ಹೈಕೋರ್ಟ್ 
ರಾಜ್ಯ

ನನ್ನ ಪತಿ ವಿರುದ್ಧದ ಭ್ರಷ್ಟಾಚಾರ ಆರೋಪ ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ; ಹೈಕೋರ್ಟ್ ಗೆ ಹೋಗುತ್ತೇವೆ: ಮೃತ ಅಧಿಕಾರಿ ಪತ್ನಿ

ಆರೋಪಪಟ್ಟಿಯಲ್ಲಿ, ನನ್ನ ಪತಿ ಹಣ ಪಡೆದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ನಮಗೆ ಯಾವುದೇ ನ್ಯಾಯ ಸಿಕ್ಕಿಲ್ಲ. ಅವರು ಒತ್ತಡಕ್ಕೆ ಮಣಿದಿದ್ದರು. ನಾನು ಹೈಕೋರ್ಟ್‌ಗೆ ಹೋಗುತ್ತೇನೆ. ನಾನು ಈಗಾಗಲೇ ವಕೀಲರನ್ನು ಸಂಪರ್ಕಿಸಿದ್ದೇನೆ, ಎಂದು ಅವರು ಹೇಳಿದರು.

ಶಿವಮೊಗ್ಗ: ಒಂದು ಕಡೆ ನಮ್ಮ ಮನೆಯವರನ್ನು ಕಳೆದುಕೊಂಡು ನೋವಲ್ಲಿ ಇದ್ದೇವೆ. ಇನ್ನೊಂದು ಕಡೆ ನನ್ನ ಗಂಡನ ಮೇಲೆ ಆರೋಪ ಹಾಕುತ್ತಿದ್ದಾರೆ. ನಾವು ದುಡ್ಡು ತಿನ್ನುವ ಜನ ಅಲ್ಲ. ಎಸ್‌ಐಟಿ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಸಿಬಿಐ ತನಿಖೆಗೆ ಇದನ್ನು ಒಪ್ಪಿಸಬೇಕು. ನಾವು ಹೈಕೋರ್ಟ್ ಮೊರೆ ಹೋಗುತ್ತೇವೆ ಎಂದು ಆತ್ಮಹತ್ಯೆಗೆ ಶರಣಾಗಿದ್ದ ಚಂದ್ರಶೇಖರನ್‌ ಪತ್ನಿ ಕವಿತಾ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆರೋಪಪಟ್ಟಿಯಲ್ಲಿ, ನನ್ನ ಪತಿ ಹಣ ಪಡೆದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ನಮಗೆ ಯಾವುದೇ ನ್ಯಾಯ ಸಿಕ್ಕಿಲ್ಲ. ಅವರು ಒತ್ತಡಕ್ಕೆ ಮಣಿದಿದ್ದರು. ನಾನು ಹೈಕೋರ್ಟ್‌ಗೆ ಹೋಗುತ್ತೇನೆ. ನಾನು ಈಗಾಗಲೇ ವಕೀಲರನ್ನು ಸಂಪರ್ಕಿಸಿದ್ದೇನೆ, ಎಂದು ಅವರು ಹೇಳಿದರು. ತಮ್ಮ ಪತಿಯ ಆತ್ಮಹತ್ಯೆಯ ಹಿಂದಿನ ಸತ್ಯವನ್ನು ಕಂಡುಹಿಡಿಯಲು ಎಸ್‌ಐಟಿ ವಿಫಲವಾಗಿದೆ ಎಂದು ಆರೋಪಿಸಿದರು. ಘಟನೆಯ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಅವರು ಹೇಳಿದರು. ಪತಿಯನ್ನು ಗೋವಾಕ್ಕೆ ಕರೆದೊಯ್ದು ಒತ್ತಡ ಹೇರಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕವಿತಾ, “ಅಂತಹ ಯಾವುದೇ ಘಟನೆಯ ಬಗ್ಗೆ ನನಗೆ ತಿಳಿದಿಲ್ಲ. ಅವರು ಮನೆಯಲ್ಲಿ ಕೆಲಸದ ಬಗ್ಗೆ ಮಾತನಾಡುತ್ತಿರಲಿಲ್ಲ ಎಂದಿದ್ದಾರೆ.

ಕಳೆದ ಎರಡು ತಿಂಗಳುಗಳಿಂದ, ನಾವು ತುಂಬಾ ನೊಂದಿದ್ದೇವೆ, ನನ್ನ ಪತಿ ಅಂತಹ ಯಾವುದೇ ವಿಷಯದಲ್ಲಿ ಭಾಗಿಯಾಗಿದ್ದಾರೆ ಎಂದು ನಾವು ನಂಬುವುದಿಲ್ಲ. ನನ್ನ ಪತಿ ಶುದ್ಧರಾಗಿದ್ದರು ಮತ್ತು ಅವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ ಎಂದು ನಾನು ನಂಬುತ್ತೇನೆ. ನನ್ನ ಗಂಡನ ಮೇಲಿನ ಆರೋಪಗಳೆಲ್ಲವೂ ಸುಳ್ಳು,” ಎಂದು ಅವರು ಹೇಳಿದರು. ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಕವಿತಾ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು. ಅಧಿಕಾರಿಗಳನ್ನು ಟಾರ್ಗೆಟ್ ಮಾಡಲಾಗಿದೆ ಮತ್ತು ತನಿಖೆಯನ್ನೇ ದಿಕ್ಕು ತಪ್ಪಿಸಲಾಗಿದೆ ಎಂದು ಅವರು ಹೇಳಿದರು. “ನನ್ನ ದಿವಂಗತ ಪತಿ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ. ನಾವು ಹೈಕೋರ್ಟ್‌ಗೆ ಮೊರೆ ಹೋಗುತ್ತೇವೆ ಮತ್ತು ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆ ನೀಡುತ್ತೇವೆ ಎಂದು ಕವಿತಾ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT