ಬಿ ವೈ ವಿಜಯೇಂದ್ರ 
ರಾಜ್ಯ

ಮುಡಾ ಅಕ್ರಮ ತನಿಖೆ ಪ್ರಗತಿ ಬಗ್ಗೆ ಲೋಕಾಯುಕ್ತಕ್ಕೆ ಇ.ಡಿ ಪತ್ರ ಸ್ವಾಗತಾರ್ಹ: ಬಿ.ವೈ ವಿಜಯೇಂದ್ರ

ಪ್ರಾಥಮಿಕ ಹಂತದಲ್ಲಿ ಇಡಿ ನಡೆಸಿದ ತನಿಖೆಯಲ್ಲಿ 700 ಕೋಟಿ ರೂ ಗೂ ಹೆಚ್ಚು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ. ಮುಡಾ ಅಕ್ರಮದ ಬಗ್ಗೆ ಎಳೆಎಳೆಯಾಗಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಜಾರಿ ನಿರ್ದೇಶನಾಲಯ ಬಿಡಿಸಿದೆ.

ಕಲಬುರಗಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸೈಟ್‌ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ ಭೂ ಸ್ವಾಧೀನ ಪ್ರಕ್ರಿಯೆಯೇ ಅಕ್ರಮ ಎಂದು ಹೇಳಿದೆ. ಮುಡಾ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಲೋಕಾಯುಕ್ತ ಎಡಿಜಿಪಿಗೆ ತನಿಖೆಯ ಪ್ರಗತಿಯ ಬಗ್ಗೆ ಪತ್ರ ಬರೆದಿರುವುದನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸ್ವಾಗತಿಸಿದ್ದಾರೆ

ಕಲಬುರಗಿಯಲ್ಲಿ ಮಾತನಾಡಿದ ಅವರು, ಪ್ರಾಥಮಿಕ ಹಂತದಲ್ಲಿ ಇಡಿ ನಡೆಸಿದ ತನಿಖೆಯಲ್ಲಿ 700 ಕೋಟಿ ರೂ.ಗೂ ಹೆಚ್ಚು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ವಿಜಯೇಂದ್ರ ತಿಳಿಸಿದ್ದಾರೆ. ಮುಡಾ ಅಕ್ರಮದ ಬಗ್ಗೆ ಎಳೆಎಳೆಯಾಗಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಜಾರಿ ನಿರ್ದೇಶನಾಲಯ ಬಿಡಿಸಿದೆ. ಸಿಎಂ ಪತ್ನಿಗೆ ಕೊಟ್ಟಿರುವ 14 ಸೈಟ್‌ಗಳು ಸಹ ಅಕ್ರಮ ಎಂದು ಇಡಿ ಉಲ್ಲೇಖಿಸಿದೆ ಎಂದು ಹೇಳಿದ್ದಾರೆ. ಲೋಕಾಯುಕ್ತ ಪೊಲೀಸರು ನಡೆಸಿದ ವಿಚಾರಣೆಯ ಬಗ್ಗೆಯೂ ವಿಜಯೇಂದ್ರ ಅನುಮಾನ ವ್ಯಕ್ತಪಡಿಸಿದ್ದಾರೆ. ಮುಡಾ ಹಗರಣವು ಕೇವಲ ಮುಖ್ಯಮಂತ್ರಿ ಕುಟುಂಬಕ್ಕೆ 14 ನಿವೇಶನ ಹಂಚಿಕೆಗೆ ಸೀಮಿತವಾಗಿಲ್ಲ ಎಂದು ನಾವು ಹೇಳುತ್ತಲೇ ಇದ್ದೇವೆ. ನೂರಾರು ಕೋಟಿ ರೂಪಾಯಿಗಳ ಹಗರಣ ಎಂದು ನಾನು ಈ ಹಿಂದೆಯೂ ಹೇಳಿದ್ದೆ ಎಂದು ಅವರು ತಿಳಿಸಿದರು.

ನನ್ನ ಹೇಳಿಕೆ ಕೇವಲ ಆರೋಪವಾಗಿರಲಿಲ್ಲ ಎಂಬುದು ಈಗ ಇಡಿ ತನಿಖೆಯಿಂದ ಸಾಬೀತಾಗಿದೆ ಎಂದು ಅವರು ಹೇಳಿದರು. ಜಾರಿ ನಿರ್ದೇಶನಾಲಯ ನಿಷ್ಪಕ್ಷಪಾತ ತನಿಖೆ ನಡೆಸಿದೆ. ಮುಡಾ ನಿವೇಶನ ಹಂಚಿಕೆಯಲ್ಲಿ 700 ಕೋಟಿ ರೂ.ಗೂ ಹೆಚ್ಚು ಹಗರಣ ನಡೆದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದಾರೆ. ಸಿಎಂ ಪತ್ನಿ ಪಾರ್ವತಿ ಬಿಎಂ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವುದನ್ನು ಇಡಿ ಪತ್ತೆ ಹಚ್ಚಿದೆ ಎಂದರು. ಕೇಂದ್ರ ಸಂಸ್ಥೆಯು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ಇತ್ತೀಚೆಗೆ ಬರೆದ ಪತ್ರದಲ್ಲಿ , ಮುಡಾ ಒಟ್ಟು 1,095 ಸೈಟ್‌ಗಳನ್ನು ಬೇನಾಮಿ ಮತ್ತು ಇತರರಿಗೆ ಕಾನೂನುಬಾಹಿರವಾಗಿ ಹಂಚಿಕೆ ಮಾಡಿದೆ ಎಂದು ತನ್ನ ತನಿಖೆಯಲ್ಲಿ ಕಂಡುಬಂದಿದೆ ಎಂದು ಹೇಳಿಕೊಂಡಿದೆ. ಸಿದ್ದರಾಮಯ್ಯ ಅವರ ಆಪ್ತ ಸಹಾಯಕರಲ್ಲಿ ಒಬ್ಬರಾದ ಎಸ್ ಜಿ ದಿನೇಶ್ ಕುಮಾರ್ ಅಲಿಯಾಸ್ ಸಿಟಿ ಕುಮಾರ್ ಅವರು ಈ ಪ್ರಕ್ರಿಯೆಯಲ್ಲಿ ಅನಗತ್ಯ ಪ್ರಭಾವ ಬೀರಿದ್ದಾರೆ ಎಂಬುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಸಂಸ್ಥೆ ತಿಳಿಸಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT