ಮಗುಚಿಬಿದ್ದ ಟ್ಯಾಂಕರ್ ಲಾರಿ  
ರಾಜ್ಯ

ಸಲ್ಫ್ಯೂರಿಕ್ ಆಸಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಕಾಲುವೆಗೆ ಮಗುಚಿಬಿದ್ದು ಅಪಘಾತ; ಗ್ರಾಮಸ್ಥರಲ್ಲಿ ಆತಂಕ

ಆಂಧ್ರದಿಂದ ಗೋವಾದತ್ತ ಸಲ್ಪರಿಕ್ ಆ್ಯಸಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಅಂಚಿಗೆ ಪಲ್ಪಿಯಾಗಿಯಾಗಿದೆ.

ಅಂಕೋಲಾ(ಕೋಲಾರ): ಚಾಲಕನ ನಿಯಂತ್ರಣ ತಪ್ಪಿ ಆ್ಯಸಿಡ್ ಟ್ಯಾಂಕರ್‌ವೊಂದು ಕಾಲುವೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರ ಕಂಚಿನಬಾಗಿಲು ಬಳಿ ನಿನ್ನೆ ಶುಕ್ರವಾರ ಸಾಯಂಕಾಲ ನಡೆದಿದೆ.

ಆಂಧ್ರದಿಂದ ಗೋವಾದತ್ತ ಸಲ್ಪರಿಕ್ ಆ್ಯಸಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಅಂಚಿಗೆ ಪಲ್ಪಿಯಾಗಿಯಾಗಿದೆ. ಈ ಆಕಸ್ಮಿಕ ರಸ್ತೆ ಅವಘಡದಲ್ಲಿ ಸ್ವಲ್ಪರಿಕ್ ಆಸಿಡ್ ತುಂಬಿದ್ದ ಟ್ಯಾಂಕರ್ , ಲಾರಿ ಕ್ಯಾಬಿನ್ ನಿಂದ ಬೇರ್ಪಟ್ಟು ,ಜಖಂಗೊಂಡು ಸೋರಿಕೆಯಾಗಲಾರಂಭಿಸಿದೆ.ಸುದ್ದಿ ತಿಳಿದ ಅಗ್ನಿಶಾಮಕ , ಪೊಲೀಸ್ ಮತ್ತಿತರ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲನೆ ಕೈಗೊಂಡು ಸುರಕ್ಷತಾ ಕ್ರಮಗಳಿಗೆ ಒತ್ತು ನೀಡಿದ್ದಾರೆ.

ಈ ವೇಳೆ ಕೆಲಕಾಲ ಹುಬ್ಬಳ್ಳಿ – ಅಂಕೋಲಾ ಮಾರ್ಗ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತರೆ ವಾಹನಗಳ ಸುಗಮ ಸಂಚಾರಕ್ಕೆ ವ್ಯತ್ಯಯವಾಗಿತ್ತು. ಸಲ್ಫರಿಕ್ ಆಸಿಡ್ ಮಾನವ ಇಲ್ಲವೇ ಇತರೇ ಜಾನುವಾರುಗಳ ಅಂಗಾಂಗಗಳಿಗೆ ತಗುಲಿದರೆ ಸುಡುವ ಇಲ್ಲವೇ ಇನ್ನಿತರೆ ರೀತಿಯ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸುಮಾರು 30 ಕ್ಕೂ ಹೆಚ್ಚು ಟನ್ ಪ್ರಮಾಣದ ಆಸಿಡ್ ನ್ನು ಅಪಾಯವಾಗದಂತೆ ಹರಿಯಬಿಡುವುದು ಸವಾಲಿನ ಕೆಲಸವಾಗಿತ್ತು.

ಹೆದ್ದಾರಿ ಗಸ್ತು ವಾಹನ ಸಿಬ್ಬಂದಿ ಇತರೆ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದು, ಈಗ ಹೆದ್ದಾರಿಯು ಸಂಚಾರಕ್ಕೆ ಮುಕ್ತವಾಗಿದೆ. ಇತರೆ ವಾಹನಗಳು ಹೆದ್ದಾರಿ ಸಂಚಾರದ ವೇಳೆ ಸುರಕ್ಷಿತ ಚಾಲನೆಗೆ ಆದ್ಯತೆ ನೀಡಬೇಕಿದೆ. ಆಸಿಡ್ ಲಾರಿ ರಸ್ತೆ ಅಪಘಾತದಲ್ಲಿ ಅದೇ ವಾಹನದ ಚಾಲಕನಿಗೂ ಸಣ್ಣಪುಟ್ಟ ಗಾಯ ನೋವುಗಳಾಗಿದ್ದು,ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT