ಸ್ಯಾಂಟ್ರೋ ರವಿ ಮತ್ತು ಕೆ. ಸುಧಾಕರ್ 
ರಾಜ್ಯ

ಬೊಮ್ಮಾಯಿ ತಡೆಯಾಜ್ಞೆ ತರಲು ಕೆ.ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿಯೇ? ಯಾವ ಸುದ್ದಿಗೆ ಮಾಜಿ ಸಿಎಂ ಈ ಪರಿ ಬೆದರುತ್ತಿರುವುದು?

ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೋರ್ಟಿನಿಂದ ತಡೆಯಾಜ್ಞೆ ತರುವುದಕ್ಕೆ ಕಾರಣ ಏನು? ಯಾರು ಕಾರಣ? ಎಂದು ಪ್ರಶ್ನಿಸಿದ್ದಾರೆ. ಈ ತಡೆಯಾಜ್ಞೆಗೆ ಕೆ.ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿ ಕಾರಣವೇ?

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರಿ ಕೋರ್ಟ್‌ ಮೆಟ್ಟಿಲೇರಿದ್ದು ಈ ಬಗ್ಗೆ ರಾಜ್ಯ ಕಾಂಗ್ರೆಸ್‌ ಅನುಮಾನ ವ್ಯಕ್ತಪಡಿಸಿದೆ. ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ಹೇಳಿಕೆ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಸಿಟಿ ಸಿವಿಲ್​ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ನಗರದ ಸಿಟಿ ಸಿವಿಲ್​ ಕೋರ್ಟ್​ನಲ್ಲಿ ಸಂಸದ ಬಸವರಾಜ್​ ಬೊಮ್ಮಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಾಣಿ.ಎ. ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವು ಯಾವುದೇ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಿ ಆದೇಶ ಹೊರಡಿಸಿದೆ.

ಈ ವಿಚಾರವಾಗಿ ಟ್ವೀಟ್‌ ಮೂಲಕ ಬೊಮ್ಮಾಯಿ ಅವರಿಗೆ ಟಾಂಗ್‌ ನೀಡಿರುವ ರಾಜ್ಯ ಕಾಂಗ್ರೆಸ್‌, ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೋರ್ಟಿನಿಂದ ತಡೆಯಾಜ್ಞೆ ತರುವುದಕ್ಕೆ ಕಾರಣ ಏನು? ಯಾರು ಕಾರಣ? ಎಂದು ಪ್ರಶ್ನಿಸಿದ್ದಾರೆ. ಈ ತಡೆಯಾಜ್ಞೆಗೆ ಕೆ.ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿ ಕಾರಣವೇ? ಯಾವ ಸುದ್ದಿಗೆ ಬೊಮ್ಮಾಯಿಯವರು ಈ ಪರಿ ಬೆದರುತ್ತಿರುವುದು? ಎಂದು ಪ್ರಶ್ನೆಗಳನ್ನು ಮುಂದಿಟ್ಟಿದೆ. ಮತ್ತೊಂದೆಡೆ ಬೊಮ್ಮಾಯಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆಯಾ ಎಂಬ ಮಾತುಗಳೂ ಕೇಳಿಬರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT