ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಳೆ, ಗಾಳಿಯಿಂದ ಬೀಳುವ ಮರ ತೆರವಿಗೆ 28 ತಂಡ ರಚಿಸಿದ BBMP

ಎಂಟು ಸದಸ್ಯರು ಮತ್ತು ತೆರವು ವಾಹನ ಒಳಗೊಂಡಿರುವ 'ಮರಗಳ ವ್ಯವಸ್ಥಿತ ನಿರ್ವಹಣಾ ತಂಡ' ಮಳೆಗಾಲದಲ್ಲಿ ದುರ್ಬಲಗೊಳ್ಳಬಹುದಾದ ಹಳೆಯ ಮರಗಳು ಮತ್ತು ದುರ್ಬಲವಾದ ರೆಂಬೆ-ಕೊಂಬೆಗಳನ್ನು ಗುರುತಿಸುವ ಕಾರ್ಯ ಮಾಡುತ್ತದೆ.

ಬೆಂಗಳೂರು: ಮಳೆ ಮತ್ತು ಗಾಳಿಯಿಂದ ಬಿದ್ದ ಮರಗಳನ್ನು ತ್ವರಿತವಾಗಿ ನಿರ್ವಹಿಸಲು ಮತ್ತು ತೆರವುಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 28 ತಂಡಗಳನ್ನು ರಚಿಸಿದೆ.

ಎಂಟು ಸದಸ್ಯರು ಮತ್ತು ತೆರವು ವಾಹನ ಒಳಗೊಂಡಿರುವ 'ಮರಗಳ ವ್ಯವಸ್ಥಿತ ನಿರ್ವಹಣಾ ತಂಡ' ಮಳೆಗಾಲದಲ್ಲಿ ದುರ್ಬಲಗೊಳ್ಳಬಹುದಾದ ಹಳೆಯ ಮರಗಳು ಮತ್ತು ದುರ್ಬಲವಾದ ರೆಂಬೆ-ಕೊಂಬೆಗಳನ್ನು ಗುರುತಿಸುವ ಕಾರ್ಯ ಮಾಡುತ್ತದೆ.

ಮಳೆಗಾಲದಲ್ಲಿ ಗಾಳಿ ಹೆಚ್ಚಾಗಿ ನಗರದ ಹಲವೆಡೆ ಮರಗಳು, ರೆಂಬೆ ಕೊಂಬೆಗಳು ಬೀಳುವುದರಿಂದ ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ವಾಹನಗಳು ಸೇರಿದಂತೆ ಆಸ್ತಿಪಾಸ್ತಿಗೆ ಹಾನಿಯಾಗುತ್ತಿದೆ. ಹೀಗಾಗಿ ಮರಗಳ ವ್ಯವಸ್ಥಿತ ನಿರ್ವಹಣೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಈ ತಂಡಗಳು ಮಳೆ-ಗಾಳಿಯಿಂದ ಬಿದ್ದ ಮರಗಳನ್ನು ತೆರವುಗೊಳಿಸುವುದರ ಜೊತೆಗೆ ತಮ್ಮ ನಿಯೋಜಿತ ಪ್ರದೇಶಗಳಲ್ಲಿ Sahaaya ಆ್ಯಪ್ ಮತ್ತು BBMP ಸಹಾಯವಾಣಿಗಳ ಮೂಲಕ ಸಲ್ಲಿಸಲಾದ ಮರಗಳಿಗೆ ಸಂಬಂಧಿಸಿದ ದೂರುಗಳನ್ನು ಪರಿಹರಿಸುತ್ತವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT