ಸಂಗ್ರಹ ಚಿತ್ರ 
ರಾಜ್ಯ

Fengal Cyclone: ಮಳೆ ಇದ್ದರೂ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸದ ಜಿಲ್ಲಾಡಳಿತ; ಪೋಷಕರು ಬೇಸರ

ಕೆಲವು ವರ್ಗದ ಪೋಷಕರು ಮಾತ್ರ ರಜೆಗೆ ಒತ್ತಾಯಿಸುತ್ತಿದ್ದಾರೆ. ಮಳೆ ನಿಯಂತ್ರಣ ತಪ್ಪಿದರೆ ಸರ್ಕಾರವೇ ರಜೆ ಘೋಷಿಸುತ್ತದೆ. ಆದರೆ. ಕೆಲವು ಪೋಷಕರು ತುಂತುರು ಮಳೆಯಾದರೂ ಚಿಂತಿತರಾಗಿ, ರಜೆಗೆ ಒತ್ತಾಯಿಸುತ್ತಿದ್ದಾರೆ.

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ನಗರದಲ್ಲಿ ಮೋಡ ಕವಿದ ವಾತಾವರಣ ಮತ್ತು ಜಿಟಿಜಿಟಿ ಮಳೆ ಸುರಿಯುತ್ತಿದ್ದು, ಇದರ ನಡುವಲ್ಲೂ ಬೆಂಗಳೂರು ನಗರ ಜಿಲ್ಲಾಡಳಿತ ಮಂಡಳಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸದೆ ಇರುವುದು ಪೋಷಕರಲ್ಲಿ ಬೇಸರ ತರಿಸಿದೆ.

ಖಾಸಗಿ ಶಾಲೆಗಳ ಸಂಘ ಮಾತನಾಡಿ, ಬೆಂಗಳೂರಿನಲ್ಲಿ ಪ್ರತಿ ಬಾರಿ ಮಳೆ ಬಂದಾಗಲೂ ರಜೆ ಕೇಳುವುದು ಕೆಲ ಪೋಷಕರಿಗೆ ಅಭ್ಯಾಸವಾಗಿ ಹೋಗಿದೆ ಎಂದು ಹೇಳಿದೆ.

ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್‌ನ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾತನಾಡಿ, ಕೆಲವು ವರ್ಗದ ಪೋಷಕರು ಮಾತ್ರ ರಜೆಗೆ ಒತ್ತಾಯಿಸುತ್ತಿದ್ದಾರೆ. ಮಳೆ ನಿಯಂತ್ರಣ ತಪ್ಪಿದರೆ ಸರ್ಕಾರವೇ ರಜೆ ಘೋಷಿಸುತ್ತದೆ. ಆದರೆ. ಕೆಲವು ಪೋಷಕರು ತುಂತುರು ಮಳೆಯಾದರೂ ಚಿಂತಿತರಾಗಿ, ರಜೆಗೆ ಒತ್ತಾಯಿಸುತ್ತಿದ್ದಾರೆಂದು ಹೇಳಿದ್ದಾರೆ.

ರಜೆಯ ಕಾರಣ ಶಾಲೆಗಳು ಈಗಾಗಲೇ ಪಠ್ಯಕ್ರಮವನ್ನು ಪೂರ್ಣಗೊಳಿಸುವಲ್ಲಿ ಹಿಂದುಳಿದಿವೆ. ಪ್ರತಿ ಬಾರಿ ಮಳೆ ಬಂದಾಗಲೂ ರಜೆ ಘೋಷಿಸಬೇಕಾದರೆ ಇಡೀ ಮಳೆಗಾಲವನ್ನು ರಜೆ ಎಂದು ಘೋಷಿಸಬೇಕಾಗುತ್ತದೆ. ಪ್ರವಾಹಕ್ಕೆ ತುತ್ತಾಗುವ ತಗ್ಗು ಪ್ರದೇಶಗಳಲ್ಲಿರುವ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ನಿರ್ಧಾರ ತೆಗೆದುಕೊಳ್ಳಬಹುದು. ಪ್ರತಿ ಬಾರಿ ಮಳೆ ಬಂದಾಗ ರಜೆ ಕೇಳುವ ಮನೋಭಾವ ನಿಲ್ಲಬೇಕು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT