ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ, ಬಡವರ ಬಿಪಿಎಲ್ ಕಾರ್ಡ್ ಕಸಿಯಲ್ಲ: ಸಿಎಂ ಸಿದ್ದರಾಮಯ್ಯ ಪುನರುಚ್ಛಾರ

ದೇಶದಲ್ಲಿ ಬಿಜೆಪಿ ಆಡಳಿತ ಇರುವ ಯಾವುದೇ ರಾಜ್ಯದ್ಲೂ ಜನರಿಗೆ 10 ಕೆಜಿ ಅಕ್ಕಿ ಕೊಡುತ್ತಿಲ್ಲ. ಯಾವುದಾದರೂ ರಾಜ್ಯದಲ್ಲಿ 10 ಕೆಜಿ ಅಕ್ಕಿ ಕೊಟ್ಟಿದ್ದನ್ನು ಬಿಜೆಪಿಗರು ತೋರಿಸಿದ್ದೇ ಆದರೆ, ಈಗಲೇ ರಾಜೀನಾಮೆ ಕೊಟ್ಟು ಹೋಗುತ್ತೇನೆ.

ಹಾವೇರಿ: ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್ ಕಸಿಯುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಘಾಂವಿ ಜನತೆಗೆ ಧನ್ಯವಾದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಸವಣೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಮಾವೇಶವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಆಡಳಿತ ಇರುವ ಯಾವುದೇ ರಾಜ್ಯದ್ಲೂ ಜನರಿಗೆ 10 ಕೆಜಿ ಅಕ್ಕಿ ಕೊಡುತ್ತಿಲ್ಲ. ಯಾವುದಾದರೂ ರಾಜ್ಯದಲ್ಲಿ 10 ಕೆಜಿ ಅಕ್ಕಿ ಕೊಟ್ಟಿದ್ದನ್ನು ಬಿಜೆಪಿಗರು ತೋರಿಸಿದ್ದೇ ಆದರೆ, ಈಗಲೇ ರಾಜೀನಾಮೆ ಕೊಟ್ಟು ಹೋಗುತ್ತೇನೆ. ಯಡಿಯೂರಪ್ಪ, ಬೊಮ್ಮಾಯಿಯವರೇ, ನಾನು ಕೊಟ್ಟಿದ್ದ 7 ಕೆಜಿ ಅಕ್ಕಿಯನ್ನು 4 ಕೆಜಿಗೆ ಇಳಿಸಿದ್ದು ಯಾರಪ್ಪಾ? ಬಿಜೆಪಿಗೆ ಬಡವರ ಬಗ್ಗೆ ಮಾತನಾಡುವ ಯಾವುದೇ ನೈತಿಕತೆಯೂ ಇಲ್ಲ. ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಮಾತ್ರ 10 ಕೆಜಿ ನೀಡಲಾಗುತ್ತಿದೆ. ರೂ.34 ಕೊಡುತ್ತೇವೆ ಅಕ್ಕಿ ಕೊಡಿ ಎಂದರೆ ಕೇಂದ್ರ ಸರ್ಕಾರ ಅಕ್ಕಿ ಕೊಡಲಿಲ್ಲ. ಹೀಗಾಗಿ 5 ಕೆಜಿ ಬದಲಾಗಿ ಹಣ ಕೊಡುತ್ತಿದ್ದೇವೆ. ನಾವು ಯಾವುದೇ ಕಾರಣಕ್ಕೂ ಒಂದು ಕೆಜಿ ಅಕ್ಕಿಯನ್ನೂ ಕಡಿಮೆ ಮಾಡಲ್ಲ. ಎಷ್ಟೇ ಹಣ ಖರ್ಚಾದರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಪುನರುಚ್ಛರಿಸಿದರು.

ಈ ಕ್ಷೇತ್ರದಲ್ಲಿ ನಡೆದ 5 ಚುನಾವಣೆಗಳಲ್ಲಿ ಕಾಂಗ್ರೆಸ್ ಸೋತಿತ್ತು. 25 ವರ್ಷಗಳ ನಂತರ ಗೆಲುವು ಸಾಧಿಸಿದ್ದೇವೆ. ಎಲ್ಲರ ಶ್ರಮದಿಂದ ಇಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿದೆ. ಕಳೆದ ಚುನಾವಣೆಯಲ್ಲಿ ಪಠಾಣ್ ಸೋತಿದ್ದರು. ಪಠಾಣ್'ಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿಯವರು ತಾವು ಗೆದ್ದಾಯ್ತು ಎಂದು ಪ್ರಚಾರ ಆರಂಭಿಸಿದ್ದರು. ಆದರೆ, ಕ್ಷೇತ್ರ ಜನತೆ ನಮ್ಮ ಕೈಹಿಡಿದ್ದಾರೆ. ಕೋಮು ಸೌಹಾರ್ದತೆ ಮೆರೆ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆಂದು ಹೇಳಿದರು.

ನಾವು ನುಡಿದಂತೆ ನಡೆದಿದ್ದೇವೆ. ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ಹೀಗಾಗಿ, ಗೆದ್ದೇ ಗೆಲ್ಲುತ್ತೇವೆಂದು ಹೇಳಿದ್ದೆ. ಈ ಕ್ಷೇತ್ರದ ಜನ ಜಾತಿ, ಧರ್ಮ ನೋಡಲ್ಲ. ಕಾಂಗ್ರೆಸ್ ಕಾರ್ಯಕ್ರಮ, ಸಿದ್ಧಾಂತ ನೋಡಿ ಮತ ಹಾಕುತ್ತಾರೆಂಬ ಧೈರ್ಯ ಇತ್ತು. ನಮ್ಮ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ ಸೇರಿ ಬಿಜೆಪಿಗರು ಅಪಪ್ರಚಾರ ಮಾಡಿದ್ದರು. ಈಗ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಮಧ್ಯವರ್ತಿಗಳು ಇಲ್ಲದೇ ಜನರಿಗೆ ನೇರವಾಗಿ ಹಣ ತಲುಪುತ್ತಿದೆ. ರಾಜ್ಯದ 4.5 ಕೋಟಿ ಜನರಿಗೆ ನಮ್ಮ ಕಾರ್ಯಕ್ರಮ ತಲುಪುತ್ತಿವೆ. ಪ್ರತಿ ಕುಟುಂಬಕ್ಕೆ ಪ್ರತಿ ವರ್ಷ ರೂ.45-50 ಸಾವಿರ ಸಿಗುತ್ತಿದೆ. ಪ್ರತಿ ವರ್ಷ ರೂ.56 ಸಾವಿರ ಕೋಟಿ ಅನುದಾನ ಗ್ಯಾರಂಟಿ ಯೋಜನೆಗಳಿಗೆ ಹೋಗುತ್ತಿದೆ.

2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗಲೂ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸುತ್ತೇವೆ. ಕೇಂದ್ರ ಸರ್ಕಾರ ನಮಗೆ ನ್ಯಾಯಯುತವಾಗಿ ಕೊಡಬೇಕಾದ ಹಣವನ್ನು ಸರಿಯಾಗಿ ಕೊಡುತ್ತಿಲ್ಲ. ತೆರಿಗೆ ಪಾಲು ಕೊಡುತ್ತಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಸರಿಯಾಗಿ ಹಣ ಕೊಡುತ್ತಿಲ್ಲ. ಹಣ ಸಿಗದಂತೆ ಮಾಡಿ ನಮಗೆ ತೊಂದರೆ ಮಾಡುತ್ತಿದ್ದಾರೆ. ಎಷ್ಟೇ ಹಣಕಾಸಿನ ತೊಂದರೆ ಕೊಟ್ಟರೂ ಗ್ಯಾರಂಟಗಳನ್ನು ನಿಲ್ಲಿಸುವುದಿಲ್ಲ ಎಂದು ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT