ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ 
ರಾಜ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಪತ್ನಿ, ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ ವಿರುದ್ಧ ದೂರು ದಾಖಲು

ಸಿದ್ದರಾಮಯ್ಯ ವಿರುದ್ಧ ಈ ಹಿಂದೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಬುಧವಾರ ಈ ಹೊಸ ದೂರು ದಾಖಲಿಸಿದ್ದಾರೆ.

ಮೈಸೂರು: ಮುಡಾ ಹಗರಣದಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ, ಮೂಲ ದಾಖಲಾತಿ ನಾಶಪಡಿಸಿ, ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ ವಿರುದ್ಧ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) 14 ನಿವೇಶನಗಳನ್ನು ಅಕ್ರಮವಾಗಿ ಪಡೆಯುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರು ಶಾಮೀಲಾಗಿದ್ದಾರೆ ಎಂದು ಆರೋಪಿಸಿ ಸಿದ್ದರಾಮಯ್ಯ ವಿರುದ್ಧ ಈ ಹಿಂದೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಅವರು ಬುಧವಾರ ಈ ಹೊಸ ದೂರು ದಾಖಲಿಸಿದ್ದಾರೆ.

ಜುಲೈ 26, 2024 ರಂದು ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಪತ್ನಿ ಪಾರ್ವತಿ ಅವರು ಜೂನ್ 23, 2014 ರಂದು ಮುಡಾ ಆಯುಕ್ತರಿಗೆ ಬರೆದ ಪತ್ರವನ್ನು ಬಿಡುಗಡೆ ಮಾಡಿದ್ದಾರೆ ಎಂದು ಕೃಷ್ಣ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಪತ್ರದ ಎರಡನೇ ಪುಟದಲ್ಲಿ ಕೆಲವು ಪದಗಳನ್ನು ಅಸ್ಪಷ್ಟಗೊಳಿಸಲು ವೈಟ್ನರ್ ಬಳಸಿರುವುದು ತೀವ್ರ ಅನುಮಾನಕ್ಕೆ ಕಾರಣವಾಗಿತ್ತು. ಪತ್ರಿಕಾಗೋಷ್ಠಿಯ ನಂತರ, ಸಿಎಂ ಸಿದ್ದರಾಮಯ್ಯ ಅವರು ಆಗಸ್ಟ್ 26, 2024 ರಂದು ವಿಡಿಯೋ ಕ್ಲಿಪ್ ವೊಂದನ್ನು ಟ್ವೀಟ್ ಮಾಡಿ, ವೈಟ್ನರ್ ಹಿಂದೆ ಏನಿತ್ತು ಎಂಬುದನ್ನು ವಿವರಿಸಿದ್ದರು. ಅರದಲ್ಲಿರುವ ಪಾರ್ವತಿ ಅವರ ಸಹಿಗೂ ನಾವು ಮಾಹಿತಿ ಹಕ್ಕಿನಡಿ ಪಡೆದಕೊಂಡ ಅದೇ ಪತ್ರದಲ್ಲಿರುವ ಸಹಿಗೂ ವ್ಯತ್ಯಾಸಗಳಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಎರಡು ಪತ್ರಗಳ ಸಹಿಗಳಲ್ಲಿ ನಕಲಿಯನ್ನು ಸೂಚಿಸುವ ಒಂಬತ್ತು ಪ್ರಮುಖ ವ್ಯತ್ಯಾಸಗಳಿವೆ. ವಿವಿಧ ಅಕ್ಷರಗಳಲ್ಲಿ ಭಿನ್ನತೆ ಕಂಡುಬಂದಿದೆ. ಸಹಿಗಳ ಪಕ್ಕದಲ್ಲಿರುವ ಗುರುತುಗಳಲ್ಲಿನ ವ್ಯತ್ಯಾಸಗಳಿವ. ಈ ವ್ಯತ್ಯಾಸಗಳು ಮೂಲ, ಅಧಿಕೃತ ದಾಖಲೆಗಳನ್ನು ಬದಲಿಸಿ ಸುಳ್ಳು ದಾಖಲೆ ಸೃಷ್ಟಿಸಿ ಅಧಿಕೃತ ದಾಖಲೆಗಳಲ್ಲಿ ಸೇರಿಸಿರುವುದನ್ನು ಸೂಚಿಸುತ್ತವೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದ ವಿಡಿಯೋದಲ್ಲಿ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ ಅವರು ಚರ್ಚಿಸುತ್ತಿರುವ ಧ್ವನಿ ಕೇಳಿಸುತ್ತಿದೆ.

ಪಾರ್ವತಿ ಸಿದ್ದರಾಮಯ್ಯ, ಎಂ.ಲಕ್ಷ್ಮಣ ಮತ್ತು ಭಾಗಿಯಾಗಿರುವ ಇತರೆ ಯಾವುದೇ ವ್ಯಕ್ತಿಗಳ ವಿರುದ್ಧ ದಾಖಲೆಗಳನ್ನು ನಿರ್ಮಿಸುವುದು, ಮೂಲ ದಾಖಲೆಗಳನ್ನು ನಾಶಪಡಿಸುವುದು ಮತ್ತು ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪ್ರಕರಣ ದಾಖಲಿಸುವಂತೆ ಲಕ್ಷ್ಮೀಪುರಂ ಪೊಲೀಸರಿಗೆ ಮನವಿ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT