ಜಗದಾಂಬಿಕಾ ಪಾಲ್ ಅವರೊಂದಿಗೆ ಮಾತುಕತೆ ನಡೆಸುತ್ತಿರುವ ಯತ್ನಾಳ್ ಬಣ. 
ರಾಜ್ಯ

ವಕ್ಫ್ ಆಸ್ತಿ ವಿವಾದ: JPC ಅಧ್ಯಕ್ಷರಿಗೆ ಯತ್ನಾಳ್ ಬಣದಿಂದ ವರದಿ ಸಲ್ಲಿಕೆ

ಯತ್ನಾಳ್ ಅವರು ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಮತ್ತು ಅರವಿಂದ ಲಿಂಬಾವಳಿ ಅವರೊಂದಿಗೆ ಜಗದಾಂಬಿಕಾ ಪಾಲ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದು, ವರದಿ ಸಲ್ಲಿಸಿದ್ದಾರೆ.

ಬೆಂಗಳೂರು/ನವದೆಹಲಿ: ಬಿಜೆಪಿಯ ಯತ್ನಾಳ್ ನೇತೃತ್ವದ ನಿಯೋಗ ಮಂಗಳವಾರ ವಕ್ಫ್ ತಿದ್ದುಪಡಿ ಮಸೂದೆ 2024 ರ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರನ್ನು ಭೇಟಿಯಾಗಿದ್ದು, ರಾಜ್ಯದಲ್ಲಿನ ವಕ್ಫ್‌ ಸಂಬಂಧಿಸಿದ ವರದಿ ಸಲ್ಲಿಸಿದೆ.

ಯತ್ನಾಳ್ ಅವರು ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಮತ್ತು ಅರವಿಂದ ಲಿಂಬಾವಳಿ ಅವರೊಂದಿಗೆ ಜಗದಾಂಬಿಕಾ ಪಾಲ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದು, ವರದಿ ಸಲ್ಲಿಸಿದ್ದಾರೆ.

ಕಲಬುರಗಿ, ಬೀದರ್, ಬಿಜಾಪುರ, ಯಾದಗಿರಿ, ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಸಂಗ್ರಹಿಸಿದ ಮಾಹಿತಿ ವರದಿಯಲ್ಲಿದೆ. ಅಲ್ಲದೇ ವಕ್ಫ್ ಇತ್ತಿಚೆಗೆ ನೋಟಿಸ್ ನೀಡಿದ ಆಸ್ತಿಗಳ ಬಗ್ಗೆ ಜಗದಾಂಬಿಕಾ ಪಾಲ್ ಅವರಿಗೆ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಮಾಹಿತಿ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅರವಿಂದ್ ಲಿಂಬಾವಳಿ ಅವರು, ವಕ್ಫ್ ಜೆಪಿಸಿ ಅಧ್ಯಕ್ಷರನ್ನು ಭೇಟಿಯಾಗಿದ್ದೇವೆ. ಬಹಳ ಹೊತ್ತು ನಮ್ಮ ತಂಡದ ಜೊತೆ ಚರ್ಚೆ ಮಾಡಿದ್ದಾರೆ. ಯತ್ನಾಳ್ ವಿಜಯಪುರದ ಹೋರಾಟಕ್ಕೆ ಪಾಲ್ ಬಂದಿದ್ದರು. ಪಾಲ್ ಕೊಟ್ಟಂತಹ ಸಲಹೆ ಮೇರೆಗೆ ಪ್ರವಾಸ ಮಾಡಿದ್ದೆವು. 7 ಜಿಲ್ಲೆಗಳಲ್ಲಿ ನಮ್ಮ ತಂಡ ಪ್ರವಾಸ ಮಾಡಿತ್ತು. ವರದಿಯನ್ನು ಈಗ ಅಧ್ಯಕ್ಷರ ಗಮನಕ್ಕೆ ತಂದಿದ್ದೇವೆ ಎಂದು ಹೇಳಿದರು.

ಈ ದಾಖಲೆಗಳನ್ನು ಪರಿಶೀಲಿಸಿ ಸಮಿತಿಗೆ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೇಸ್ ಟು ಕೇಸ್ ವರದಿ ತಯಾರಿಸುವಂತೆ ಸೂಚಿಸಿದ್ದಾರೆಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT