ಬೆಂಗಳೂರಿನಲ್ಲಿ ಕುಸಿದ ತಾಪಮಾನ 
ರಾಜ್ಯ

Cyclone Fengal ಎಫೆಕ್ಟ್: ಬೆಂಗಳೂರಿನಲ್ಲಿ ಕುಸಿದ ತಾಪಮಾನ, ಚಳಿಗೆ ತತ್ತರಿಸಿದ ಸಿಲಿಕಾನ್ ಸಿಟಿ ಜನತೆ!

ಪರಿಣಾಮ ಬೆಂಗಳೂರಿನಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಒಂದು ಕಡೆ ಮಳೆ ವಾತವರಣ ಇದ್ದರೆ, ಮತ್ತೊಂದೆಡೆ ಚಳಿ ವಾತವರಣ ರಾಜಧಾನಿ ಬೆಂಗಳೂರಿನ ಜನತೆ ನಡುಗುವಂತೆ ಮಾಡಿದೆ.

ಬೆಂಗಳೂರು: ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ರಾತ್ರಿಯಿಂದ ಮಳೆಯಾಗುತ್ತಿದ್ದು ನಗರದಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದೆ.

ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ರಾತ್ರಿಯಿಂದ ಮಳೆಯಾಗುತ್ತಿದ್ದು, ಬೆಂಗಳೂರು ಮಾತ್ರವಲ್ಲದೇ ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ.

ಪರಿಣಾಮ ಬೆಂಗಳೂರಿನಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಒಂದು ಕಡೆ ಮಳೆ ವಾತವರಣ ಇದ್ದರೆ, ಮತ್ತೊಂದೆಡೆ ಚಳಿ ವಾತವರಣ ರಾಜಧಾನಿ ಬೆಂಗಳೂರಿನ ಜನತೆ ನಡುಗುವಂತೆ ಮಾಡಿದೆ.

ಹವಾಮಾನ ಇಲಾಖೆ ಮೂಲಗಳ ಪ್ರಕಾರ ಮುಂದಿನ ಮೂರು ದಿನ ನಗರದಲ್ಲಿ ಚಳಿ ಮುಂದುವರೆಯುವ ಸಾಧ್ಯತೆ ಇದೆ. ಪರಿಣಾಮ ಜನರು ಮುಂಜಾನೆ ಹಾಗೂ ಸಂಜೆ ವೇಳೆ ಚಳಿಯಿಂದ ರಕ್ಷಿಸಿಕೊಳ್ಳಲು ಬೆಚ್ಚನೆಯ ಉಡುಪುಗಳ ಮೊರೆ ಹೋಗುತ್ತಿದ್ದಾರೆ. ಮೋಡ ಕವಿದ ವಾತಾವರಣ, ತೇವಾಂಶಯುಕ್ತ ಗಾಳಿಯಿಂದಾಗಿ ದಿನವಿಡೀ ಚಳಿಯ ಅನುಭವವಾಗುತ್ತಿದೆ.

ಶನಿವಾರ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ತಾಪಮಾನ ಕುಸಿದಿತ್ತು. ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ ಐದರಿಂದ ಆರು ಡಿಗ್ರಿ ಕುಸಿದಿದ್ದು, 22.6 ಡಿಗ್ರಿ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಕಳೆದ ವಾರ ಸರಾಸರಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.

‘ಫೆಸಿಫಿಕ್ ಮಹಾಸಾಗರದಲ್ಲಿ ಮೇಲ್ಮೈ ಉಷ್ಣಾಂಶ ಕಡಿಮೆಯಾಗುವುದರಿಂದ ಹೆಚ್ಚಿನ ಚಳಿಯ ಅನುಭವವಾಗಲಿದೆ. ‘ಎಲ್-ನಿನೊ’ ಪರಿಸ್ಥಿತಿಯಿಂದಾಗಿ ಡಿಸೆಂಬರ್‌ ತಿಂಗಳಲ್ಲಿ ಅಧಿಕ ಚಳಿ ಇರಲಿದ್ದು, ಈ ಚಳಿಯ ಅನುಭವ ಜನವರಿಯಿಂದ ಮಾರ್ಚ್‌ವರೆಗೂ ಮುಂದುವರೆಯುವ ಸಾಧ್ಯತೆ ಇದೆ’ ಎಂದು ಹವಾಮಾನ ತಜ್ಞರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT