ಬೈರತಿ ಸುರೇಶ್ ಪುತ್ರನ ಜೊತೆ BJP ಶಾಸಕ ಎಸ್.ಆರ್ ವಿಶ್ವನಾಥ್ ಮಗಳ ನಿಶ್ಚಿತಾರ್ಥ 
ರಾಜ್ಯ

ಕಾಂಗ್ರೆಸ್'ನ ಸಚಿವ ಬೈರತಿ ಸುರೇಶ್ ಪುತ್ರನ ಜೊತೆ BJP ಶಾಸಕ ಎಸ್.ಆರ್ ವಿಶ್ವನಾಥ್ ಮಗಳ ಅದ್ಧೂರಿ ನಿಶ್ಚಿತಾರ್ಥ!

ಬೈರತಿ ಸುರೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದಾರೆ. ಇನ್ನು ಯಲಹಂಕ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಬೈರತಿ ಸುರೇಶ್ ಅವರು ಬೀಗರಾಗುತ್ತಿದ್ದಾರೆ

ಬೆಂಗಳೂರು: ಕಾಂಗ್ರೆಸ್'ನ ಸಚಿವ ಬೈರತಿ ಸುರೇಶ್ ಮಗನ ಜೊತೆ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಮಗಳ ನಿಶ್ಚಿತಾರ್ಥ ಕಾರ್ಯಕ್ರಮ ಇಂದು ಬೆಂಗಳೂರಿನ ಖಾಸಗಿ ಹೋಟೆಲ್‌ ಒಂದರಲ್ಲಿ ಅದ್ಧೂರಿಯಾಗಿ ನಡೆದಿದ್ದು ಮುಂದಿನ ವರ್ಷ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ.

ಬೈರತಿ ಸುರೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದಾರೆ. ಇನ್ನು ಯಲಹಂಕ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹಾಗೂ ಬೈರತಿ ಸುರೇಶ್ ಅವರು ಬೀಗರಾಗುತ್ತಿದ್ದಾರೆ. ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವಾರು ನಾಯಕರು ನಿಶ್ಚಿತಾರ್ಥದಲ್ಲಿ ಪಾಲ್ಗೊಂಡು ಹೊಸ ಜೋಡಿಗೆ ಶುಭ ಹಾರೈಸಿದರು.

ಬೈರತಿ ಸುರೇಶ್ ಪುತ್ರ ಸಂಜಯ್ ಹಾಗೂ ವಿಶ್ವನಾಥ್ ಪುತ್ರಿ ಅಪೂರ್ವ ಪರಸ್ಪರ ಪ್ರೀತಿಸುತ್ತಿದ್ದರು. ಈ ಪ್ರೀತಿಗೆ ಪೋಷಕರು ಸಮ್ಮತಿ ಸೂಚಿಸಿದ್ದು ಮದುವೆ ನಿಶ್ಚಯಿಸಿದ್ದಾರೆ. ಅದರಂತೆ 2025ರ ಫೆಬ್ರವರಿಯಲ್ಲಿ ಅರಮನೆ ಮೈದಾನದಲ್ಲಿ ವಿವಾಹ ಕಾರ್ಯಕ್ರಮ ನಡೆಯಲಿದೆ. ಇನ್ನು ನಿಶ್ಚಿತಾರ್ಥದಲ್ಲಿ ಭಾಗಿಯಾಗಿದ್ದ ತಾವರ್ ಚಂದ್ ಗೆಹ್ಲೋಟ್ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಒಟ್ಟಿಗೆ ಊಟ ಮಾಡಿದ್ದು ವಿಶೇಷವಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್