ವಿದ್ಯುತ್ ಸಂಪರ್ಕ(ಸಾಂಕೇತಿಕ ಚಿತ್ರ) 
ರಾಜ್ಯ

30 ದಿನಗಳಲ್ಲಿ ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತ: ಬೆಸ್ಕಾಂ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ(ಕೆಇಆರ್‌ಸಿ) ಶಿಫಾರಸಿನಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆಪ್ಟೆಂಬರ್ 1ರಿಂದ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದಾಗಿ ಬೆಸ್ಕಾಂ ತಿಳಿಸಿದೆ.

ಬೆಂಗಳೂರು: ಗ್ರಾಹಕರು ಬಿಲ್‌ಗಳನ್ನು ಸ್ವೀಕರಿಸಿದ 30 ದಿನಗಳಲ್ಲಿ ವಿದ್ಯುತ್ ಶುಲ್ಕವನ್ನು ಪಾವತಿಸಲು ವಿಫಲವಾದರೆ ಅಥವಾ ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದಿದ್ದರೆ ಸೆಪ್ಟೆಂಬರ್ 1 ರಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ(ಬೆಸ್ಕಾಂ) ಶುಕ್ರವಾರ ತಿಳಿಸಿದೆ.

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ(ಕೆಇಆರ್‌ಸಿ) ಶಿಫಾರಸಿನಂತೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆಪ್ಟೆಂಬರ್ 1ರಿಂದ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದಾಗಿ ಬೆಸ್ಕಾಂ ತಿಳಿಸಿದೆ.

ಮನೆ ಬಳಕೆ ಮತ್ತು ವಾಣಿಜ್ಯ ಬಳಕೆ ಗ್ರಾಹಕರು, ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕ ಹೊಂದಿರುವ ಗ್ರಾಹಕರು ತಮ್ಮ ಬಿಲ್‌ಗಳನ್ನು ನಿಗದಿತ 30 ದಿನಗಳಲ್ಲಿ ಪಾವತಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಬೆಸ್ಕಾಂ ಹೇಳಿದೆ.

30 ದಿನಗಳಲ್ಲಿ ಬಿಲ್ ಪಾವತಿಸಲು ವಿಫಲವಾದರೆ ಮೀಟರ್ ರೀಡಿಂಗ್ ದಿನದಂದು ಸಂಪರ್ಕ ಕಡಿತಗೊಳ್ಳುತ್ತದೆ. ಈ ಅನಾನುಕೂಲತೆಯನ್ನು ತಪ್ಪಿಸಲು ಎಲ್ಲಾ ಗ್ರಾಹಕರು ತಮ್ಮ ಬಿಲ್‌ಗಳನ್ನು ಸಮಯಕ್ಕೆ ಸರಿಯಾಗಿ ಪಾವತಿಸಬೇಕು ಎಂದು ಬೆಸ್ಕಾಂ ಕೇಳಿಕೊಂಡಿದೆ.

ಪ್ರಸ್ತುತ, ಪ್ರತಿ ತಿಂಗಳ ಮೊದಲ 15 ದಿನಗಳಲ್ಲಿ ಮೀಟರ್ ರೀಡಿಂಗ್ ನಂತರ, ಮೀಟರ್ ರೀಡರ್‌ಗಳು, ಲೈನ್‌ಮ್ಯಾನ್‌ಗಳು, ಬಾಕಿ ಬಿಲ್‌ಗಳಿರುವ ಗ್ರಾಹಕರ ಮನೆಗೆ ತಮ್ಮ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಮತ್ತೊಮ್ಮೆ ಭೇಟಿ ನೀಡುತ್ತಿದ್ದರು.

ಆದರೆ ಸೆಪ್ಟೆಂಬರ್ 1 ರಿಂದ ಮೀಟರ್ ರೀಡರ್‌ಗಳೊಂದಿಗೆ ಬರುವ ಲೈನ್‌ಮೆನ್‌ಗಳು ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸರಬರಾಜನ್ನು ಬಿಲ್ ನೀಡುವ ಸಮಯದಲ್ಲೇ ಸ್ಥಗಿತಗೊಳಿಸಲಿದ್ದಾರೆ.

ಬಡ್ಡಿ ರಹಿತವಾಗಿ ನಿಗದಿತ ದಿನಾಂಕದವರೆಗೆ ವಿದ್ಯುತ್ ಬಿಲ್ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗಿದ್ದು, ನಿಗದಿತ ದಿನಾಂಕದ ನಂತರ ಬಡ್ಡಿ ಸಹಿತ ಪಾವತಿಗೆ ಹೆಚ್ಚುವರಿ 15 ದಿನಗಳ ಕಾಲಾವಕಾಶವಿದೆ ಎಂದು ವಿದ್ಯುತ್ ಕಂಪನಿ ತಿಳಿಸಿದೆ.

ಆದಾಗ್ಯೂ, ಬಿಲ್ ಪಾವತಿಸದೇ ಇದ್ದರೆ, ಮುಂದಿನ ಮೀಟರ್ ರೀಡಿಂಗ್ ದಿನದಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ಹೆಚ್ಚುವರಿ ಭದ್ರತಾ ಠೇವಣಿ ಸೇರಿದಂತೆ ಬಾಕಿ ಮೊತ್ತ 100 ರೂ. ಮೀರಿದರೆ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT