ಡಿಕೆ ಶಿವಕುಮಾರ್-ಸಿದ್ದರಾಮಯ್ಯ PTI
ರಾಜ್ಯ

ಕಟ್ಟಡದ ಕಲ್ಲು ಗಣಿಗಾರಿಕೆಯ ರಾಯಧನ ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ!

ಪ್ರತಿ ಮೆಟ್ರಿಕ್ ಟನ್ ಕಟ್ಟಡ ಕಲ್ಲುಗಳಿಗೆ ರಾಯಧನವನ್ನು 70 ರೂ.ನಿಂದ 80 ರೂ.ಗೆ ಹೆಚ್ಚಿಸಲಾಗಿದೆ ಎಂದರು. ಇದಲ್ಲದೆ, ಹಿಂದೆ ರಾಯಧನವನ್ನು ಪಾವತಿಸಲು ವಿಫಲವಾದ ಘಟಕಗಳಿಗೆ ಪರಿಹಾರ ಯೋಜನೆಯನ್ನು ಪರಿಚಯಿಸಲು ಕ್ಯಾಬಿನೆಟ್ ನಿರ್ಧರಿಸಿದೆ.

ಬೆಂಗಳೂರು: ಕಟ್ಟಡ ಕಲ್ಲು ಗಣಿಗಾರಿಕೆಯ ಮೇಲಿನ ರಾಯಧನವನ್ನು ಪ್ರತಿ ಮೆಟ್ರಿಕ್ ಟನ್‌ಗೆ 70 ರೂಪಾಯಿಯಿಂದ 80 ರೂಪಾಯಿಗೆ ಹೆಚ್ಚಿಸುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಕ್ರಮದಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ 311.55 ಕೋಟಿ ಹೆಚ್ಚುವರಿ ಆದಾಯ ಬರುವ ನಿರೀಕ್ಷೆ ಇದೆ.

ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್, ಪ್ರತಿ ಮೆಟ್ರಿಕ್ ಟನ್ ಕಟ್ಟಡ ಕಲ್ಲುಗಳಿಗೆ ರಾಯಧನವನ್ನು 70 ರೂ.ನಿಂದ 80 ರೂ.ಗೆ ಹೆಚ್ಚಿಸಲಾಗಿದೆ ಎಂದರು. ಇದಲ್ಲದೆ, ಹಿಂದೆ ರಾಯಧನವನ್ನು ಪಾವತಿಸಲು ವಿಫಲವಾದ ಘಟಕಗಳಿಗೆ ಪರಿಹಾರ ಯೋಜನೆಯನ್ನು ಪರಿಚಯಿಸಲು ಕ್ಯಾಬಿನೆಟ್ ನಿರ್ಧರಿಸಿದೆ.

ರಾಯಧನ ಪಾವತಿಸದೆ ಖನಿಜ ಸಾಗಣೆ ಮಾಡಿದರೆ ದಂಡ ವಸೂಲಿಗೆ ನಿರ್ಧರಿಸಲಾಗಿದೆ. 6,105 ರೂಪಾಯಿ ದಂಡ ವಿಧಿಸಲಾಗಿತ್ತು. ಕಳೆದ 6-7 ವರ್ಷಗಳಿಂದ ದಂಡ ವಸೂಲಿ ಆಗದೆ ಬಾಕಿ ಉಳಿದಿವೆ. ಹಾಗಾಗಿ ಒನ್​ಟೈಮ್ ಸೆಟ್ಲ್​ಮೆಂಟ್​ಗೆ ಅವಕಾಶ ನೀಡಲಾಗಿದೆ ಎಂದರು.

ಇನ್ನು 11 ಜಿಲ್ಲೆಗಳಲ್ಲಿ ಡ್ರೋನ್‌ಗಳೊಂದಿಗೆ ಡಿಫರೆನ್ಷಿಯಲ್ ಜಿಯೋ ಪೊಸಿಷನಿಂಗ್ ಸಿಸ್ಟಮ್ (ಡಿಜಿಪಿಎಸ್) ಅಳವಡಿಕೆಗೆ ಸರ್ಕಾರ ಅನುಮೋದಿಸಿದೆ. ಈ ಉಪಕ್ರಮವು ಮೇಲ್ವಿಚಾರಣೆಯಲ್ಲಿ ನಿಖರತೆಯನ್ನು ಹೆಚ್ಚಿಸಲು ಮತ್ತು ಗಣಿಗಾರಿಕೆ ಚಟುವಟಿಕೆಗಳಲ್ಲಿ ಸಂಘರ್ಷಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

SCROLL FOR NEXT