ದಿನೇಶ್ ಗುಂಡೂರಾವ್  
ರಾಜ್ಯ

ನಗರದಲ್ಲಿ ಡೆಂಗ್ಯೂ ಹೆಚ್ಚಳ: ಸೊಳ್ಳೆಗಳ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ

ಓವಿ ಟ್ರ್ಯಾಪ್ಅಳವಡಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಚಾಲನೆ ನೀಡಿದರು.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಜನವರಿಯಿಂದ 10,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ಮತ್ತು ಮೂರು ಸಾವುಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಓವಿ ಟ್ರ್ಯಾಪ್ ಅಳವಡಿಕೆಗೆ ಮುಂದಾಗಿದೆ.

ಓವಿ ಟ್ರ್ಯಾಪ್ಅಳವಡಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಓವಿ ಟ್ರ್ಯಾಪ್ ಸಾಧನವು ಸೊಳ್ಳೆಗಳು, ಸೊಳ್ಳೆಗಳ ಮೊಟ್ಟೆ ನಾಶಪಡಿಸಲಿದೆ. ಪ್ರಾಯೋಗಿಕವಾಗಿ ಬಿನ್ನಿಪೇಟೆ ವಾರ್ಡ್‌ನ ಗೋಪಾಲಪುರದಲ್ಲಿ 120 ಟ್ರ್ಯಾಪ್‌ಗಳನ್ನು ಅಳವಡಿಸಲಾಗಿದೆ. ಇದು ಕೆಲಸ ಮಾಡಿದ್ದೇ ಆದರೆ, ಡೆಂಗ್ಯೂ, ಮಲೇರಿಯಾ, ಝೀಕಾದಂತಹ ಸಾಂಕ್ರಾಂಮಿಕ ರೋಗಗಳನ್ನೂ ನಿಯಂತ್ರಣಕ್ಕೆ ತರಬಹುದು ಎಂದು ಹೇಳಿದರು.

ಮುಂಬೈನ ಧಾರವಿ ಕೊಳಗೇರಿ ಪ್ರದೇಶದಲ್ಲೂ ಈ ಪ್ರಯೋಗ ನಡೆಯುತ್ತಿದೆ. ಅದೇ ರೀತಿ ಬೆಂಗಳೂರಿನಲ್ಲೂ ಪ್ರಯೋಗ ಆರಂಭಿಸಲಾಗಿದೆ. ಉತ್ತಮ ಫಲಿತಾಂಶ ದೊರೆತರೆ ರಾಜ್ಯದಾದ್ಯಂತ ಓವಿ ಟ್ರ್ಯಾಪ್ ಸಾಧನಗಳನ್ನ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ಬಜೆಟ್ ನಲ್ಲೂ ಹಣವನ್ನು ಮೀಸಲಿಡಲಾಗುವುದು. ಸಿಎಸ್ಆರ್ ಅಡಿಯಲ್ಲಿ ಹಣ ಕ್ರೋಢೀಕರಿಸುವ ಕುರಿತಂತೆಯೂ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಈ ನಡುವೆ ಪ್ರತಿ ಬಯೋ ಟ್ರ್ಯಾಪ್‌ಗೆ 300 ರಿಂದ 400 ರೂ. ವೆಚ್ಚವಾಗುತ್ತದೆ ಎಂದು ಬಿಬಿಎಂಪ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಯೋ ಟ್ರ್ಯಾಪ್ ಸಾಧನ ಎಂದರೇನು?

ಇದೊಂದು ಮಡಿಕೆ ಆಕಾರದ ಸಾಧನವಾಗಿದ್ದು, ಕುಂಡದಲ್ಲಿ ನೀರು ತುಂಬಿ ರಾಸಾಯನಿಕ ಬೆರಸಲಾಗುತ್ತದೆ. ಈ ರಾಸಾಯನಿಕ ಮಿಶ್ರಣವು ಸೊಳ್ಳೆಗಳನ್ನ ಆಕರ್ಷಿಸಿ ಸಾಯಿಸುತ್ತದೆ. ಅಲ್ಲದೆ, ಈಡಿಸ್ ಸೊಳ್ಳೆಗಳು ಹಾಗೂ ಸೊಳ್ಳೆಗಳ ಮೊಟ್ಟೆಗಳನ್ನೂ ನಾಶಪಡಿಸುತ್ತದೆ. ಬಯೋ ಟ್ರ್ಯಾಪ್ ಬಳಕೆಯಿಂದ ಶೇ.60 ರಷ್ಟು ಸೊಳ್ಳೆಗಳ ನಿಯಂತ್ರಿಸಲು ಸಾಧ್ಯ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?