ಸಾಂದರ್ಭಿಕ ಚಿತ್ರ 
ರಾಜ್ಯ

ಕಾಂಗ್ರೆಸ್ ಆಡಳಿತದಲ್ಲಿ ಹೆಚ್ಚಿನ ಕಮಿಷನ್ ಬೇಡಿಕೆ: ತುಮಕೂರು ಗುತ್ತಿಗೆದಾರರ ಆರೋಪ

ಕಮಿಷನ್ ಹಾವಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳದಿದ್ದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ನಿಲ್ಲಿಸಿ ಹೋರಾಟ ನಡೆಸುವುದಾಗಿ ಬಲರಾಮಯ್ಯ ಮತ್ತಿತರ ಸಂಘದ ಪದಾಧಿಕಾರಿಗಳು ಹೇಳಿದರು.

ತುಮಕೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಗುತ್ತಿಗೆದಾರರು ಶೇ.40ಕ್ಕೂ ಹೆಚ್ಚು ಕಮಿಷನ್‌ ನೀಡಿ ಬಿಲ್‌ ಮಂಜೂರು ಮಾಡಿಕೊಳ್ಳಬೇಕಾಗಿದೆ ಎಂದು ತುಮಕೂರು ಜಿಲ್ಲಾ ಸಿವಿಲ್‌ ಗುತ್ತಿಗೆದಾರರ ಸಂಘದ ಅಧ್ಯಕ್ಷ, ಹಿರಿಯ ಕಾಂಗ್ರೆಸ್‌ ಮುಖಂಡ ಎ.ಡಿ.ಬಲರಾಮಯ್ಯ ಶುಕ್ರವಾರ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಅಡಿಯಲ್ಲಿ ಮಾಡಿದ ಕಾಮಗಾರಿಗಳಿಗೆ ತಮ್ಮ ಬಿಲ್ ಕ್ಲಿಯರ್ ಮಾಡಲು ಆರೋಪಿಗಳು ಹೆಚ್ಚಿನ ಮೊತ್ತದ ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಸ್ಥಳೀಯ ಗುತ್ತಿಗೆದಾರರು ನೀಡಿದ ದೂರಿನ ಮೇರೆಗೆ ಚಿಕ್ಕನಾಯಕನಹಳ್ಳಿಯಲ್ಲಿ ಇತ್ತೀಚೆಗೆ ಲೋಕಾಯುಕ್ತ ಪೊಲೀಸರು ಕೆಲವು ಎಂಜಿನಿಯರ್‌ಗಳ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ ಎಂದು ತಿಳಿಸಿದರು.

ಕಮಿಷನ್ ನೀಡದಿದ್ದರೆ ಗುತ್ತಿಗೆದಾರರ ಬಿಲ್‌ ಕ್ಲಿಯರ್ ಮಾಡದಂತೆ ಕಾಂಗ್ರೆಸ್ ಶಾಸಕರು ಮತ್ತು ಸಚಿವರು ಜಿಲ್ಲಾ ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು 2013ರ ವಿಧಾನಸಭೆ ಚುನಾವಣೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿದ್ದ ಬಲರಾಮಯ್ಯ ಆರೋಪಿಸಿದರು.

ಕಮಿಷನ್ ಹಾವಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳದಿದ್ದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ನಿಲ್ಲಿಸಿ ಹೋರಾಟ ನಡೆಸುವುದಾಗಿ ಬಲರಾಮಯ್ಯ ಮತ್ತಿತರ ಸಂಘದ ಪದಾಧಿಕಾರಿಗಳು ಹೇಳಿದರು. ಬಿಜೆಪಿ ಆಡಳಿತದಲ್ಲಿ ಶೇ.40ರಷ್ಟು ಕಮಿಷನ್ ನೀಡಲಾಗಿತ್ತು. ಈಗ ಶೇ.40ಕ್ಕಿಂತ ಹೆಚ್ಚಿದೆ' ಎಂದು ಬಲರಾಮಯ್ಯ ಕಿಡಿಕಾರಿದ್ದಾರೆ.

ಈಗ ಭ್ರಷ್ಟಾಚಾರ ಹೆಚ್ಚಾಗಿದೆ: ವಿಧಾನಸಭೆ ಚುನಾವಣೆಗೂ ಮುನ್ನ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದಾಗಿ ಭರವಸೆ ನೀಡಿದ್ದರು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಕಳೆದರೂ ಪರಿಸ್ಥಿತಿ ಬದಲಾಗಿಲ್ಲ. ಭ್ರಷ್ಟಾಚಾರ ಕಡಿಮೆಯಾಗುವ ಬದಲು ಹೆಚ್ಚಾಗಿದೆ" ಎಂದು ಅವರು ಹೇಳಿದರು.

"ಹಿಂದೆ ಹಿರಿತನದ ಆಧಾರದ ಮೇಲೆ ಎಲ್ಒಸಿ ನೀಡಲಾಗಿತ್ತು. ಆದರೆ ಈಗ ಕಮಿಷನ್ ಕೊಡುವವರಿಗೆ ಮಾತ್ರ ಬಿಲ್ ಕ್ಲಿಯರ್ ಮಾಡುವಂತೆ ಸಚಿವರು, ಶಾಸಕರು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದ್ದಾರೆ. ಜಲ ಜೀವನ್ ಮಿಷನ್ (ಜೆಜೆಎಂ) ಅಡಿಯಲ್ಲಿನ ಮಾಡಲಾದ ಕಾಮಗಾರಿಗಳ ಬಿಲ್‌ ಕ್ಲಿಯರ್ ಮಾಡಲು ಎಂಜಿನಿಯರ್‌ಗಳ ಮೂಲಕ ಜಿಪಂ ಅಧಿಕಾರಿಗಳಿಗೆ ಲಂಚ ನೀಡಬೇಕಾಗಿದೆ ಎಂದು ಪದಾಧಿಕಾರಿಗಳು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT