ಸಾಂದರ್ಭಿಕ ಚಿತ್ರ 
ರಾಜ್ಯ

ವಿಶ್ವ ಕೌಶಲ್ಯ ಸ್ಪರ್ಧೆಗೆ ಭಾರತೀಯ ತಂಡದ ಭಾಗವಾಗಿ ರಾಜ್ಯದ 9 ವಿದ್ಯಾರ್ಥಿಗಳು ಆಯ್ಕೆ

ವಿದ್ಯಾರ್ಥಿಗಳು ಫ್ರಾನ್ಸ್‌ಗೆ ಪ್ರಯಾಣ ಬೆಳೆಸುವ ಮೊದಲು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರನ್ನು ಭೇಟಿಯಾದರು.

ಬೆಂಗಳೂರು: ಫ್ರಾನ್ಸ್‌ನ ಲಿಯಾನ್‌ನಲ್ಲಿ ನಡೆಯುತ್ತಿರುವ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ(ಕೆಎಸ್‌ಡಿಸಿ) ರಾಜ್ಯದ ಒಂಬತ್ತು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಈ ವಿದ್ಯಾರ್ಥಿಗಳು ಫ್ರಾನ್ಸ್‌ಗೆ ಪ್ರಯಾಣ ಬೆಳೆಸುವ ಮೊದಲು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರನ್ನು ಭೇಟಿಯಾದರು.

ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಕೌಶಲ್ಯವನ್ನು ಪ್ರದರ್ಶಿಸಿ ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯ ಮತ್ತು ರಾಷ್ಟ್ರಕ್ಕೆ ಕೀರ್ತಿ ತರುವಂತೆ ಶರಣ ಪ್ರಕಾಶ್ ಪಾಟೀಲ್ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಆಯ್ಕೆಯಾದ ವಿದ್ಯಾರ್ಥಿಗಳು ಪ್ರಸ್ತುತ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಐಟಿಐ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಮಾಡುತ್ತಿದ್ದಾರೆ ಎಂದು ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು(NSDC) ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅಭ್ಯರ್ಥಿಗಳನ್ನು ಭಾರತ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸುತ್ತದೆ. ಅದರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ.

ಕಳೆದ ಮೇ 15 ರಿಂದ 19 ರವರೆಗೆ ದೆಹಲಿಯಲ್ಲಿ ನಡೆದ ಭಾರತ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ಫ್ರಾನ್ಸ್‌ನ ಲಿಯಾನ್‌ನಲ್ಲಿ ಸೆಪ್ಟೆಂಬರ್ 10 ರಿಂದ 15 ರವರೆಗೆ ನಡೆಯಲಿರುವ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ 22 ವರ್ಷಕ್ಕಿಂತ ಕಡಿಮೆ ವಯಸ್ಸಿನ 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು 61 ಕ್ಕೂ ಹೆಚ್ಚು ಕೌಶಲ್ಯ ವಿಭಾಗಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT