ಪ್ರಜ್ವಲ್ ರೇವಣ್ಣ online desk
ರಾಜ್ಯ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ: ಕ್ಯಾಮರಾ ಮೂಲಕ ವಿಚಾರಣೆ ನಡೆಸಲು ಹೈಕೋರ್ಟ್ ಗೆ SIT ಮನವಿ

ಆರೋಪ ಮಾಡಿರುವ ಮಹಿಳೆಯರ ಗುರುತನ್ನು ಗೌಪ್ಯವಾಗಿಡುವ ಉದ್ದೇಶದಿಂದ ವಿಡಿಯೋ ಮೂಲಕ ವಿಚಾರಣೆ ನಡೆಸುವಂತೆ ಎಸ್ ಐಟಿಯನ್ನು ಪ್ರತಿನಿಧಿಸುತ್ತಿರುವ ವಿಶೇಷ ಅಭಿಯೋಜಕರಾದ ರವಿವರ್ಮ ಕುಮಾರ್ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪಗಳನ್ನು ಎದುರಿಸುತ್ತಿರುವ ಜೆಡಿಎಸ್ ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು, ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಕ್ಯಾಮರಾ ಮೂಲಕ ನಡೆಸುವಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಹೈಕೋರ್ಟ್ ಗೆ ಮನವಿ ಮಾಡಿದೆ.

ಆರೋಪ ಮಾಡಿರುವ ಮಹಿಳೆಯರ ಗುರುತನ್ನು ಗೌಪ್ಯವಾಗಿಡುವ ಉದ್ದೇಶದಿಂದ ವಿಡಿಯೋ ಮೂಲಕ ವಿಚಾರಣೆ ನಡೆಸುವಂತೆ ಎಸ್ ಐಟಿಯನ್ನು ಪ್ರತಿನಿಧಿಸುತ್ತಿರುವ ವಿಶೇಷ ಅಭಿಯೋಜಕರಾದ ರವಿವರ್ಮ ಕುಮಾರ್ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

ಈ ಮನವಿಯ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ನಿರ್ಧಾರ ಕೈಗೊಳ್ಳಬೇಕೆಂದು ವಿಚಾರಣೆ ವೇಳೆ ನ್ಯಾ.ಎಂ ನಾಗಪ್ರಸನ್ನ ಹೇಳಿದ್ದಾರೆ. ಪ್ರಜ್ವಲ್ ಪರ ವಕೀಲರು ಇನ್ನಷ್ಟು ಕಾಲಾವಕಾಶ ಕೋರಿದರು. ಪರಿಣಾಮವಾಗಿ, ಇದು ವಿನಾಯತಿ ನೀಡಬಹುದಾದ ಪ್ರಕರಣವಲ್ಲ ಎಂದು ಗಮನಿಸಿದ ನ್ಯಾಯಾಲಯವು ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಿತು.

ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಿಂದ ಮರಳಿದ ನಂತರ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಮೇ 31 ರಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೇ ಅಪರಾಧ ತನಿಖಾ ಇಲಾಖೆಯ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಮತ್ತು ಅವರ ತಂದೆ ಮತ್ತು ಶಾಸಕ ಹೆಚ್‌ಡಿ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಪಟ್ಟಿ ಸಲ್ಲಿಸಿತ್ತು.

ಸುಮಾರು 150 ಸಾಕ್ಷಿಗಳ ಹೇಳಿಕೆಗಳನ್ನು ಒಳಗೊಂಡ ಚಾರ್ಜ್ ಶೀಟ್ ನ್ನು ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದೆ ಮತ್ತು ಇದು ಕುಟುಂಬದ ಮನೆಯ ಸಹಾಯಕಿಯ ಮೇಲೆ ಲೈಂಗಿಕ ದೌರ್ಜನ್ಯವನ್ನು ಒಳಗೊಂಡಿರುವ ಪ್ರಕರಣಗಳಲ್ಲಿ ಒಂದಕ್ಕೆ ಸಂಬಂಧಿಸಿದೆ. ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354 ಮತ್ತು 354 (ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದರೆ, ಅವರ 33 ವರ್ಷದ ಮಗ ಪ್ರಜ್ವಲ್ ವಿರುದ್ಧ IPCಯ ಸೆಕ್ಷನ್ 376, 376 (2) (ಕೆ), 354, 354 (ಎ) ಮತ್ತು 354 (ಬಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ತಂದೆ-ಮಗ ಇಬ್ಬರ ವಿರುದ್ಧ ಮೊದಲ ದೂರನ್ನು ಅವರ ನಿವಾಸದಲ್ಲಿ ಮನೆಯ ಸಹಾಯಕರು ನೀಡಿದ ದೂರಿನ ಆಧಾರದ ಮೇಲೆ ದಾಖಲಿಸಲಾಗಿದೆ. ಶಾಸಕರ ಪತ್ನಿ ಭವಾನಿ ಅವರ ಸಂಬಂಧಿಯೂ ಆಗಿರುವ ಸಂತ್ರಸ್ತೆ ತಮಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಮಮತಾಗೆ ಬಿಗ್ ಶಾಕ್; TMC ವಿಭಜನೆ? ತೃಣಮೂಲ ಕಾಂಗ್ರೆಸ್ ನ 50 ಶಾಸಕರು, 20 ಸಂಸದರು ಬಿಜೆಪಿ ಸೇರ್ಪಡೆ?

KPCCಗೆ ಮೇಜರ್ ಸರ್ಜರಿ: ನಟಿ ಭಾವನಾ, ನಿಕೇತ್ ರಾಜ್ ಮೌರ್ಯ ಸೇರಿ 31 ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ನಾವು ಕಳವಳ ವ್ಯಕ್ತಪಡಿಸಿದೆವು, ಆದ್ರೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದರು: ಸಚಿವ ಎಚ್.ಕೆ.ಪಾಟೀಲ್

SCROLL FOR NEXT