ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಖಾಸಗಿ ಏಜೆನ್ಸಿಗಳಿಂದ ಮರ ಕತ್ತರಿಸುವ ಸರ್ವೀಸ್; Justdial ಗೆ ಬಿಬಿಎಂಪಿ ನೋಟಿಸ್

ಕೆಲವು ಖಾಸಗಿ ಏಜೆನ್ಸಿಗಳು ಮರಗಳನ್ನು ಕಡಿಯಲು ಮುಂದಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಈ ಬಗ್ಗೆ ಸಂಬಂಧಪಟ್ಟ ವಲಯಗಳ ವ್ಯಾಪ್ತಿಯ ಅರಣ್ಯಾಧಿಕಾರಿಗಳ ಗಮನಕ್ಕೆ ತರುತ್ತಿಲ್ಲ. ಸಾರ್ವಜನಿಕರಿಂದ ಸೇವೆಗೆ ಹಣ ವಸೂಲಿ ಕೂಡಾ ಮಾಡುತ್ತಿದ್ದಾರೆ.

ಬೆಂಗಳೂರು: ಬೆಂಗಳೂರಿನಾದ್ಯಂತ ಮರ ಕಡಿಯುವ ಮತ್ತು ಕತ್ತರಿಸುವ ಸೇವೆಗಳ ಬಗ್ಗೆ 85ಕ್ಕೂ ಹೆಚ್ಚು ಖಾಸಗಿ ಏಜೆನ್ಸಿಗಳು ಬಹಿರಂಗವಾಗಿ ಜಾಹೀರಾತು ನೀಡುತ್ತಿದ್ದು, ಬಿಬಿಎಂಪಿ ಅರಣ್ಯ ವಿಭಾಗವು ಪ್ರತಿಯೊಂದನ್ನು ಪತ್ತೆ ಹಚ್ಚಲು ಪ್ರಾರಂಭಿಸಿದೆ. ಅಂತಹ ಯಾವುದೇ ಪ್ರಯತ್ನಗಳನ್ನು ಕೈಗೊಳ್ಳುವ ಮೊದಲು ಅರಣ್ಯ ಇಲಾಖೆಯ ಅನುಮತಿಯನ್ನು ಪಡೆಯಲು ತನ್ನ ಗ್ರಾಹಕರಿಗೆ ತಿಳಿಸುವಂತೆ ಸ್ಥಳೀಯ ಸರ್ಚ್ ಇಂಜಿನ್ Justdial ಗೆ ನೋಟಿಸ್ ನೀಡಿದೆ.

ಈ ಕುರಿತು TNSE ಜೊತೆಗೆ ಮಾತನಾಡಿದ ಬಿಬಿಎಂಪಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಲ್.ಜಿ.ಸ್ವಾಮಿ, ಕೆಲವು ಖಾಸಗಿ ಏಜೆನ್ಸಿಗಳು ಮರಗಳನ್ನು ಕಡಿಯಲು ಮುಂದಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಈ ಬಗ್ಗೆ ಸಂಬಂಧಪಟ್ಟ ವಲಯಗಳ ವ್ಯಾಪ್ತಿಯ ಅರಣ್ಯಾಧಿಕಾರಿಗಳ ಗಮನಕ್ಕೆ ತರುತ್ತಿಲ್ಲ. ಸಾರ್ವಜನಿಕರಿಂದ ಸೇವೆಗೆ ಹಣ ವಸೂಲಿ ಕೂಡಾ ಮಾಡುತ್ತಿದ್ದಾರೆ ಎನ್ನಲಾಗಿದೆ.

ಈ ಅಕ್ರಮವನ್ನು ಕೊನೆಗೊಳಿಸಲು, ನಾವು ಏಜೆನ್ಸಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಪ್ರಾರಂಭಿಸಿದ್ದೇವೆ. ಬಿಬಿಎಂಪಿ ಅರಣ್ಯ ಇಲಾಖೆ Justdial ಗೆ ಪತ್ರ ಬರೆದಿದ್ದು, ಮರ ಕಡಿಯಲು ಬಿಬಿಎಂಪಿ ಅರಣ್ಯ ವಿಭಾಗದಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿರುವ ಬಗ್ಗೆ ತನ್ನ ಗ್ರಾಹಕರನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

‘ಟ್ರೀ ಡಾಕ್ಟರ್’ ಎಂದು ಜನಪ್ರಿಯವಾಗಿರುವ ನಗರ ಸಂರಕ್ಷಣಾಧಿಕಾರಿ ವಿಜಯ್ ನಿಶಾಂತ್, ಕೆಲವು ವಾಣಿಜ್ಯ ವ್ಯಾಪಾರ ಮಳಿಗೆಗಳು ಸ್ಪಷ್ಟವಾಗಿ ಕಾಣವೆಂದು ಅಕ್ರಮವಾಗಿ ಮರ ಕುಡಿಯುತ್ತಿದ್ದಾರೆ. ಈ ಮೂಲಕ ನಗರದ ಹಸಿರು ಹೊದಿಕೆಯನ್ನು ಕಡಿಮೆ ಮಾಡುತ್ತಿದ್ದಾರೆ. ಯಾವುದೇ ಉದ್ದೇಶಕ್ಕಾಗಿ ಮರ ಕಡಿಯಲು ಬಿಬಿಎಂಪಿ ಅರಣ್ಯಾಧಿಕಾರಿಗಳ ಮುಂದೆ ಬರಬೇಕು ಮತ್ತು ಕಡಿಯಬೇಕಾದ ಮರಗಳ ಸಂಖ್ಯೆ 50 ಆಗಿದ್ದರೆ ಅದು ವೃಕ್ಷ ಸಮಿತಿಯ ಮುಂದೆ ಬರುತ್ತದೆ. ಅನೇಕ ಅಂಗಡಿಗಳ ಮಾಲೀಕರು ಮರ ಕಡಿಯಲು ಬಿಬಿಎಂಪಿ ಅಧಿಕಾರಿಗಳಿಂದ ಅನುಮತಿ ಪಡೆಯುತ್ತಿಲ್ಲ. ಇದು ಮರ ಕಡಿಯುವ ಏಜೆನ್ಸಿಗಳು ಪ್ರವರ್ಧಮಾನಕ್ಕೆ ಬರಲು ಕಾರಣವಾಗಿದೆ ಎಂದರು.

ಮರ ಸಂರಕ್ಷಣಾ ಕಾಯ್ದೆಯ ಪ್ರಕಾರ ಸರ್ಕಾರಿ ಅಥವಾ ಖಾಸಗಿ ಭೂಮಿಯಲ್ಲಿರುವ ಯಾವುದೇ ಮರವು ಅರಣ್ಯ ಇಲಾಖೆಗೆ ಸೇರಿದ್ದು, ಮಾಲೀಕರು ಆ ಮರವನ್ನು ತೆಗೆಯಲು ಬಯಸಿದರೆ ಬಿಬಿಎಂಪಿ ಟ್ರೀ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು, ಇಲ್ಲದಿದ್ದರೆ ದಂಡ ವಿಧಿಸಲಾಗುವುದು ಎಂದು ನಿಶಾಂತ್ ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT