ಬೆಂಗಳೂರು ಇಸ್ಕಾನ್ ಅಧ್ಯಕ್ಷ ಮಧು ಪಂಡಿತ್ ದಾಸ್ 
ರಾಜ್ಯ

ಅಲ್ಪಸಂಖ್ಯಾತರ ರಕ್ಷಣೆಗೆ ಬಾಂಗ್ಲಾದೊಂದಿಗೆ ಮಾತುಕತೆ ನಡೆಸಿ: ಕೇಂದ್ರ ಸರ್ಕಾರಕ್ಕೆ ಇಸ್ಕಾನ್ ಬೆಂಗಳೂರು ಮನವಿ

ಚಿನ್ಮೋಯ್ ಕೃಷ್ಣ ಪ್ರಭು, ಇಸ್ಕಾನ್ ಭಕ್ತರು ಸೇರಿದಂತೆ ಮತ್ತಿತರ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆಯನ್ನು ಬಾಂಗ್ಲಾದೇಶ ಸರ್ಕಾರ ಖಾತ್ರಿಪಡಿಸುತ್ತದೆ ಎಂಬ ವಿಶ್ವಾಸದಲ್ಲಿದ್ದೇವೆ

ಬೆಂಗಳೂರು: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ಇಸ್ಕಾನ್ ಬೆಂಗಳೂರು ಅಧ್ಯಕ್ಷ ಮಧು ಪಂಡಿತ್ ದಾಸ್ ಕಳವಳ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲು ನೆರೆಯ ದೇಶಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದ್ದಾರೆ.

ಬಾಂಗ್ಲಾದೇಶದಲ್ಲಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರ ಬಗ್ಗೆ ಒಗ್ಗಟ್ಟು ಪ್ರದರ್ಶಿಸಲು ಇಸ್ಕಾನ್ ದೇವಾಲಯ ಬಳಿ ಆಯೋಜಿಸಲಾದ ಶಾಂತಿಯುತ ಸಂಕೀರ್ತನೆಯಲ್ಲಿ ಮಾತನಾಡಿದ ದಾಸ್, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ವರದಿಗಳನ್ನು ನಾವು ನೋಡಿದ್ದೇವೆ. ಅಲ್ಲಿನ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ಹೊಂದಿರುವುದಾಗಿ ತಿಳಿಸಿದರು.

ಚಿನ್ಮೋಯ್ ಕೃಷ್ಣ ಪ್ರಭು, ಇಸ್ಕಾನ್ ಭಕ್ತರು ಸೇರಿದಂತೆ ಮತ್ತಿತರ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆಯನ್ನು ಬಾಂಗ್ಲಾದೇಶ ಸರ್ಕಾರ ಖಾತ್ರಿಪಡಿಸುತ್ತದೆ ಎಂಬ ವಿಶ್ವಾಸದಲ್ಲಿದ್ದೇವೆ ಎಂದರು.

ಬಾಂಗ್ಲಾದೇಶ ಸನಾತನ ಜಾಗರಣ ಮಂಚ್‌ನ ವಕ್ತಾರ ಚಿನ್ಮೋಯ್ ಕೃಷ್ಣ ದಾಸ್ ಬ್ರಹ್ಮಚಾರಿ ಅವರನ್ನು ಢಾಕಾ ಪೊಲೀಸರು ಇತ್ತೀಚೆಗೆ ಬಂಧಿಸಿರುವುದು ಸೇರಿದಂತೆ ಇತ್ತೀಚಿನ ತಿಂಗಳುಗಳಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯ ದಾಳಿಗೆ ಒಳಗಾಗುತ್ತಿರುವುದನ್ನು ಮಧು ಪಂಡಿತ್ ದಾಸ್ ಪ್ರಸ್ತಾಪಿಸಿದರು.

ಬಾಂಗ್ಲಾದಲ್ಲಿ ಹಿಂದೂ ದೇವಾಲಯಗಳನ್ನು ಗುರಿಯಾಗಿಸಲಾಗುತ್ತಿದೆ. ಸನಾತನ ಧರ್ಮದ ಅನುಯಾಯಿಗಳು ಗಂಭೀರ ದಾಳಿಗೆ ಒಳಗಾಗುತ್ತಿದ್ದಾರೆ. ಇದನ್ನು ನಿಲ್ಲಿಸಬೇಕಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!