ಮಾಲವಿ ಜಲಾಶಯದ ಹಾನಿಗೊಳಗಾದ ಕ್ರೆಸ್ಟ್ ಗೇಟ್‌ಗಳನ್ನು ಸರಿಪಡಿಸುತ್ತಿರುವ ಅಧಿಕಾರಿಗಳು. 
ರಾಜ್ಯ

ತುಂಗಭದ್ರಾ ಬಳಿಕ ಮಾಲವಿ ಜಲಾಶಯದ ಒಡ್ಡು ಒಡೆದು ನೀರು ಪೋಲು...!

ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಮಾಲವಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದಬಂದಿದ್ದು, ಜಲಾಶಯದ 9ನೇ ಗೇಟ್‌ ದುರಸ್ತಿಯಾಗದೆ, ನೀರು ಸಂಗ್ರಹಣೆಗೆ ಹಾಕಲಾಗಿದ್ದ ಒಡ್ಡು ಒಡೆದಿದೆ.

ವಿಜಯನಗರ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿ ಎಲ್ಲರ ಆತಂಕಕ್ಕೆ ಕಾರಣವಾಗಿತ್ತು. ಇದರ ದುರಸ್ಥಿ ಕಾರ್ಯ ಯಶಸ್ವಿಯಾದ ಬೆನ್ನಲ್ಲೇ ವಿಜಯನಗರ ಜಿಲ್ಲೆಯ ಜಲಾಶಯದಲ್ಲಿ ಇಂತಹುದೇ ಬೆಳವಣಿಗೆ ಕಂಡು ಬಂದಿದೆ.

ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಮಾಲವಿ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದಬಂದಿದ್ದು, ಜಲಾಶಯದ 9ನೇ ಗೇಟ್‌ ದುರಸ್ತಿಯಾಗದೆ, ನೀರು ಸಂಗ್ರಹಣೆಗೆ ಹಾಕಲಾಗಿದ್ದ ಒಡ್ಡು ಒಡೆದಿದೆ. ಇದರಿದ ಬಹುಪಾಲು ನೀರು ವ್ಯರ್ಥವಾಗಿ ಹರಿದು ಹೋಗಿದೆ.

ಜಲಮೂಲಗಳಿಂದ ಒಟ್ಟು 2ಟಿಎಂಸಿಯಷ್ಟು ನೀರು ಸಂಗ್ರಹವಾಗುವ ಜಲಾಶಯದಿಂದ ಸುತ್ತಲಿನ ಹಲವು ಗ್ರಾಮಗಳಲ್ಲಿಅಂತರ್ಜಲ ಹೆಚ್ಚುವ ಜತೆಗೆ 16ಸಾವಿರ ಎಕರೆ ಪ್ರದೇಶ ನೀರಾವರಿಯಾಗಲಿದೆ. ಆದರೆ, ಜಲಾಶಯದ 9ನೇ ಗೇಟ್‌ಗೆ ದುರಸ್ತಿಗೆ 4.02 ಕೋಟಿ ರೂ.ಅನುದಾನವಿದ್ದರೂ ವರ್ಷದಿಂದ ಬಳಕೆಯಾಗದಿರುವುದು, ದುರಸ್ತಿ ಕೈಗೆತ್ತಿಕೊಳ್ಳದಿರುವುದು ಸಮಸ್ಯೆಯ ಮೂಲವಾಗಿದೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನಲ್ಲಿರುವ ಮಾಲವಿ ಜಲಾಶಯವನ್ನು 1972 ರಲ್ಲಿ ನಿರ್ಮಿಸಲಾಗಿದೆ. ಜಲಾಶಯವು ಒಟ್ಟು 10 ಕ್ರೆಸ್ಟ್ ಗೇಟ್‌ಗಳನ್ನು ಹೊಂದಿದ್ದು, ಇದು ತಾಲ್ಲೂಕಿನ ನೀರಾವರಿಗೆ ಮತ್ತು ತುಂಗಭದ್ರಾ ಅಣೆಕಟ್ಟಿಗೆ ಪ್ರಮುಖ ನೀರಿನ ಮೂಲವಾಗಿದೆ.

ಕಳೆದ ಕೆಲವು ವರ್ಷಗಳಿಂದ, ಕ್ರೆಸ್ಟ್ ಗೇಟ್‌ಗಳನ್ನು ನವೀಕರಿಸಬೇಕೆಂದು ಆಡಳಿತ ಮಂಡಳಿಗೆ ರೈತರು ಮನವಿ ಮಾಡುತ್ತಲೇ ಬಂದಿದ್ದಾರೆ.

ಹಗರಿಬೊಮ್ಮನಹಳ್ಳಿಯ ಸೋಮಶೇಖರ್ ನಾಯಕ್ ಮಾತನಾಡಿ, ಕಳೆದ ಕೆಲವು ವರ್ಷಗಳಿಂದ ಕ್ರೆಸ್ಟ್ ಗೇಟ್‌ಗಳ ದುರಸ್ತಿಗಾಗಿ ರಾಜ್ಯ ಸರ್ಕಾರ ಮತ್ತು ವಿಜಯನಗರ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯೆ ನೀಡಿ, ಕ್ರೆಸ್ಟ್ ಗೇಟ್‌ಗಳಿಂದ ಹೊರಹರಿವಾಗುತ್ತಿಲ್ಲ. ಕ್ರೆಸ್ಟ್ ಗೇಟ್ ಸಂಬಂಧ ರಾಜ್ಯ ಸರ್ಕಾರಕ್ಕೆ ವರದಿ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT