ಜಾರಿ ನಿರ್ದೇಶನಾಲಯ- ಸಿಎಂ ಸಿದ್ದರಾಮಯ್ಯ online desk
ರಾಜ್ಯ

ಮುಡಾ ಪ್ರಕರಣ: ಲೋಕಾಯುಕ್ತಕ್ಕೆ E.D ಪತ್ರ ರಾಜಕೀಯ ಪ್ರೇರಿತ- Siddaramaiah

ಪ್ರಕರಣದ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಯಾವುದೇ ಅಧಿಕಾರವಿಲ್ಲ ಎಂದು ಸಿಎಂ ಪದೇ ಪದೇ ಪ್ರತಿಪಾದಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಸಿದ್ದರಾಮಯ್ಯ ಪತ್ನಿ ಪಾರ್ವತಿ ಬಿಎಂ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ.

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಲೋಕಾಯುಕ್ತ ಪೊಲೀಸರಿಗೆ ಜಾರಿ ನಿರ್ದೇಶನಾಲಯ ಬರೆದಿರುವ ಪತ್ರ ರಾಜಕೀಯ ಪ್ರೇರಿತವಾಗಿದ್ದು ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ (ಇಡಿ) ಯಾವುದೇ ಅಧಿಕಾರವಿಲ್ಲ ಎಂದು ಸಿಎಂ ಪದೇ ಪದೇ ಪ್ರತಿಪಾದಿಸಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಸಿದ್ದರಾಮಯ್ಯ ಪತ್ನಿ ಪಾರ್ವತಿ ಬಿಎಂ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ.

"ಜಾರಿ ನಿರ್ದೇಶನಾಲಯ ಲೋಕಾಯುಕ್ತಕ್ಕೆ ಪ್ರಕರಣದ ಸಂಬಂಧ ಪತ್ರ ಬರೆದಿರುವುದು ರಾಜಕೀಯ ಪ್ರೇರಿತವಾಗಿದೆ. ನಾಳೆ ಸಿಂಗಲ್ ಬೆಂಚ್ ಆದೇಶದ ವಿರುದ್ಧ ನಮ್ಮ ರಿಟ್ ಮೇಲ್ಮನವಿ ಬರಲಿದೆ (HC ನಲ್ಲಿ ವಿಭಾಗೀಯ ಪೀಠದ ಮುಂದೆ), ವಿಚಾರಣೆಗೂ ಸ್ವಲ್ಪ ಮುನ್ನ ಜಾರಿ ನಿರ್ದೇಶನಾಲಯ ಪತ್ರ ಬರೆದಿರುವುದರ ಅರ್ಥವೇನು? ಮೊದಲನೆಯದಾಗಿ ಜಾರಿ ನಿರ್ದೇಶನಾಲಯಕ್ಕೆ ಈ ಬಗ್ಗೆ ತನಿಖೆ ನಡೆಸಲು ಅಧಿಕಾರವಿಲ್ಲ, ಕಾನೂನಾತ್ಮಕವಾಗಿ ಈ ರೀತಿ ಮಾಡಲು ಬರುವುದಿಲ್ಲ. ಎರಡನೆಯದಾಗಿ, ಅವರು ನ್ಯಾಯಾಲಯದ ಮೇಲೆ ಪ್ರಭಾವ ಬೀರಲು ಇದನ್ನು ಮಾಡಿದ್ದಾರೆ.” ಎಂದು ಸಿಎಂ ಹೇಳಿದ್ದಾರೆ.

ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಸಿಎಂ, ‘ಲೋಕಾಯುಕ್ತರು ತನಿಖೆ ನಡೆಸುತ್ತಿದ್ದು, ಅವರು ವರದಿ ಸಲ್ಲಿಸಬೇಕು, ಅವರ ಮೇಲೆ ಪ್ರಭಾವ ಬೀರಲು, ಪೂರ್ವಗ್ರಹ ಪೀಡಿತರಾಗುವಂತೆ ಮಾಡಲು ಜಾರಿ ನಿರ್ದೇಶನಾಲಯ ಈ ರೀತಿ ಮಾಡಿದೆ. ಇದು ರಾಜಕೀಯ ಪ್ರೇರಿತ ಮತ್ತು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಾರಿ ನಿರ್ದೇಶನಾಲಯದ ಪ್ರಕಾರ, ಮುಡಾದಿಂದ ಪಾರ್ವತಿಗೆ 14 ಸೈಟ್‌ಗಳನ್ನು ಹಸ್ತಾಂತರಿಸುವಲ್ಲಿ ಹಲವಾರು ಅಕ್ರಮಗಳ ಪುರಾವೆಗಳು ಪತ್ತೆಯಾಗಿವೆ.

ಕೇಂದ್ರೀಯ ತನಿಖಾ ಸಂಸ್ಥೆ, ಇತ್ತೀಚೆಗೆ ಲೋಕಾಯುಕ್ತ ಪೊಲೀಸರಿಗೆ ಕಳುಹಿಸಿದ ಪತ್ರದಲ್ಲಿ, ಮುಡಾ ಬೇನಾಮಿ ಮತ್ತು ಇತರ ವಹಿವಾಟುಗಳಲ್ಲಿ ಒಟ್ಟು 1,095 ಸೈಟ್‌ಗಳನ್ನು "ಕಾನೂನುಬಾಹಿರವಾಗಿ" ಮಂಜೂರು ಮಾಡಿರುವುದು ತನ್ನ ತನಿಖೆಯಲ್ಲಿ ಕಂಡುಬಂದಿದೆ ಎಂದು ಹೇಳಿದೆ.

ಅಧಿಕೃತ ಮೂಲಗಳ ಮಾಹಿತಿಯ ಪ್ರಕಾರ ಹಾಗೂ ಪಿಟಿಐ ಗೆ ಲಭ್ಯವಾದ ಮಾಹಿತಿಯ ಪ್ರಕಾರ, ಮುಡಾದಲ್ಲಿ ಆಪಾದಿತ ಅಕ್ರಮ ಚಟುವಟಿಕೆಗಳು ಸಿಎಂ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ಪ್ರಕರಣದೊಂದಿಗೆ "ಅಂತ್ಯವಾಗಿಲ್ಲ" ಬದಲಾಗಿ ಒಟ್ಟು 1,095 ಸೈಟ್‌ಗಳನ್ನು 700 ಕೋಟಿ ರೂ.ಗಿಂತ ಹೆಚ್ಚು ಮಾರುಕಟ್ಟೆ ಮೌಲ್ಯದೊಂದಿಗೆ "ಕಾನೂನುಬಾಹಿರವಾಗಿ" ಹಂಚಲಾಗಿರುವುದು ಪತ್ತೆಯಾಗಿದೆ.

ಪ್ರಕರಣದ ತನಿಖೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಯಾವುದೇ ಅಧಿಕಾರವಿಲ್ಲ, ಆದರೆ ಅವರು ಇನ್ನೂ ತನಿಖೆ ನಡೆಸುತ್ತಿದ್ದಾರೆ ಎಂದು ಸಿಎಂ ಆರೋಪ ಮಾಡಿದ್ದಾರೆ.

''ರಾಜ್ಯಪಾಲರು ತನಿಖೆ ನಡೆಸುವಂತೆ ಹೇಳಿದ್ದರು, ಜಿಲ್ಲಾ ನ್ಯಾಯಾಲಯ (ವಿಶೇಷ ನ್ಯಾಯಾಲಯ) ಡಿಸೆಂಬರ್ 24 ರೊಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ತಿಳಿಸಿದೆ. ಅವರು (ಲೋಕಾಯುಕ್ತ ಪೊಲೀಸರು) ತನಿಖೆ ನಡೆಸುತ್ತಿದ್ದಾರೆ, ಆದರೆ ಈ ಮಧ್ಯೆ ಜಾರಿ ನಿರ್ದೇಶನಾಲಯ ಏಕೆ ಪತ್ರ ಬರೆಯುತ್ತಿದೆ? ತನಿಖಾ ಸಂಸ್ಥೆಯ ಉದ್ದೇಶವೇನು?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜಾರಿ ನಿರ್ದೇಶನಾಲಯ ಪ್ರಕರಣದ ತನಿಖೆ ನಡೆಸುತ್ತಿದೆ, ಅವರು ಸ್ವತಂತ್ರವಾಗಿ ವರದಿಯನ್ನು ನೀಡಲಿ ಅವರು ಲೋಕಾಯುಕ್ತಕ್ಕೆ ಏಕೆ ಪತ್ರ ಬರೆದಿದ್ದಾರೆ? ಅವರು ಮಾಹಿತಿಯನ್ನು ಹಂಚಿಕೊಳ್ಳಬಹುದು, ಆದರೆ ಅವರು ಪತ್ರ ಬರೆದು ಅದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕು ಎಂಬುದು ಅರ್ಥವಲ್ಲ. ಲೋಕಾಯುಕ್ತಕ್ಕೆ ED ಪತ್ರ ಬರೆದಿರುವುದು ಸಂಪೂರ್ಣವಾಗಿ, ನೂರಕ್ಕೆ ನೂರು ರಾಜಕೀಯವಾಗಿದೆ" ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT