ಅತ್ಯಾಚಾರ ಆರೋಪಿ ಖಾಜಾ ಸಾಬ್ 
ರಾಜ್ಯ

ಕಲಬುರಗಿ: ವಿದ್ಯಾರ್ಥಿನಿ ಮೇಲೆ ಹೆಡ್ ಮಾಸ್ಟರ್ ಅತ್ಯಾಚಾರ; ಗಲ್ಲು ಶಿಕ್ಷೆಗೆ ಆಗ್ರಹಿಸಿ ಯಡ್ರಾಮಿ ಬಂದ್

ಯಡ್ರಾಮಿ ಪೊಲೀಸರು ಆರೋಪಿ ಖಾಜಾಸಾಬ್ ನನ್ನು ಬಂಧಿಸಿದ್ದಾರೆ. ಮಂಗಳವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕಲಬುರಗಿ: ಸೋಮವಾರ ಸಂಜೆ 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ಮಂಗಳವಾರ ಸಂಪೂರ್ಣ ಬಂದ್ ಆಚರಿಸಲಾಯಿತು.

ಯಡ್ರಾಮಿ ಪೊಲೀಸರು ಆರೋಪಿ ಖಾಜಾಸಾಬ್ ನನ್ನು ಬಂಧಿಸಿದ್ದಾರೆ. ಮಂಗಳವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸಂತ್ರಸ್ತೆ ಕಲಬುರಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ವಿವಿಧ ಸ್ಥಳೀಯ ಸಂಘಟನೆಗಳು ನೀಡಿದ ಬಂದ್ ಕರೆಗೆ ಬೆಂಬಲ ಸೂಚಿಸಿ ಪಟ್ಟಣದ ಎಲ್ಲಾ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು, ಶಾಲಾ-ಕಾಲೇಜುಗಳು ಮುಚ್ಚಿದ್ದವು. ಶಾಲೆಗೆ ನೀಡಿರುವ ಅನುಮತಿಯನ್ನು (ಸರ್ಕಾರಿ ಮಾನ್ಯತೆ) ರದ್ದುಪಡಿಸಿ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮಂಗಳವಾರ ಕಲಬುರಗಿಯಲ್ಲಿದ್ದ ಜೇವರ್ಗಿ ಶಾಸಕ ಡಾ.ಅಜಯಸಿಂಗ್ ಯಡ್ರಾಮಿಗೆ ಧಾವಿಸಿ ಸಂತ್ರಸ್ತರಿಗೆ 2.5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದರು. ರಾಜ್ಯ ಸರ್ಕಾರದಿಂದ ಪರಿಹಾರ ಕೊಡಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ಯಡ್ರಾಮಿ ತಹಶೀಲ್ದಾರ್ ಶಶಿಕಲಾ ಪಡಗಟ್ಟಿ ಮತ್ತಿತರ ಅಧಿಕಾರಿಗಳು ಪ್ರತಿಭಟನಾಕಾರರನ್ನು ಭೇಟಿ ಮಾಡಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಅವರ ಸೂಚನೆಯಂತೆ ಶಾಲೆಗೆ ನೀಡಿರುವ ಅನುಮತಿಯನ್ನು ಶೀಘ್ರದಲ್ಲಿಯೇ ರದ್ದುಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೂರ್ಯಕಾಂತ್ ಮದನಿದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?