ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಶಿವಕುಮಾರ್ 
ರಾಜ್ಯ

ನ್ಯಾಯಾಲಯ ಏನೇ ತೀರ್ಪು ನೀಡಿದರು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ: ಡಿ.ಕೆ ಶಿವಕುಮಾರ್

ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐ ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವ ಪ್ರಕರಣದ ಕುರಿತ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದರು. ನನಗೆ ದೇವರ ಮೇಲೆ ಮತ್ತು ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದರು

ಸಕಲೇಶಪುರ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಕಲೇಶಪುರದ ಹೆಬ್ಬನಹಳ್ಳಿ ಬಳಿ ಎತ್ತಿನಹೊಳೆ ಕಾಮಗಾರಿ ವೀಕ್ಷಣೆ ನಂತರ ಮಾತನಾಡಿದ ಅವರು, ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸಲು ಸಿಬಿಐ ಹೈಕೋರ್ಟಿಗೆ ಅರ್ಜಿ ಸಲ್ಲಿಸಿರುವ ಪ್ರಕರಣದ ಕುರಿತ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದರು. ನನಗೆ ದೇವರ ಮೇಲೆ ಮತ್ತು ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದರು.

ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಮೇಲೆ ದೂರು ದಾಖಲಾಗಿರುವ ಬಗ್ಗೆ ಮಾತನಾಡಿದ ಶಿವಕುಮಾರ್ ಸಿಎಂ ಏನು ಮಾಡಿದ್ದಾರೆ ಎಂದು ಅವರ ಮೇಲೆ ಎಲ್ಲಾ ಏಕೆ ಮುಗಿಬೀಳುತ್ತಿದ್ದಾರೋ ನನಗೆ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಏನು ಆಗುವುದಿಲ್ಲ. ಜಮೀನು ಕಳೆದುಕೊಂಡಿರುವುದಕ್ಕೆ ಪರಿಹಾರವಾಗಿ ಬಿಜೆಪಿಯವರೇ ನಿವೇಶನ ನೀಡಿದ್ದಾರೆ. ಸಿಎಂ ಅವರು ಎಲ್ಲೂ ಪ್ರಭಾವವನ್ನು ಬೀರಿಲ್ಲ, ಸಹಿಯನ್ನು ಮಾಡಿಲ್ಲ ಎಂದರು. ಜಮೀನನ್ನು ಡೀನೋಟಿಫಿಕೇಶನ್ ಮಾಡಿದ್ದಾರೆ ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಕೇಳಿದಾಗ " ನಕಲಿಗೆಲ್ಲ ನಾನು ಉತ್ತರ ಕೊಡುವುದಿಲ್ಲ. ಅಸಲಿಗೆ ಮಾತ್ರ ಉತ್ತರ ಕೊಡುತ್ತೇನೆ" ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!