ವಿದ್ಯುತ್ ಸಂಪರ್ಕ(ಸಾಂಕೇತಿಕ ಚಿತ್ರ) 
ರಾಜ್ಯ

30 ದಿನಗಳಲ್ಲಿ ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತ: ಬೆಸ್ಕಾಂ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ(ಕೆಇಆರ್‌ಸಿ) ಶಿಫಾರಸಿನಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆಪ್ಟೆಂಬರ್ 1ರಿಂದ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದಾಗಿ ಬೆಸ್ಕಾಂ ತಿಳಿಸಿದೆ.

ಬೆಂಗಳೂರು: ಗ್ರಾಹಕರು ಬಿಲ್‌ಗಳನ್ನು ಸ್ವೀಕರಿಸಿದ 30 ದಿನಗಳಲ್ಲಿ ವಿದ್ಯುತ್ ಶುಲ್ಕವನ್ನು ಪಾವತಿಸಲು ವಿಫಲವಾದರೆ ಅಥವಾ ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದಿದ್ದರೆ ಸೆಪ್ಟೆಂಬರ್ 1 ರಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ಶುಕ್ರವಾರ ತಿಳಿಸಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ(ಕೆಇಆರ್‌ಸಿ) ಶಿಫಾರಸಿನಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆಪ್ಟೆಂಬರ್ 1ರಿಂದ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದಾಗಿ ಬೆಸ್ಕಾಂ ತಿಳಿಸಿದೆ.

ಮನೆ ಬಳಕೆ ಮತ್ತು ವಾಣಿಜ್ಯ ಬಳಕೆ ಗ್ರಾಹಕರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಬಿಲ್‌ಗಳನ್ನು ನಿಗದಿತ 30 ದಿನಗಳಲ್ಲಿ ಪಾವತಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಬೆಸ್ಕಾಂ ಹೇಳಿದೆ.

30 ದಿನಗಳಲ್ಲಿ ಬಿಲ್ ಪಾವತಿಸಲು ವಿಫಲವಾದರೆ ಮೀಟರ್ ರೀಡಿಂಗ್ ದಿನದಂದು ಸಂಪರ್ಕ ಕಡಿತಗೊಳ್ಳುತ್ತದೆ. ಈ ಅನಾನುಕೂಲತೆಯನ್ನು ತಪ್ಪಿಸಲು ಎಲ್ಲಾ ಗ್ರಾಹಕರು ತಮ್ಮ ಬಿಲ್‌ಗಳನ್ನು ಸಮಯಕ್ಕೆ ಸರಿಯಾಗಿ ಪಾವತಿಸಬೇಕು ಎಂದು ಬೆಸ್ಕಾಂ ಕೇಳಿಕೊಂಡಿದೆ.

ಪ್ರಸ್ತುತ, ಪ್ರತಿ ತಿಂಗಳ ಮೊದಲ 15 ದಿನಗಳಲ್ಲಿ ಮೀಟರ್ ರೀಡಿಂಗ್ ನಂತರ, ಮೀಟರ್ ರೀಡರ್‌ಗಳು, ಲೈನ್‌ಮ್ಯಾನ್‌ಗಳು, ಬಾಕಿ ಬಿಲ್‌ಗಳಿರುವ ಗ್ರಾಹಕರ ಮನೆಗೆ ತಮ್ಮ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಮತ್ತೊಮ್ಮೆ ಭೇಟಿ ನೀಡುತ್ತಿದ್ದರು.

ಆದರೆ ಸೆಪ್ಟೆಂಬರ್ 1 ರಿಂದ ಮೀಟರ್ ರೀಡರ್‌ಗಳೊಂದಿಗೆ ಬರುವ ಲೈನ್‌ಮೆನ್‌ಗಳು ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸರಬರಾಜನ್ನು ಬಿಲ್ ನೀಡುವ ಸಮಯದಲ್ಲೇ ಸ್ಥಗಿತಗೊಳಿಸಲಿದ್ದಾರೆ.

ಬಡ್ಡಿ ರಹಿತವಾಗಿ ನಿಗದಿತ ದಿನಾಂಕದವರೆಗೆ ವಿದ್ಯುತ್ ಬಿಲ್ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದ್ದು, ನಿಗದಿತ ದಿನಾಂಕದ ನಂತರ ಬಡ್ಡಿ ಸಹಿತ ಪಾವತಿಗೆ ಹೆಚ್ಚುವರಿ 15 ದಿನಗಳ ಕಾಲಾವಕಾಶವಿದೆ ಎಂದು ವಿದ್ಯುತ್ ಕಂಪನಿ ತಿಳಿಸಿದೆ.

ಆದಾಗ್ಯೂ, ಬಿಲ್ ಪಾವತಿಸದೇ ಇದ್ದರೆ, ಮುಂದಿನ ಮೀಟರ್ ರೀಡಿಂಗ್ ದಿನದಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ಹೆಚ್ಚುವರಿ ಭದ್ರತಾ ಠೇವಣಿ ಸೇರಿದಂತೆ ಬಾಕಿ ಮೊತ್ತ 100 ರೂ. ಮೀರಿದರೆ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT