ರಾಜ್ಯ

ಎಡಗೈಗೆ ಕ್ರೇಪ್ ಬ್ಯಾಂಡ್ ಧರಿಸಿ ಬಳ್ಳಾರಿ ಜೈಲಿಗೆ ದರ್ಶನ್ ಎಂಟ್ರಿ: 'ದಾಸ'ನ ನೋಡಲು ಬಂದಿದ್ದ ಅಭಿಮಾನಿಗಳಿಗೆ ಪೊಲೀಸರ ಲಾಠಿ ರುಚಿ!

ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಿಂದ ಅವರನ್ನು ಕರೆದುಕೊಂಡು ಹೋಗಲಾಯಿತು. ಸುಮಾರು ಐದೂವರೆ ಗಂಟೆಗಳ ಪ್ರಯಾಣದ ಬಳಿಕ ಅವರನ್ನು ಬಳ್ಳಾರಿಗೆ ತಲುಪಿದ್ದಾರೆ.

ಬಳ್ಳಾರಿ: ಬೆಂಗಳೂರು ಪರಪ್ಪನ ಅಗ್ರಹಾರದಲ್ಲಿ ವಿಶೇಷ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇಲೆ ಶಿಫ್ಟ್ ಆದ ಅಭಿಮಾನಿಗಳ ಪಾಲಿನ 'ದಾಸ' ದರ್ಶನ್ ಕೊನೆಗೂ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿದ್ದಾರೆ. ಇಂದು ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ಬಳ್ಳಾರಿ ಕೇಂದ್ರ ಕಾರಾಗೃಹವನ್ನು ಸಾಮಾನ್ಯ ಕೈದಿಯಂತೆ ಪ್ರವೇಶಿಸಿದ್ದಾರೆ.

ಕಪ್ಪು ಟೀ ಶರ್ಟ್ ತೊಟ್ಟು, ಎಡಗೈಗೆ ಕ್ರೇಪ್ ಬ್ಯಾಂಡ್ ಧರಿಸಿ ಬೆಡ್ ಶೀಟ್ , ಬಲಗೈಯಲ್ಲಿ ನೀರಿನ ಬಾಟಲ್ ಹಿಡಿದುಕೊಂಡು ದರ್ಶನ್ ಜೈಲಿನೊಳಗೆ ಪ್ರವೇಶಿಸಿದ್ದಾರೆ. ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಿಂದ ಅವರನ್ನು ಕರೆದುಕೊಂಡು ಹೋಗಲಾಯಿತು. ಸುಮಾರು ಐದೂವರೆ ಗಂಟೆಗಳ ಪ್ರಯಾಣದ ಬಳಿಕ ಅವರನ್ನು ಬಳ್ಳಾರಿಗೆ ತಲುಪಿದ್ದಾರೆ.

ಬಳ್ಳಾರಿ ಕಾರಾಗೃಹದ ಸೆಲ್ ನಂಬರ್ 15ರಲ್ಲಿ ಅವರನ್ನು ಇಡಲಾಗುತ್ತಿದೆ.

ಅಭಿಮಾನಿಗಳಿಗೆ ಪೊಲೀಸರಿಂದ ಲಾಠಿ ರುಚಿ: ಹೇಳಿಕೇಳಿ ಉತ್ತರ ಕರ್ನಾಟಕ ಭಾಗದಲ್ಲಿ ನಟ ದರ್ಶನ್ ಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ತಮ್ಮ ನೆಚ್ಚಿನ ನಟ ಬರುತ್ತಿದ್ದಾರೆ ಎಂದು ಅಭಿಮಾನಿಗಳು ಕಾರಾಗೃಹದ ಪಕ್ಕ ಬೆಳಗ್ಗೆಯಿಂದಲೇ ಕಾದುಕುಳಿತಿದ್ದರು. ಅಲ್ಲಿ ಸೇರಿದ್ದ ಜನರನ್ನು, ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿ ಚದುರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT