ಅಸ್ವಸ್ಥಗೊಂಡವಕು ಚಿಕಿತ್ಸೆ ಪಡೆಯುತ್ತಿರುವುದು. 
ರಾಜ್ಯ

ತುಮಕೂರು: ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಸಾವು, ಹಲವರು ಅಸ್ವಸ್ಥ

ಕರಿಯಮ್ಮ ಮತ್ತು ಮುತ್ತುರಾಯ ಭೂತಪ್ಪ ದೇವರ ವಾರ್ಷಿಕ ಜಾತ್ರೆ ಶನಿವಾರ ಆರಂಭವಾಯಿತು. ಭಾನುವಾರ ಮಾಂಸಾಹಾರಿ ಆಹಾರವನ್ನು ಸೇವಿಸಿದ ನಂತರ, ಹಲವರಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದೆ.

ತುಮಕೂರು: ಮಧುಗಿರಿ ತಾಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟು, ಹಲವರು ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ.

ಮೃತರನ್ನು ಬುಳ್ಳಸಂದ್ರದ ನಿವಾಸಿಗಳಾದ ತಿಮ್ಮಕ್ಕ (80) ಮತ್ತು ಗಿರಿಯಮ್ಮ (86) ಮತ್ತು ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕಿನ ಸಿದ್ಧಗಿರಿ ಗ್ರಾಮದ ಕಾಟಮ್ಮ (45) ಎಂದು ಗುರುತಿಸಲಾಗಿದೆ.

ಕರಿಯಮ್ಮ ಮತ್ತು ಮುತ್ತುರಾಯ ಭೂತಪ್ಪ ದೇವರ ವಾರ್ಷಿಕ ಜಾತ್ರೆ ಶನಿವಾರ ಆರಂಭವಾಯಿತು. ಭಾನುವಾರ ಮಾಂಸಾಹಾರಿ ಆಹಾರವನ್ನು ಸೇವಿಸಿದ ನಂತರ, ಹಲವರಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ.

ಜನರು ತಮ್ಮ ತಮ್ಮ ಮನೆಗಳಲ್ಲಿಯೇ ಆಹಾರ ಸಿದ್ಧಪಡಿಸಿ, ಜಾತ್ರೆಗೆ ತಂದಿದ್ದರು. ಮೂರು ಕುಟುಂಬಗಳು ತಯಾರಿಸಿದ ಆಹಾರ ಸೇವಿಸಿದವರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಸಹಾಯಕ ಆಯುಕ್ತ ಗೋಟೂರು ಶಿವಣ್ಣ ಹೇಳಿದ್ದಾರೆ.

ಘಟನೆ ಬೆನ್ನಲ್ಲೇ ಮಧುಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ್, ಆರೋಗ್ಯಾಧಿಕಾರಿ ಶ್ರೀನಿವಾಸ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಯಾನಂದ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಇದೀಗ ಆಹಾರದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಶಿವಣ್ಣ ತಿಳಿಸಿದರು.

ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ಕಲುಷಿತ ನೀರು ಕುಡಿದು ಏಳು ಮಂದಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT