ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಖಾಸಗಿ ವಿಡಿಯೋ ತೋರಿಸಿ ಗರ್ಲ್ ಫ್ರೆಂಡ್ ಗೆ ಬೆದರಿಕೆ; 2.57 ಕೋಟಿ ರೂ ಸುಲಿಗೆ, ಯುವಕನ ಬಂಧನ

ಶಾಲಾ ದಿನಗಳಲ್ಲಿಯೇ ಇಬ್ಬರಲ್ಲಿ ಪ್ರೇಮಂಕುರವಾಗಿದ್ದು, ರಜಾ ದಿನಗಳಲ್ಲಿ ಯುವತಿಯನ್ನು ಪುಸಲಾಯಿಸಿ ಪ್ರವಾಸಕ್ಕೆ ಕರೆದೊಯ್ದುತ್ತಿದ್ದ ಕುಮಾರ್, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ.

ಬೆಂಗಳೂರು: ಖಾಸಗಿ ವಿಡಿಯೋ ತೋರಿಸಿ19 ವರ್ಷದ ಗರ್ಲ್ ಫ್ರೆಂಡ್ ಗೆ ಬ್ಲಾಕ್‌ಮೇಲ್ ಮಾಡಿ ರೂ. 2.57 ಕೋಟಿ ಸುಲಿಗೆ ಮಾಡಿದ್ದ ಯುವಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಚಾಮರಾಜಪೇಟೆಯ ಮೋಹನ್ ಕುಮಾರ್ (19) ಎಂದು ಗುರುತಿಸಲಾಗಿದೆ. ಕುಮಾರ್ ಮತ್ತು ಆತನ ಸ್ನೇಹಿತೆ ದೇವನಹಳ್ಳಿಯ ಖಾಸಗಿ ಶಾಲೆಯಲ್ಲಿ ಒಟ್ಟಿಗೆ ಓದುತ್ತಿದ್ದರು ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಶಾಲಾ ದಿನಗಳಲ್ಲಿಯೇ ಇಬ್ಬರಲ್ಲಿ ಪ್ರೇಮಂಕುರವಾಗಿದ್ದು, ರಜಾ ದಿನಗಳಲ್ಲಿ ಯುವತಿಯನ್ನು ಪುಸಲಾಯಿಸಿ ಪ್ರವಾಸಕ್ಕೆ ಕರೆದೊಯ್ದುತ್ತಿದ್ದ ಕುಮಾರ್, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಬಳಿಕ ಅಜ್ಜಿಯ ಬ್ಯಾಂಕ್ ಖಾತೆಯಿಂದ ಯುವತಿ ರೂ. 1.25 ಕೋಟಿ ಹಣವನ್ನು ವರ್ಗಾಯಿಸಿಕೊಂಡಿದ್ದಾನೆ.

ಅವರು ಒಟ್ಟಿಗೆ ಇದ್ದಾಗ ರಹಸ್ಯವಾಗಿ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ಫೋಟೋ ತೆಗೆದುಕೊಂಡಿದ್ದ ಕುಮಾರ್ ಗೆ ತನ್ನ ಗೆಳತಿಯ ತಂದೆ ಶ್ರೀಮಂತ ಉದ್ಯಮಿ ಎಂದು ತಿಳಿದ ನಂತರ ಹಣ ವಸೂಲಿ ಮಾಡಲು ಸಂಚು ರೂಪಿಸಿದ್ದ. ಆಕೆಯಿಂದ ಹಣ ಪೀಕಿಸಲು ಶುರು ಮಾಡಿದ್ದ. ಆಕೆ ನಿರಾಕರಿಸಿದಾಗ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಮತ್ತು ಫೋಟೋ ಹಾಕುವುದಾಗಿ ಅಪ್ ಲೋಡ್ ಮಾಡಿದ್ದ. ಈ ಭಯದಿಂದ ಹೆದರಿ ಯುವತಿ ಆಕೆಯ ಅಜ್ಜಿಯ ಬ್ಯಾಂಕ್ ಖಾತೆಯಿಂದ ಕುಮಾರ್ ಹೇಳಿದ ವಿವಿಧ ಖಾತೆಗಳಿಗೆ ರೂ. 1.25 ಕೋಟಿ ವರ್ಗಾವಣೆ ಮಾಡಿದ್ದ. ಅಲ್ಲದೇ ಆಕೆಯೂ 1.32 ಕೋಟಿ ಹಣ ನೀಡಿದ್ದಳು.

ತನಗೆ ಚಿನ್ನ, ದುಬಾರಿ ವಾಚ್‌ಗಳು ಮತ್ತು ವಾಹನ ನೀಡುವಂತೆ ಕುಮಾರ್ ಯುವತಿ ಮೇಲೆ ಒತ್ತಡ ಹೇರಿದ್ದ ಎಂದು ಮೂಲಗಳು ತಿಳಿಸಿವೆ. ಆತನ ಬೇಡಿಕೆಗಳು ಹೆಚ್ಚಾಗುತ್ತಿದ್ದಂತೆ ಆಕೆಯನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಲು ಪ್ರಾರಂಭಿಸಿದಾಗ ಯುವತಿ ಸಿಸಿಬಿಗೆ ದೂರು ನೀಡಿದ್ದಾಳೆ.

ಎಫ್‌ಐಆರ್‌ನ ಪ್ರಕಾರ, ಯುವತಿ ಕುಮಾರ್‌ನ ತಂದೆ ಮತ್ತು ಇತರರ ಬ್ಯಾಂಕ್ ಖಾತೆಗಳಿಗೂ ಹಣ ವರ್ಗಾಯಿಸಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳಿಂದ 80 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ವಿಡಿಯೋಗಳನ್ನು ರೆಕಾರ್ಡ್ ಮಾಡುವಾಗ ಯುವತಿ ಅಪ್ರಾಪ್ತ ವಯಸ್ಸಿನವಳಾಗಿದ್ದರಿಂದ ಕುಮಾರ್ ವಿರುದ್ಧ ಪೋಕ್ಸೋ ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT