ಬಿಬಿಎಂಪಿ ಕಚೇರಿ (ಸಂಗ್ರಹ ಚಿತ್ರ) 
ರಾಜ್ಯ

OTS ಗಡುವು ಅಂತ್ಯ: BBMP ದಾಖಲೆಯ 4,284 ಕೋಟಿ ರೂ ತೆರಿಗೆ ಸಂಗ್ರಹ

2022-23ರಲ್ಲಿ 2,300 ಕೋಟಿ ರೂಪಾಯಿ ಮತ್ತು 2023-24ರಲ್ಲಿ 2293.81 ಕೋಟಿ ರೂಪಾಯಿಗಳನ್ನು ಪಾಲಿಕೆ ಸಂಗ್ರಹಿಸಿತ್ತು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ಆಸ್ತಿ ತೆರಿಗೆ ವಸೂಲಿಯಲ್ಲಿ ಗಮನಾರ್ಹ ಏರಿಕೆಯಾಗಿದೆ.

ಬೆಂಗಳೂರು: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ತೆರಿಗೆ ಬಾಕಿ ಪಾವತಿಗೆ ನೀಡಿದ್ದ ಒನ್ ಟೈಮ್ ಸೆಟ್ಲಮೆಂಟ್ ಅವಕಾಶ ಶನಿವಾರ (ನ.30)ಕ್ಕೆ ಕೊನೆಗೊಂಡಿದ್ದು, ಒಟಿಎಸ್ ಪರಿಣಾಮ ಬಿಬಿಎಂಪಿಗೆ ದಾಖಲೆಯ 4,284 ಕೋಟಿ ರೂ. ಆಸ್ತಿ ತೆರಿಗೆ ವಸೂಲಿಯಾಗಿದೆ. ಈ ಮೂಲಕ ಪಾಲಿಕೆಯೂ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದೆ.

2022-23ರಲ್ಲಿ 2,300 ಕೋಟಿ ರೂಪಾಯಿ ಮತ್ತು 2023-24ರಲ್ಲಿ 2293.81 ಕೋಟಿ ರೂಪಾಯಿಗಳನ್ನು ಪಾಲಿಕೆ ಸಂಗ್ರಹಿಸಿತ್ತು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿಯ ಆಸ್ತಿ ತೆರಿಗೆ ವಸೂಲಿಯಲ್ಲಿ ಗಮನಾರ್ಹ ಏರಿಕೆಯಾಗಿದೆ.

ಒಟಿಎಸ್ ಯೋಜನೆ ಆಸ್ತಿ ತೆರಿಗೆ ಸಂಗ್ರಹ ಸುಧಾರಿಸಲು ಸಹಾಯ ಮಾಡಿದೆ. ಯೋಜನೆಯಡಿಯಲ್ಲಿ, ಆಸ್ತಿ ಮಾಲೀಕರನ್ನು ಚಕ್ರಬಡ್ಡಿ ಮತ್ತು ದಂಡಗಳಿಂದ ಹೊರಗಿಡಲಾಗಿತ್ತು. 9 ತಿಂಗಳ ಹಿಂದೆ ಆರಂಭಿಸಿದ್ದ ಯೋಜನೆಯನ್ನು ಎರಡು ಬಾರಿ ವಿಸ್ತರಿಸಲಾಗಿತ್ತು. ಯೋಜನೆಯು ನವೆಂಬರ್ 30 ರಂದು ಕೊನೆಗೊಂಡಿದ್ದು, ಯೋಜನೆಯನ್ನು ಬಳಸಿಕೊಳ್ಳದ ಬಾಕಿದಾರರು ದುಪ್ಪಟ್ಟು ಆಸ್ತಿ ತೆರಿಗೆ ಪಾವತಿ ಮಾಡಬೇಕಾಗುತ್ತದೆ.

2024ರ ಬಜೆಟ್ ಮಂಡನೆ ವೇಳೆ ಬಿಬಿಎಂಪಿ 6,000 ಕೋಟಿ ಆಸ್ತಿ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿತ್ತು. ಆದರೆ, ಒಟಿಎಸ್ ಯೋಜನೆ ಜಾರಿಯಾದ ಬಳಿಕ ಈ ಗುರಿಯನ್ನು 5,200 ಕೋಟಿ ರೂ.ಗೆ ಪರಿಷ್ಕರಿಸಲಾಗಿತ್ತು. ಮಾರ್ಚ್ 2025 ರ ಅಂತ್ಯದ ವೇಳೆಗೆ ನಿರೀಕ್ಷಿತ ಗುರಿಯನ್ನು ತಲುಪಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.

ಏಪ್ರಿಲ್ 1 ರಿಂದ ನವೆಂಬರ್ 30 ರವರೆಗೆ 4,284.16 ಕೋಟಿ ರೂಪಾಯಿ ಸಂಗ್ರಹಿಸಲಾಗಿದೆ. ಈ ಪೈಕಿ ಮಹದೇವಪುರ ವಲಯದಲ್ಲಿ ಅತೀ ಹೆಚ್ಚು 1,148 ಕೋಟಿ ರೂಪಾಯಿಗಳ ತೆರಿಗೆ ವಸೂಲಿ ಮಾಡಲಾಗಿದೆ.

ಇನ್ನುಳಿದಂತೆ ಪೂರ್ವ ವಲಯದಲ್ಲಿ 710 ಕೋಟಿ ರೂ, ದಕ್ಷಿಣ ವಲಯದಲ್ಲಿ 606 ಕೋಟಿ ರೂ, ಬಿಬಿಎಂಪಿ ಪಶ್ಚಿಮ ವಲಯ 483 ಕೋಟಿ, ಬೊಮ್ಮನಹಳ್ಳಿ ವಲಯ 418 ಕೋಟಿ, ಯಲಹಂಕ ವಲಯ 408 ಕೋಟಿ, ರಾಜರಾಜೇಶ್ವರಿ ನಗರ ವಲಯ 335 ಕೋಟಿ, ದಾಸರಹಳ್ಳಿ ವಲಯ 136 ಕೋಟಿ ರೂ. ತೆರಿಗೆ ಸಂಗ್ರಹ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಹಿಂದೆ ಹೇಳಿಕೆ ನೀಡಿದ್ದ ಬಿಬಿಎಂಪಿಯ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ಅವರು ಒಟಿಎಸ್ ಯೋಜನೆಯನ್ನು ಮುಂದುವರಿಸುವ ಯಾವುದೇ ಚಿಂತನೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಹೀಗಾಗಿ, ಈ ಯೋಜನೆ ಮುಂದುವರಿಯುವ ಸಾಧ್ಯತೆ ಕಡಿಮೆ ಇದೆ. ಆದರೆ, ಇದೀಗ ಹೆಚ್ಚು ಆದಾಯ ಸಂಗ್ರಹವಾಗುತ್ತಿರುವುದರಿಂದ ಈ ಯೋಜನೆ ಮುಂದುವರಿಸಲಾಗುವುದೇ ಎನ್ನುವ ಕುತೂಹಲ ಜನರಲ್ಲಿ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT