ಮಳಖೇಡ ಕೋಟೆ ಗೋಡೆ ಕುಸಿತ 
ರಾಜ್ಯ

Karnataka Rain: ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ ಗೋಡೆ

ಕಲಬುರಗಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಇದೇ ವೇಳೆ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದುಬಿದ್ದಿದೆ. ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು ನಿಂತಿದ್ದು, ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದೆ.

ಕಲಬುರಗಿ: ಕರ್ನಾಟಕದ ಹೆಮ್ಮೆಯ ಐತಿಹಾಸಿಕ ಸ್ಮಾರಕ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದು ಬಿದ್ದಿದ್ದು, ಇತಿಹಾಸಕಾರರ ಆಕ್ರೋಶಕ್ಕೆ ಕಾರಣವಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಇದೇ ವೇಳೆ ಮಳಖೇಡ ರಾಷ್ಟ್ರಕೂಟ ಕೋಟೆ ಗೋಡೆ ಕುಸಿದುಬಿದ್ದಿದೆ. ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು ನಿಂತಿದ್ದು, ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದೆ.

ನಿಂರತ ಮಳೆಗೆ ಕೋಟೆ ಗೋಡೆಗಳು ತೇವಗೊಂಡಿದ್ದು, ಮಣ್ಣು ಸಡಿಲವಾಗಿ ಕಲ್ಲಿನ ಗೋಡೆ ಕುಸಿದುಬಿದ್ದಿದೆ. ಗೋಡೆ ಕುಸಿಯುತ್ತಿರುವ ವಿಡಿಯೋ ಸಾಮಾಜಿಕ ಲದ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇನ್ನು ಗೋಡೆ ಕುಸಿತ ಪ್ರಕರಣದಿಂದ ಕೋಟೆ ಅಕ್ಕಪಕ್ಕದ ನಿವಾಸಿಗಳು ಆತಂಕಗೊಂಡು, ಬೆಚ್ಚಿಬಿದ್ದಿದ್ದಾರೆ. ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿಯಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಜೀರ್ಣೋದ್ಧಾರ ಮಾಡಿದ್ದ ಸರ್ಕಾರ

ರಾಷ್ಟ್ರಕೂಟರ ಕಾಲದಲ್ಲಿ ನಿರ್ಮಿಸಿದ್ದ ಕೋಟೆ ಐತಿಹಾಸಿಕವಾಗಿ ಮಹತ್ವ ಪಡೆದುಕೊಂಡಿದ್ದು, ರಾಷ್ಟ್ರಕೂಟರ ರಾಜ ಅಮೋಘವರ್ಷ ನೃಪತುಂಗ ಮಳಖೇಡ (ಮಾನ್ಯಖೇಟ) ರಾಜಧಾನಿಯನ್ನಾಗಿ ಮಾಡಿಕೊಂಡಿದ್ದರು. ಆಸ್ಥಾನದಲ್ಲಿದ್ದ ಕವಿ ಶ್ರೀವಿಜಯ 'ಕವಿರಾಜ ಮಾರ್ಗ' ಗ್ರಂಥ ಬರೆದಿದ್ದ. ಇದು ಕನ್ನಡದ ಮೊದಲ ಉಪಲಬ್ದ ಕೃತಿಯಾಗಿದೆ. ಇಂತಹ ಐತಿಹಾಸಿಕ ಚರೀತ್ರೆಯುಳ್ಳ‌ ಮಳಖೇಡ ಕೋಟೆಯನ್ನು 2016-18ರ ಅವಧಿಯಲ್ಲಿ ಅಂದಿನ ಸಚಿವರಾಗಿದ್ದ ಡಾ.ಶರಣಪ್ರಕಾಶ ಪಾಟೀಲ ಅವರು 5 ಕೋಟಿ‌ ರೂ ಅನುದಾನ ನೀಡಿ ಜೀರ್ಣೋದ್ಧಾರ ಮಾಡಿಸಿದ್ದರು.

ಜೊತೆಗೆ ಆಗಿನ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಅವರೂ ಕೂಡ1 ಕೋಟಿ ಅನುದಾನ ನೀಡಿದ್ದರು. 2018ರಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಪಾಟೀಲ ಅವರ ನೇತೃತ್ವದಲ್ಲಿ ಕೋಟೆ ಜೀರ್ಣೋದ್ಧಾರದ ಜೊತೆಗೆ ಸರ್ಕಾರದಿಂದ ರಾಷ್ಟ್ರಕೂಟರ ಉತ್ಸವ ಜರುಗಿತು. ಹಳೆ ಗೋಡೆಗಳು ಬಿದ್ದಿಲ್ಲ. ಆದರೆ,ಜೀರ್ಣೋದ್ಧಾರ ಮಾಡಿದ ಗೋಡೆಯೇ ಬಿದ್ದಿದ್ದು, ಜನರಲ್ಲಿ ಅಚ್ಚರಿ ಮೂಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT