ಸ್ಯಾಂಟ್ರೋ ರವಿ ಮತ್ತು ಕೆ. ಸುಧಾಕರ್ 
ರಾಜ್ಯ

ಬೊಮ್ಮಾಯಿ ತಡೆಯಾಜ್ಞೆ ತರಲು ಕೆ.ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿಯೇ? ಯಾವ ಸುದ್ದಿಗೆ ಮಾಜಿ ಸಿಎಂ ಈ ಪರಿ ಬೆದರುತ್ತಿರುವುದು?

ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೋರ್ಟಿನಿಂದ ತಡೆಯಾಜ್ಞೆ ತರುವುದಕ್ಕೆ ಕಾರಣ ಏನು? ಯಾರು ಕಾರಣ? ಎಂದು ಪ್ರಶ್ನಿಸಿದ್ದಾರೆ. ಈ ತಡೆಯಾಜ್ಞೆಗೆ ಕೆ.ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿ ಕಾರಣವೇ?

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರಿ ಕೋರ್ಟ್‌ ಮೆಟ್ಟಿಲೇರಿದ್ದು ಈ ಬಗ್ಗೆ ರಾಜ್ಯ ಕಾಂಗ್ರೆಸ್‌ ಅನುಮಾನ ವ್ಯಕ್ತಪಡಿಸಿದೆ. ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ಹೇಳಿಕೆ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಸಿಟಿ ಸಿವಿಲ್​ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ನಗರದ ಸಿಟಿ ಸಿವಿಲ್​ ಕೋರ್ಟ್​ನಲ್ಲಿ ಸಂಸದ ಬಸವರಾಜ್​ ಬೊಮ್ಮಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಾಣಿ.ಎ. ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವು ಯಾವುದೇ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಿ ಆದೇಶ ಹೊರಡಿಸಿದೆ.

ಈ ವಿಚಾರವಾಗಿ ಟ್ವೀಟ್‌ ಮೂಲಕ ಬೊಮ್ಮಾಯಿ ಅವರಿಗೆ ಟಾಂಗ್‌ ನೀಡಿರುವ ರಾಜ್ಯ ಕಾಂಗ್ರೆಸ್‌, ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೋರ್ಟಿನಿಂದ ತಡೆಯಾಜ್ಞೆ ತರುವುದಕ್ಕೆ ಕಾರಣ ಏನು? ಯಾರು ಕಾರಣ? ಎಂದು ಪ್ರಶ್ನಿಸಿದ್ದಾರೆ. ಈ ತಡೆಯಾಜ್ಞೆಗೆ ಕೆ.ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿ ಕಾರಣವೇ? ಯಾವ ಸುದ್ದಿಗೆ ಬೊಮ್ಮಾಯಿಯವರು ಈ ಪರಿ ಬೆದರುತ್ತಿರುವುದು? ಎಂದು ಪ್ರಶ್ನೆಗಳನ್ನು ಮುಂದಿಟ್ಟಿದೆ. ಮತ್ತೊಂದೆಡೆ ಬೊಮ್ಮಾಯಿ ಅವರ ವಿರುದ್ಧ ಷಡ್ಯಂತ್ರ ನಡೆದಿದೆಯಾ ಎಂಬ ಮಾತುಗಳೂ ಕೇಳಿಬರುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ