ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಪ್ರೀತಿಗೆ ಅಡ್ಡಿ; ಅಪ್ರಾಪ್ತ ಪ್ರೇಯಸಿಯ ತಾಯಿ, ಮಗನನ್ನು ಕೊಚ್ಚಿ ಕೊಂದ ಪ್ರಿಯಕರ!

ಮಂಗಲ ನಾಯಿಕ ಪುತ್ರಿಯನ್ನು ರವಿ ಪ್ರೀತಿಸುತ್ತಿದ್ದ. ಆದರೆ ಇದಕ್ಕೆ ಮಂಗಲ ವಿರೋಧಿಸಿದ್ದರು.

ಬೆಳಗಾವಿ: ತಮ್ಮ ಪ್ರೀತಿಗೆ ಅಡ್ಡಿಯಾಗಿದ್ದಾರೆ ಎಂದು ಕ್ರೋಧಗೊಂಡ ಪ್ರಿಯಕರನೊಬ್ಬ ಪ್ರೇಯಸಿಯ ತಾಯಿ ಮತ್ತು ಆಕೆಯ ಮಗನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ನಿಪ್ಪಾಣಿ ತಾಲೂಕಿನ ಅಕ್ಕೋಳ ಗ್ರಾಮದ ಹೊರ ವಲಯದ ತೋಟದ ಮನೆಯಲ್ಲಿ ನೆಲೆಸಿದ್ದ 45 ವರ್ಷದ ತಾಯಿ ಮಂಗಲ ನಾಯಿಕ ಮತ್ತು ಪುತ್ರ 18 ವರ್ಷದ ಪ್ರಜ್ವಲ್ ನಾಯಿಕ ನನ್ನು ಆರೋಪಿ ರವಿ ಖಾನಾಪಗೋಳ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ನಿನ್ನೆ ರಾತ್ರಿ ರವಿ ಖಾನಪಗೋಳ ತನ್ನ ಸ್ನೇಹಿತ ಲೋಕೇಶ್ ನಾಯಿಕ ಎಂಬಾತನ ಜೊತೆಗೆ ಬಂದು ಪ್ರೇಯಸಿಯ ತಾಯಿಯ ಮೇಲೆ ಹಲ್ಲೆ ಮಾಡಲು ಶುರು ಮಾಡಿದ್ದಾನೆ. ಇದನ್ನು ಕಂಡು ತಾಯಿಯನ್ನು ರಕ್ಷಿಸಿಕೊಳ್ಳಲು ಮುಂದಾದ ಪ್ರಜ್ವಲ್ ನಾಯಿಕ ನನ್ನು ರವಿ ಖಾನಪಗೋಳ ಬರ್ಬರವಾಗಿ ಹತ್ಯೆ ಮಾಡಿದ್ದನು.

ಕೊಲೆ ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಂದ ನಿಪ್ಪಾಣಿ ಗ್ರಾಮೀಣ ಠಾಣೆ ಪೊಲೀಸರು ಪರಿಶೀಲನೆ ನಡೆಸಿದರು. ಅಲ್ಲದೆ ಗ್ರಾಮಸ್ಥರ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಮಂಗಲ ನಾಯಿಕ ಪುತ್ರಿಯನ್ನು ರವಿ ಪ್ರೀತಿಸುತ್ತಿದ್ದ. ಆದರೆ ಇದಕ್ಕೆ ಮಂಗಲ ವಿರೋಧಿಸಿದ್ದರು. ಇದರಿಂದ ಕೋಪಗೊಂಡು ಇಬ್ಬರನ್ನು ಹತ್ಯೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT