ಕೆಎಂಎಫ್ ಸಾಂದರ್ಭಿಕ ಚಿತ್ರ 
ರಾಜ್ಯ

ಅಕ್ಟೋಬರ್‌ನಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ ಆರಂಭ!

ಅಕ್ಟೋಬರ್ ಮೊದಲ ವಾರದಿಂದ ನೀಲಿ, ಹಸಿರು, ಕೆಂಪು ಮತ್ತು ಕಿತ್ತಳೆ ಮಾದರಿಗಳೊಂದಿಗೆ ದೆಹಲಿ ಮಾರುಕಟ್ಟೆ ಪ್ರವೇಶಿಸುವ ಗುರಿ ಹೊಂದಿದ್ದೇವೆ. ಮೊದಲ ಆರು ತಿಂಗಳ ಕಾಲ ನಿತ್ಯ ಸುಮಾರು 2 ಲಕ್ಷ ಲೀಟರ್ ಹಾಲು ಮಾರಾಟ ಮಾಡಿ ಕ್ರಮೇಣ ಅದನ್ನು ವಿಸ್ತರಿಸುವ ಗುರಿ

ಬೆಂಗಳೂರು: ನಾಡಿನಾದ್ಯಂತ ಮನೆ ಮನೆಗಳಲ್ಲಿ ಚಿರಪಿತವಾಗಿರುವ ನಂದಿನಿ KMF ಹಾಲು ಇದೀಗ ಉತ್ತರ ಭಾರತಕ್ಕೂ ಲಗ್ಗೆ ಇಡುತ್ತಿದೆ. ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ಹಾಲು ಮತ್ತು ಮೊಸರು ಮಾರಾಟವನ್ನು ಕರ್ನಾಟಕ ಹಾಲು ಒಕ್ಕೂಟ (KMF) ಪ್ರಾರಂಭಿಸಲಿದೆ.

ದೇಶದ ಬಹುತೇಕ ಭಾಗಗಳಲ್ಲಿ ಹಸುವಿನ ಹಾಲಿನ ಬೇಡಿಕೆ ಮತ್ತು ಬಳಕೆ ಹೆಚ್ಚುತ್ತಿದ್ದು, ಇದು ಕೆಎಂಎಫ್ ತನ್ನ ವ್ಯವಹಾರವನ್ನು ವಿಸ್ತರಿಸಲು ಸೂಕ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ಟೋಬರ್ ಮೊದಲ ವಾರದಿಂದ ನೀಲಿ, ಹಸಿರು, ಕೆಂಪು ಮತ್ತು ಕಿತ್ತಳೆ ಮಾದರಿಗಳೊಂದಿಗೆ ದೆಹಲಿ ಮಾರುಕಟ್ಟೆ ಪ್ರವೇಶಿಸುವ ಗುರಿ ಹೊಂದಿದ್ದೇವೆ. ಮೊದಲ ಆರು ತಿಂಗಳ ಕಾಲ ನಿತ್ಯ ಸುಮಾರು 2 ಲಕ್ಷ ಲೀಟರ್ ಹಾಲು ಮಾರಾಟ ಮಾಡಿ ಕ್ರಮೇಣ ಅದನ್ನು ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ತಿಳಿಸಿದರು.

ಕಂಪನಿ ಗುಡ್‌ಲೈಫ್ ಬ್ರಾಂಡ್‌ ಮಾತ್ರವಲ್ಲದೆ ಪ್ರತಿದಿನವೂ ಮಾರಾಟದೊಂದಿಗೆ ನೇರ ಮಾರಾಟಕ್ಕಾಗಿ ಉತ್ತರ ಭಾರತದ ರಾಜ್ಯಗಳತ್ತ ಸಾಗುತ್ತಿರುವುದು ಇದೇ ಮೊದಲು ಎಂದು ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಅಂಕಿಅಂಶಗಳ ಪ್ರಕಾರ, ಮದರ್ ಡೈರಿ ಪ್ರತಿದಿನ ಸುಮಾರು 10 ಲಕ್ಷ ಲೀಟರ್ ಹಸುವಿನ ಹಾಲನ್ನು ಮಾರಾಟ ಮಾಡುತ್ತದೆ. ನಾವು ಹಸುವಿನ ಹಾಲಿನ ಬ್ರಾಂಡ್ ಆಗಿದ್ದು, ದೆಹಲಿಯ ಮಾರುಕಟ್ಟೆಯಲ್ಲಿ ನಮಗೆ ಉತ್ತಮ ಅವಕಾಶವಿದೆ. ದಿನಕ್ಕೆ ಸುಮಾರು 25,000 ಲೀಟರ್‌ಗಳಷ್ಟು ಮೊಸರನ್ನು ಮಾರಾಟ ಮಾಡುವ ಗುರಿ ಹೊಂದಿದ್ದೇವೆ. ಚಿಲ್ಲರೆ ವ್ಯಾಪಾರಿಗಳು ಮತ್ತು ವ್ಯಾಪಾರಿಗಳ ಮೂಲಕ ಹಾಲು ಮೊಸರನ್ನು ಮಾರಾಟ ಮಾಡುವ ಗುರಿಯನ್ನು ಹೊಂದಿದ್ದೇವೆ, ಆದರೆ ಹೆಚ್ಚಾಗಿ ಆನ್‌ಲೈನ್ ನಲ್ಲಿ ಮಾರಾಟ ಮಾಡಲಾಗುವುದು ಎಂದು ಅವರು ಹೇಳಿದರು.

ಕಳೆದ ವರ್ಷಕ್ಕೆ ಹೋಲಿಸಿದರೆ ಮಾರಾಟದಲ್ಲಿ ಶೇ.20ರಷ್ಟು ಪ್ರಗತಿಯಾಗಿದೆ. ಸದ್ಯಕ್ಕೆ 1 ಕೋಟಿ ಲೀಟರ್ ಹಾಲು ಸಂಗ್ರಹವಾಗಿದ್ದು, ಮಾರಾಟದಲ್ಲಿ ದಿನಕ್ಕೆ 2-2.5 ಲಕ್ಷ ಲೀಟರ್ ಹೆಚ್ಚಳವಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಸಿಹಿತಿಂಡಿಗಳು ಮತ್ತು ಇತರ ಡೈರಿ ಉತ್ಪನ್ನಗಳ ಮಾರಾಟದಲ್ಲಿ ಹೆಚ್ಚಳವಾಗಿದೆ ಎಂದು ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT