ಸಾಂದರ್ಭಿಕ ಚಿತ್ರ 
ರಾಜ್ಯ

ಕಾಂಗ್ರೆಸ್ ಆಡಳಿತದಲ್ಲಿ ಹೆಚ್ಚಿನ ಕಮಿಷನ್ ಬೇಡಿಕೆ: ತುಮಕೂರು ಗುತ್ತಿಗೆದಾರರ ಆರೋಪ

ಕಮಿಷನ್ ಹಾವಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳದಿದ್ದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ನಿಲ್ಲಿಸಿ ಹೋರಾಟ ನಡೆಸುವುದಾಗಿ ಬಲರಾಮಯ್ಯ ಮತ್ತಿತರ ಸಂಘದ ಪದಾಧಿಕಾರಿಗಳು ಹೇಳಿದರು.

ತುಮಕೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಗುತ್ತಿಗೆದಾರರು ಶೇ.40ಕ್ಕೂ ಹೆಚ್ಚು ಕಮಿಷನ್‌ ನೀಡಿ ಬಿಲ್‌ ಮಂಜೂರು ಮಾಡಿಕೊಳ್ಳಬೇಕಾಗಿದೆ ಎಂದು ತುಮಕೂರು ಜಿಲ್ಲಾ ಸಿವಿಲ್‌ ಗುತ್ತಿಗೆದಾರರ ಸಂಘದ ಅಧ್ಯಕ್ಷ, ಹಿರಿಯ ಕಾಂಗ್ರೆಸ್‌ ಮುಖಂಡ ಎ.ಡಿ.ಬಲರಾಮಯ್ಯ ಶುಕ್ರವಾರ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಅಡಿಯಲ್ಲಿ ಮಾಡಿದ ಕಾಮಗಾರಿಗಳಿಗೆ ತಮ್ಮ ಬಿಲ್ ಕ್ಲಿಯರ್ ಮಾಡಲು ಆರೋಪಿಗಳು ಹೆಚ್ಚಿನ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಸ್ಥಳೀಯ ಗುತ್ತಿಗೆದಾರರು ನೀಡಿದ ದೂರಿನ ಮೇರೆಗೆ ಚಿಕ್ಕನಾಯಕನಹಳ್ಳಿಯಲ್ಲಿ ಇತ್ತೀಚೆಗೆ ಲೋಕಾಯುಕ್ತ ಪೊಲೀಸರು ಕೆಲವು ಎಂಜಿನಿಯರ್‌ಗಳ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ ಎಂದು ತಿಳಿಸಿದರು.

ಕಮಿಷನ್ ನೀಡದಿದ್ದರೆ ಗುತ್ತಿಗೆದಾರರ ಬಿಲ್‌ ಕ್ಲಿಯರ್ ಮಾಡದಂತೆ ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು 2013ರ ವಿಧಾನಸಭೆ ಚುನಾವಣೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿದ್ದ ಬಲರಾಮಯ್ಯ ಆರೋಪಿಸಿದರು.

ಕಮಿಷನ್ ಹಾವಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳದಿದ್ದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ನಿಲ್ಲಿಸಿ ಹೋರಾಟ ನಡೆಸುವುದಾಗಿ ಬಲರಾಮಯ್ಯ ಮತ್ತಿತರ ಸಂಘದ ಪದಾಧಿಕಾರಿಗಳು ಹೇಳಿದರು. ಬಿಜೆಪಿ ಆಡಳಿತದಲ್ಲಿ ಶೇ.40ರಷ್ಟು ಕಮಿಷನ್ ನೀಡಲಾಗಿತ್ತು. ಈಗ ಶೇ.40ಕ್ಕಿಂತ ಹೆಚ್ಚಿದೆ' ಎಂದು ಬಲರಾಮಯ್ಯ ಕಿಡಿಕಾರಿದ್ದಾರೆ.

ಈಗ ಭ್ರಷ್ಟಾಚಾರ ಹೆಚ್ಚಾಗಿದೆ: ವಿಧಾನಸಭೆ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ಭರವಸೆ ನೀಡಿದ್ದರು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದರೂ ಪರಿಸ್ಥಿತಿ ಬದಲಾಗಿಲ್ಲ. ಭ್ರಷ್ಟಾಚಾರ ಕಡಿಮೆಯಾಗುವ ಬದಲು ಹೆಚ್ಚಾಗಿದೆ" ಎಂದು ಅವರು ಹೇಳಿದರು.

"ಹಿಂದೆ ಹಿರಿತನದ ಆಧಾರದ ಮೇಲೆ ಎಲ್ಒಸಿ ನೀಡಲಾಗಿತ್ತು. ಆದರೆ ಈಗ ಕಮಿಷನ್ ಕೊಡುವವರಿಗೆ ಮಾತ್ರ ಬಿಲ್ ಕ್ಲಿಯರ್ ಮಾಡುವಂತೆ ಸಚಿವರು, ಶಾಸಕರು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ. ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿನ ಮಾಡಲಾದ ಕಾಮಗಾರಿಗಳ ಬಿಲ್‌ ಕ್ಲಿಯರ್ ಮಾಡಲು ಎಂಜಿನಿಯರ್‌ಗಳ ಮೂಲಕ ಜಿಪಂ ಅಧಿಕಾರಿಗಳಿಗೆ ಲಂಚ ನೀಡಬೇಕಾಗಿದೆ ಎಂದು ಪದಾಧಿಕಾರಿಗಳು ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT