ಡಿಕೆ ಶಿವಕುಮಾರ್-ಸಿದ್ದರಾಮಯ್ಯ PTI
ರಾಜ್ಯ

ಕಟ್ಟಡದ ಕಲ್ಲು ಗಣಿಗಾರಿಕೆಯ ರಾಯಧನ ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ!

ಪ್ರತಿ ಮೆಟ್ರಿಕ್ ಟನ್ ಕಟ್ಟಡ ಕಲ್ಲುಗಳಿಗೆ ರಾಯಧನವನ್ನು 70 ರೂ.ನಿಂದ 80 ರೂ.ಗೆ ಹೆಚ್ಚಿಸಲಾಗಿದೆ ಎಂದರು. ಇದಲ್ಲದೆ, ಹಿಂದೆ ರಾಯಧನವನ್ನು ಪಾವತಿಸಲು ವಿಫಲವಾದ ಘಟಕಗಳಿಗೆ ಪರಿಹಾರ ಯೋಜನೆಯನ್ನು ಪರಿಚಯಿಸಲು ಕ್ಯಾಬಿನೆಟ್ ನಿರ್ಧರಿಸಿದೆ.

ಬೆಂಗಳೂರು: ಕಟ್ಟಡ ಕಲ್ಲು ಗಣಿಗಾರಿಕೆಯ ಮೇಲಿನ ರಾಯಧನವನ್ನು ಪ್ರತಿ ಮೆಟ್ರಿಕ್ ಟನ್‌ಗೆ 70 ರೂಪಾಯಿಯಿಂದ 80 ರೂಪಾಯಿಗೆ ಹೆಚ್ಚಿಸುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕ್ರಮದಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 311.55 ಕೋಟಿ ಹೆಚ್ಚುವರಿ ಆದಾಯ ಬರುವ ನಿರೀಕ್ಷೆ ಇದೆ.

ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್, ಪ್ರತಿ ಮೆಟ್ರಿಕ್ ಟನ್ ಕಟ್ಟಡ ಕಲ್ಲುಗಳಿಗೆ ರಾಯಧನವನ್ನು 70 ರೂ.ನಿಂದ 80 ರೂ.ಗೆ ಹೆಚ್ಚಿಸಲಾಗಿದೆ ಎಂದರು. ಇದಲ್ಲದೆ, ಹಿಂದೆ ರಾಯಧನವನ್ನು ಪಾವತಿಸಲು ವಿಫಲವಾದ ಘಟಕಗಳಿಗೆ ಪರಿಹಾರ ಯೋಜನೆಯನ್ನು ಪರಿಚಯಿಸಲು ಕ್ಯಾಬಿನೆಟ್ ನಿರ್ಧರಿಸಿದೆ.

ರಾಯಧನ ಪಾವತಿಸದೆ ಖನಿಜ ಸಾಗಣೆ ಮಾಡಿದರೆ ದಂಡ ವಸೂಲಿಗೆ ನಿರ್ಧರಿಸಲಾಗಿದೆ. 6,105 ರೂಪಾಯಿ ದಂಡ ವಿಧಿಸಲಾಗಿತ್ತು. ಕಳೆದ 6-7 ವರ್ಷಗಳಿಂದ ದಂಡ ವಸೂಲಿ ಆಗದೆ ಬಾಕಿ ಉಳಿದಿವೆ. ಹಾಗಾಗಿ ಒನ್​ಟೈಮ್ ಸೆಟ್ಲ್​ಮೆಂಟ್​ಗೆ ಅವಕಾಶ ನೀಡಲಾಗಿದೆ ಎಂದರು.

ಇನ್ನು 11 ಜಿಲ್ಲೆಗಳಲ್ಲಿ ಡ್ರೋನ್‌ಗಳೊಂದಿಗೆ ಡಿಫರೆನ್ಷಿಯಲ್ ಜಿಯೋ ಪೊಸಿಷನಿಂಗ್ ಸಿಸ್ಟಮ್ (ಡಿಜಿಪಿಎಸ್) ಅಳವಡಿಕೆಗೆ ಸರ್ಕಾರ ಅನುಮೋದಿಸಿದೆ. ಈ ಉಪಕ್ರಮವು ಮೇಲ್ವಿಚಾರಣೆಯಲ್ಲಿ ನಿಖರತೆಯನ್ನು ಹೆಚ್ಚಿಸಲು ಮತ್ತು ಗಣಿಗಾರಿಕೆ ಚಟುವಟಿಕೆಗಳಲ್ಲಿ ಸಂಘರ್ಷಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT