಯವೇತನ ಆಗಸ್ಟ್ 1 ರಿಂದ ಅನ್ವಯವಾಗಲಿದೆ ಎಂದು ಸಚಿವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

SCROLL FOR NEXT