ಸಿದ್ದರಾಮಯ್ಯ ಕೈಗೆ ಗಾಯ 
ರಾಜ್ಯ

Vidhana Soudha: ಕಡತ ಪರಿಶೀಲನೆ ವೇಳೆ ಸಿಎಂ ಸಿದ್ದರಾಮಯ್ಯ ಕೈಗೆ ಗಾಯ!

ಕಚೇರಿಯಲ್ಲಿ ಅರ್ಜಿಗಳ ಪರೀಶೀಲನೆಯಲ್ಲಿ ತೊಡಗಿರುವಾಗ ಅರ್ಜಿಯಲ್ಲಿದ್ದ ಗುಂಡು ಸೂಜಿ ಸಿದ್ದರಾಮಯ್ಯ ಅವರ ಕೈಗೆ ಚುಚ್ಚಿದೆ. ಇದರಿಂದ ಅವರ ಕೈಗೆ ಗಾಯವಾಗಿದೆ ಎಂದು ಹೇಳಲಾಗಿದೆ.

ಬೆಂಗಳೂರು: ವಿಧಾನಸೌಧದಲ್ಲಿ ಅರ್ಜಿ ಪರಿಶೀಲನೆ ಮಾಡುವ ವೇಳೆ ಸಿಎಂ ಸಿದ್ದರಾಮಯ್ಯ ಅವರ ಕೈಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ವಿಧಾನಸೌಧದ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ ಕೈಗೆ ಗುಂಡು ಸೂಚಿ ಚುಚ್ಚಿದ್ದು, ಇದನ್ನು ಕಂಡ ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. ನಂತರ ಸಿಎಂ ಕೈಗೆ ಔಷಧಿ ಹಚ್ಚಿದ್ದಾರೆ.

ಮೂಲಗಳ ಪ್ರಕಾರ ಕಚೇರಿಯಲ್ಲಿ ಅರ್ಜಿಗಳ ಪರೀಶೀಲನೆಯಲ್ಲಿ ತೊಡಗಿರುವಾಗ ಅರ್ಜಿಯಲ್ಲಿದ್ದ ಗುಂಡು ಸೂಜಿ ಸಿದ್ದರಾಮಯ್ಯ ಅವರ ಕೈಗೆ ಚುಚ್ಚಿದೆ. ಇದರಿಂದ ಅವರ ಕೈಗೆ ಗಾಯವಾಗಿದೆ ಎಂದು ಹೇಳಲಾಗಿದೆ. ಮೊದಲು ಗಾಯದ ಬಗ್ಗೆ ಮಾಹಿತಿ ಇಲ್ಲದೇ ಅಧಿಕಾರಿಗಳು, ವೈದ್ಯರು ಶಾಕ್ ಆಗಿ ಸಿಎಂ ಸಿದ್ದರಾಮಯ್ಯಗೆ ಚಿಕಿತ್ಸೆ ನೀಡಲು ಧಾವಿಸಿದ್ದರು. ಆದರೆ ಕೊನೆಗೆ ಇದು ಗುಂಡು ಪಿನ್ನು ಚುಚ್ಚಿದ ಗಾಯ ಎಂಬುದು ತಿಳಿದು ಬಂದಿದೆ.

ವಿಧಾನಸೌಧದ (Vidhansoudha) ಸಮಿತಿ ಕೊಠಡಿ 313 ರಿಂದ ಜನಸ್ಪಂದನೆ ಕಾರ್ಯಕ್ರಮ ಬರುತ್ತಿರುವ ವೇಳೆ ಗುಂಡು ಸೂಜಿ ಚುಚ್ಚಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೆ ಗಾಯವಾಗಿದೆ. ಈ ವೇಳೆ ಮುಖ್ಯಮಂತ್ರಿಗಳು ಬೆರಳಿಗೆ ಕರ್ಚೀಫ್ ಸುತ್ತಿಕೊಂಡು ಸಭೆಗೆ ತೆರಳಿದರು. ಕೂಡಲೆ ಸ್ಥಳಕ್ಕೆ ಆಗಮಿಸಿದ ವೈದ್ಯರು ಬೆರಳಿಗೆ ಸಿದ್ದರಾಮಯ್ಯ ತಪಾಸಣೆ ಮಾಡಿದ ವೈದ್ಯರು ಪ್ರಥಮ ಚಿಕಿತ್ಸೆ​ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT