ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರತಿಭಟನಾ ಪರವಾನಗಿ ಆದೇಶ ಹಿಂಪಡೆಯುವಂತೆ ವಿವಿಧ ಸಂಘಟನೆಗಳ ಒತ್ತಾಯ

ಒಂದು ಕಾಲದಲ್ಲಿ ಬೆಂಗಳೂರಿನಾದ್ಯಂತ ಪ್ರಜಾಸತ್ತಾತ್ಮಕ ಭಿನ್ನಾಭಿಪ್ರಾಯದ ಅಭಿವ್ಯಕ್ತಿಯಾಗಿದ್ದ ಪ್ರತಿಭಟನೆಗಳು ಈಗ ಫ್ರೀಡಂ ಪಾರ್ಕ್‌ಗೆ ಮಾತ್ರ ಸಿಮೀತಗೊಳಿಸಲಾಗಿದೆ.

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನ (ಫ್ರೀಡಂ ಪಾರ್ಕ್) ಹೊರತುಪಡಿಸಿ ನಗರದ ಬೇರೆ ಯಾವುದೇ ಭಾಗದಲ್ಲೂ ರಾಜಕೀಯ ಅಥವಾ ರಾಜಕಿಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸಲು ಅನುಮತಿ ನೀಡದಂತೆ ಜಾರಿಗೊಳಿಸಲಾಗಿರುವ ‘ಪ್ರತಿಭಟನೆ, ಪ್ರದರ್ಶನ ಮತ್ತು ಪ್ರತಿಭಟನಾ ಮೆರವಣಿಗೆಗಳ (ಬೆಂಗಳೂರು ನಗರ) ಪರವಾನಗಿ ಮತ್ತು ನಿಯಂತ್ರಣ ನಿಯಮʼ 2021 ನ್ನು ಹಿಂಪಡೆಯಬೇಕು ಎಂದು ವಿವಿಧ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ.

ಒಂದು ಕಾಲದಲ್ಲಿ ಬೆಂಗಳೂರಿನಾದ್ಯಂತ ಪ್ರಜಾಸತ್ತಾತ್ಮಕ ಭಿನ್ನಾಭಿಪ್ರಾಯದ ಅಭಿವ್ಯಕ್ತಿಯಾಗಿದ್ದ ಪ್ರತಿಭಟನೆಗಳು ಈಗ ಫ್ರೀಡಂ ಪಾರ್ಕ್‌ಗೆ ಮಾತ್ರ ಸಿಮೀತಗೊಳಿಸಲಾಗಿದೆ. ರಾಜ್ಯದೊಂದಿಗಿನ ಯಾವುದೇ ಮಾತುಕತೆಯನ್ನು ಪರಿಣಾಮಕಾರಿಯಾಗಿ ನಡೆಸದಂತೆ ಮೌನಗೊಳಿಸಿದೆ ಎಂದು ಜನಾಂದೋಲನದ ಪ್ರತಿನಿಧಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವದೆಹಲಿಯ ಜಂತರ್ ಮಂತರ್ ಪ್ರತಿಭಟನೆಗೆ ಸ್ಮಶಾನವಾಗಿದೆ. ಅದೇ ರೀತಿ ಬೆಂಗಳೂರಿನ ಫ್ರೀಡಂ ಪಾರ್ಕ್‌ ಮಾಡಬಾರದು. ಪ್ರತಿಭಟನೆಗಳನ್ನು ನಿರ್ಬಂಧಿಸುವ ಬದಲು ಟ್ರಾಫಿಕ್ ಪರಿಹಾರಗಳು ಮತ್ತು ಉತ್ತಮ ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡಬೇಕು ಎಂದು ಬರಹಗಾರ ಮತ್ತು ಚಿಂತಕ ಆಕರ್ ಪಟೇಲ್ ಅಧಿಕಾರಿಗಳನ್ನು ಒತ್ತಾಯಿಸಿದರು.

ನ್ಯಾಯಾಧೀಶರು ಕಾಮಪ್ರಚೋದಕ ಕಾಮೆಂಟ್ ಮಾಡಿದಾಗ, ನ್ಯಾಯಕ್ಕಾಗಿ ನಾವು ಎಲ್ಲಿಗೆ ಹೋಗುತ್ತೇವೆ? ಎಂದು ಪ್ರಶ್ನಿಸಿದ ಸಾಮಾಜಿಕ ಕಾರ್ಯಕರ್ತೆ ಅಕ್ಕೈ ಪದ್ಮಶಾಲಿ, ವ್ಯವಸ್ಥಿತ ದಬ್ಬಾಳಿಕೆಯನ್ನು ಪ್ರಶ್ನಿಸಲು ಸಾರ್ವಜನಿಕ ಪ್ರತಿಭಟನೆಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT