ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಖಾಸಗಿ ಏಜೆನ್ಸಿಗಳಿಂದ ಮರ ಕತ್ತರಿಸುವ ಸರ್ವೀಸ್; Justdial ಗೆ ಬಿಬಿಎಂಪಿ ನೋಟಿಸ್

ಕೆಲವು ಖಾಸಗಿ ಏಜೆನ್ಸಿಗಳು ಮರಗಳನ್ನು ಕಡಿಯಲು ಮುಂದಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಈ ಬಗ್ಗೆ ಸಂಬಂಧಪಟ್ಟ ವಲಯಗಳ ವ್ಯಾಪ್ತಿಯ ಅರಣ್ಯಾಧಿಕಾರಿಗಳ ಗಮನಕ್ಕೆ ತರುತ್ತಿಲ್ಲ. ಸಾರ್ವಜನಿಕರಿಂದ ಸೇವೆಗೆ ಹಣ ವಸೂಲಿ ಕೂಡಾ ಮಾಡುತ್ತಿದ್ದಾರೆ.

ಬೆಂಗಳೂರು: ಬೆಂಗಳೂರಿನಾದ್ಯಂತ ಮರ ಕಡಿಯುವ ಮತ್ತು ಕತ್ತರಿಸುವ ಸೇವೆಗಳ ಬಗ್ಗೆ 85ಕ್ಕೂ ಹೆಚ್ಚು ಖಾಸಗಿ ಏಜೆನ್ಸಿಗಳು ಬಹಿರಂಗವಾಗಿ ಜಾಹೀರಾತು ನೀಡುತ್ತಿದ್ದು, ಬಿಬಿಎಂಪಿ ಅರಣ್ಯ ವಿಭಾಗವು ಪ್ರತಿಯೊಂದನ್ನು ಪತ್ತೆ ಹಚ್ಚಲು ಪ್ರಾರಂಭಿಸಿದೆ. ಅಂತಹ ಯಾವುದೇ ಪ್ರಯತ್ನಗಳನ್ನು ಕೈಗೊಳ್ಳುವ ಮೊದಲು ಅರಣ್ಯ ಇಲಾಖೆಯ ಅನುಮತಿಯನ್ನು ಪಡೆಯಲು ತನ್ನ ಗ್ರಾಹಕರಿಗೆ ತಿಳಿಸುವಂತೆ ಸ್ಥಳೀಯ ಸರ್ಚ್ ಇಂಜಿನ್ Justdial ಗೆ ನೋಟಿಸ್ ನೀಡಿದೆ.

ಈ ಕುರಿತು TNSE ಜೊತೆಗೆ ಮಾತನಾಡಿದ ಬಿಬಿಎಂಪಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಲ್.ಜಿ.ಸ್ವಾಮಿ, ಕೆಲವು ಖಾಸಗಿ ಏಜೆನ್ಸಿಗಳು ಮರಗಳನ್ನು ಕಡಿಯಲು ಮುಂದಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಈ ಬಗ್ಗೆ ಸಂಬಂಧಪಟ್ಟ ವಲಯಗಳ ವ್ಯಾಪ್ತಿಯ ಅರಣ್ಯಾಧಿಕಾರಿಗಳ ಗಮನಕ್ಕೆ ತರುತ್ತಿಲ್ಲ. ಸಾರ್ವಜನಿಕರಿಂದ ಸೇವೆಗೆ ಹಣ ವಸೂಲಿ ಕೂಡಾ ಮಾಡುತ್ತಿದ್ದಾರೆ ಎನ್ನಲಾಗಿದೆ.

ಈ ಅಕ್ರಮವನ್ನು ಕೊನೆಗೊಳಿಸಲು, ನಾವು ಏಜೆನ್ಸಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಪ್ರಾರಂಭಿಸಿದ್ದೇವೆ. ಬಿಬಿಎಂಪಿ ಅರಣ್ಯ ಇಲಾಖೆ Justdial ಗೆ ಪತ್ರ ಬರೆದಿದ್ದು, ಮರ ಕಡಿಯಲು ಬಿಬಿಎಂಪಿ ಅರಣ್ಯ ವಿಭಾಗದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿರುವ ಬಗ್ಗೆ ತನ್ನ ಗ್ರಾಹಕರನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

‘ಟ್ರೀ ಡಾಕ್ಟರ್’ ಎಂದು ಜನಪ್ರಿಯವಾಗಿರುವ ನಗರ ಸಂರಕ್ಷಣಾಧಿಕಾರಿ ವಿಜಯ್ ನಿಶಾಂತ್, ಕೆಲವು ವಾಣಿಜ್ಯ ವ್ಯಾಪಾರ ಮಳಿಗೆಗಳು ಸ್ಪಷ್ಟವಾಗಿ ಕಾಣವೆಂದು ಅಕ್ರಮವಾಗಿ ಮರ ಕುಡಿಯುತ್ತಿದ್ದಾರೆ. ಈ ಮೂಲಕ ನಗರದ ಹಸಿರು ಹೊದಿಕೆಯನ್ನು ಕಡಿಮೆ ಮಾಡುತ್ತಿದ್ದಾರೆ. ಯಾವುದೇ ಉದ್ದೇಶಕ್ಕಾಗಿ ಮರ ಕಡಿಯಲು ಬಿಬಿಎಂಪಿ ಅರಣ್ಯಾಧಿಕಾರಿಗಳ ಮುಂದೆ ಬರಬೇಕು ಮತ್ತು ಕಡಿಯಬೇಕಾದ ಮರಗಳ ಸಂಖ್ಯೆ 50 ಆಗಿದ್ದರೆ ಅದು ವೃಕ್ಷ ಸಮಿತಿಯ ಮುಂದೆ ಬರುತ್ತದೆ. ಅನೇಕ ಅಂಗಡಿಗಳ ಮಾಲೀಕರು ಮರ ಕಡಿಯಲು ಬಿಬಿಎಂಪಿ ಅಧಿಕಾರಿಗಳಿಂದ ಅನುಮತಿ ಪಡೆಯುತ್ತಿಲ್ಲ. ಇದು ಮರ ಕಡಿಯುವ ಏಜೆನ್ಸಿಗಳು ಪ್ರವರ್ಧಮಾನಕ್ಕೆ ಬರಲು ಕಾರಣವಾಗಿದೆ ಎಂದರು.

ಮರ ಸಂರಕ್ಷಣಾ ಕಾಯ್ದೆಯ ಪ್ರಕಾರ ಸರ್ಕಾರಿ ಅಥವಾ ಖಾಸಗಿ ಭೂಮಿಯಲ್ಲಿರುವ ಯಾವುದೇ ಮರವು ಅರಣ್ಯ ಇಲಾಖೆಗೆ ಸೇರಿದ್ದು, ಮಾಲೀಕರು ಆ ಮರವನ್ನು ತೆಗೆಯಲು ಬಯಸಿದರೆ ಬಿಬಿಎಂಪಿ ಟ್ರೀ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು, ಇಲ್ಲದಿದ್ದರೆ ದಂಡ ವಿಧಿಸಲಾಗುವುದು ಎಂದು ನಿಶಾಂತ್ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT