ದಿನೇಶ್ ಗುಂಡೂರಾವ್ 
ರಾಜ್ಯ

ರಾಜ್ಯದಲ್ಲಿ ಏಡ್ಸ್ ಸೋಂಕು ಇಳಿಕೆ: ಸಚಿವ ದಿನೇಶ್ ಗುಂಡೂರಾವ್

ಕಳೆದ ವರ್ಷ ರಾಜ್ಯದಲ್ಲಿ 13,183 ಪ್ರಕರಣಗಳು ವರದಿಯಾಗಿದ್ದು, ಈ ಸಾಲಿನಲ್ಲಿ ಅಕ್ಟೋಬರ್ ವರೆಗೆ 7,720 ಪ್ರಕರಣಗಳು ಪತ್ತೆಯಾಗಿವೆ. ಗರ್ಭಿಣಿಯರಲ್ಲಿ ಕಳೆದ ವರ್ಷ 539 ಸೋಂಕು, ಈ ವರ್ಷ ಅಕ್ಟೋಬರ್ ವರೆಗೆ 247 ಸೋಂಕು ವರದಿಯಾಗಿವೆ.

ಬೆಂಗಳೂರು: ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದರು.

ಸೋಮವಾರ ಬೆಂಗಳೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ನಲ್ಲಿ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ರಾಜ್ಯದಲ್ಲಿ 13,183 ಪ್ರಕರಣಗಳು ವರದಿಯಾಗಿದ್ದು, ಈ ಸಾಲಿನಲ್ಲಿ ಅಕ್ಟೋಬರ್ ವರೆಗೆ 7,720 ಪ್ರಕರಣಗಳು ಪತ್ತೆಯಾಗಿವೆ. ಗರ್ಭಿಣಿಯರಲ್ಲಿ ಕಳೆದ ವರ್ಷ 539 ಸೋಂಕು, ಈ ವರ್ಷ ಅಕ್ಟೋಬರ್ ವರೆಗೆ 247 ಸೋಂಕು ವರದಿಯಾಗಿವೆ. ಗರ್ಭಿಣಿಯರಲ್ಲಿ ಸೋಂಕು ದೃಢಪಡುವ ಪ್ರಮಾಣ ಶೇ.0.03ರಷ್ಟಿದೆ. ಇದನ್ನು ಶೂನ್ಯಕ್ಕೆ ಇಳಿಸುವ ಗುರಿಯೊಂದಿಗೆ ನಾವೆಲ್ಲರೂ ಕೆಲಸ ಮಾಡಬೇಕು ಎಂದು ಹೇಳಿದರು.

ಟ್ರಕ್ ಚಾಲಕರು, ಕೆಲಸದ ಮೇಲೆ ಪ್ರಯಾಣ ಮಾಡುವವರು, ಲೈಂಗಿಕ ಕಾರ್ಯಕರ್ತರು, ಮಾದಕವಸ್ತುಗಳನ್ನು ಸ್ವೀಕರಿಸುವವರಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿರುತ್ತದೆ. ಸುರಕ್ಷಿತ ಲೈಂಗಿಕ ಕ್ರಿಯೆಯೇ ಮಾರಣಾಂತಿಕ ಕಾಯಿಲೆಯಿಂದ ಪಾರಾಗಲು ದಾರಿ. ಲೈಂಗಿಕ ಕಾರ್ಯಕರ್ತೆಯರನ್ನು ಸಮಾಜದ ಮುಖ್ಯ ವಾಹಿನಿಯಿಂದ ಹೊರಗೆ ಇಟ್ಟಿರುವ ಕಾರಣ ಗಂಡಾಂತರಗಳು ಉಂಟಾಗುತ್ತಿವೆ. ಆದರೆ, ಅವರನ್ನು ಮಾನವೀಯತ ದೃಷ್ಟಿಯಿಂದ ನೋಡದಿದ್ದರೆ ಏಡ್ಸ್ ನಿಯಂತ್ರಣ ಅಸಾಧ್ಯ ಎಂದು ತಿಳಿಸಿದರು.

ರಾಜ್ಯದಲ್ಲಿ 433 ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. 2592 ಸೌಲಭ್ಯಾಧಾರಿತ ಸಮಗ್ರ ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. ಅಲ್ಲಿ ನೀಡುತ್ತಿರುವ ಚಿಕಿತ್ಸೆ, ಥೆರಪಿಗಳಿಂದಾಗಿ ಇಳಿಕೆಯಾಗಿದೆ. ಇಷ್ಟಕ್ಕೆ ಸುಮ್ಮನಾಗದೇ ಎಚ್‌ಐವಿ/ಏಡ್ಸ್‌ ಪತ್ತೆಯೇ ಇಲ್ಲ ಎಂದು ಆಗುವವರೆಗೆ ಕೆಲಸ ಮಾಡಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT