ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: 40 ಪುಟಗಳ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ! ದಾಂಪತ್ಯ ಕಲಹದ ಶಂಕೆ

ಅತುಲ್ ಸಂಗಾತಿ ದಾಖಲಿಸುವ ಸುಳ್ಳು ಕೇಸ್ ಗಳ ಸಂತ್ರಸ್ತರಿಗೆ ನೆರವಾಗುವ 'ಸೇವ್ ಇಂಡಿಯನ್ ಫ್ಯಾಮಿಲಿ ಫೌಂಡೇಶನ್' ಎಂಬ ಎನ್ ಜಿಒ ವೊಂದರ ಸದಸ್ಯನಾಗಿದ್ದರು. ಆತ್ಮಹತ್ಯೆ ಮಾಡಿಕೊಳ್ಳಲು ಎರಡು ದಿನಗಳ ವೇಳಾಪಟ್ಟಿಯನ್ನು ಸಿದ್ದಪಡಿಸಿಕೊಂಡಿದ್ದು, ಸಾಯುವ ಮೊದಲು ತಾನು ಏನೆಲ್ಲಾ ಮಾಡಬೇಕೆಂದು ಮೂರು ಶೀರ್ಷಿಕೆಗಳಲ್ಲಿ ಬರೆದಿಟ್ಟಿದ್ದಾರೆ.

ಬೆಂಗಳೂರು: ಸುಮಾರು 40 ಪುಟಗಳ ಡೆತ್ ನೋಟ್ ಬರೆದಿಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಜುನಾಥ ಲೇಔಟ್ ನಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೃತನನ್ನು ಉತ್ತರ ಪ್ರದೇಶ ನಿವಾಸಿ ಅತುಲ್ ಸುಭಾಷ್ ಎಂದು ಗುರುತಿಸಲಾಗಿದೆ. ಮಾರತ್ತಹಳ್ಳಿಯ ಮಂಜುನಾಥ್ ಲೇಔಟ್ ನಲ್ಲಿ ವಾಸಿಸುತ್ತಿದ್ದ ಸುಭಾಷ್ ವಿರುದ್ಧ ಆತನ ಪತ್ನಿ ಉತ್ತರ ಪ್ರದೇಶದಲ್ಲಿ ಕೇಸ್ ದಾಖಲಿಸಿದ್ದರು. ಇದರಿಂದ ಮನನೊಂದು ಆತ ಸಾವನ್ನಪ್ಪಿರಬಹುದು ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಅತುಲ್ ಸಂಗಾತಿ ದಾಖಲಿಸುವ ಸುಳ್ಳು ಕೇಸ್ ಗಳ ಸಂತ್ರಸ್ತರಿಗೆ ನೆರವಾಗುವ 'ಸೇವ್ ಇಂಡಿಯನ್ ಫ್ಯಾಮಿಲಿ ಫೌಂಡೇಶನ್' ಎಂಬ ಎನ್ ಜಿಒ ವೊಂದರ ಸದಸ್ಯನಾಗಿದ್ದರು. ಆತ್ಮಹತ್ಯೆ ಮಾಡಿಕೊಳ್ಳಲು ಎರಡು ದಿನಗಳ ವೇಳಾಪಟ್ಟಿಯನ್ನು ಸಿದ್ದಪಡಿಸಿಕೊಂಡಿದ್ದು, ಸಾಯುವ ಮುನ್ನಾ ತಾನು ಏನೆಲ್ಲಾ ಮಾಡಬೇಕೆಂದು ಮೂರು ಶೀರ್ಷಿಕೆಗಳಲ್ಲಿ ಬರೆದಿಟ್ಟಿದ್ದಾರೆ.

ಸಾಯುವ ಮುನ್ನಾ ಹೇಗೆ ಏನು ಮಾಡಬೇಕು ಎಂಬ ಮೊದಲ ಶೀರ್ಷಿಕೆಯಲ್ಲಿ ಸ್ನಾನ ಮಾಡಿ, ಬಾಗಿಲು ತೆಗೆದು, ಗೇಟ್ ಲಾಕ್ ಮಾಡಬೇಕು. 100 ಬಾರಿ ಶಿವನ ನಾಮ ಸ್ಮರಣೆ ಮಾಡಬೇಕು. ಕಾರು ಮತ್ತು ಬೈಕ್ ನ ಕೀಗಳನ್ನು ಫ್ರೀಡ್ಜ್ ಮೇಲೆ ಇಡಬೇಕು. ಟೇಬಲ್ ಮೇಲೆ ಸೂಸೈಡ್ ನೋಟ್ ಇಡಬೇಕು. ಅದನ್ನು ಹೈಕೋರ್ಟ್, ಸುಪ್ರೀಂ ಕೋರ್ಟ್, ಆಫೀಸ್ ಮತ್ತು ಕುಟುಂಬಕ್ಕೆ ಕಳುಹಿಸಬೇಕು ಎಂದು ಬರೆದಿದ್ದಾರೆ.

2ನೇ ಹೆಡ್ಡಿಂಗ್ ನಲ್ಲಿ "ಸಾಯುವ ಒಂದು ದಿನ ಮುಂಚಿತವಾಗಿ ಏನು ಮಾಡಬೇಕು ಎಂಬುದನ್ನು ಬರೆದಿಟ್ಟಿದ್ದಾರೆ. ಅದರಲ್ಲಿ ಎಲ್ಲಾ ಹಣಕಾಸಿನ ವಿಷಯಗಳನ್ನು ಬಗೆಹರಿಸಿಕೊಳ್ಳಬೇಕು. ಎಲ್ಲಾ ಸಂವಹನ ಮತ್ತು ಕಚೇರಿ ಕೆಲಸಗಳನ್ನು ಪೂರ್ಣಗೊಳಿಸಬೇಕು, ಕಾನೂನು ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಂಡು, ಅಗತ್ಯ ದಾಖಲೆ ಪ್ಯಾಕಿಂಗ್ ಮಾಡಿಕೊಂಡು ಅಂತಿಮ ದಿನಕ್ಕೆ ಸಜ್ಜಾಗಬೇಕು ಎಂದು ಬರೆದಿದ್ದಾರೆ.

ಅಂತಿಮ ದಿನ" ಎಂಬ ಮೂರನೇ ಶೀರ್ಷಿಕೆಯಲ್ಲಿ, ವೀಡಿಯೊ ನೋಟ್ ಅಪ್ ಲೋಡ್ ಮಾಡಬೇಕು. ಮೊಬೈಲ್ ಫೋನ್‌ಗಳಿಂದ ಪಿಂಗರ್ ಫ್ರೀಂಟ್ಸ್ ಮತ್ತು ಮುಖ ಗುರುತಿಸುವಿಕೆಯ ಡೇಟಾವನ್ನು ಅಳಿಸಬೇಕು. ಲ್ಯಾಪ್‌ಟಾಪ್, ಚಾರ್ಜರ್ ಮತ್ತು ಐಡಿಯನ್ನು ಕಚೇರಿಗೆ ಹಿಂತಿರುಗಿಸುವುದು ಮತ್ತು 'ಡೆತ್ ನೋಟ್'ನ ಸ್ಕ್ಯಾನ್ ಮಾಡಿದ ಪ್ರತಿಯನ್ನು ಅಪ್‌ಲೋಡ್ ಮಾಡುವುದನ್ನು ಅವರು ಪ್ರಸ್ತಾಪಿಸಿದ್ದಾರೆ. ನೇಣು ಹಾಕಿಕೊಳ್ಳುವ ಮುನ್ನಾ ಎಲ್ಲಾ ಪಾವತಿಗಳನ್ನು ಪೂರ್ಣಗೊಳಿಸೇಕು ಎಂದು ಅವರು ಬರೆದಿದ್ದಾರೆ. ಅತುಲ್ "ನ್ಯಾಯ ಬಾಕಿ" ಎಂಬ ಬೋರ್ಡನ್ನು ನೇತು ಹಾಕಿದ್ದರು ಎಂದು ಪೊಲೀಸ್ ವರದಿಗಳು ಹೇಳಿವೆ.

ಭಾನುವಾರ ತಡರಾತ್ರಿ ಅವರು ಕೆಲಸ ಮಾಡುತ್ತಿದ್ದ "ಸೇವ್ ಇಂಡಿಯನ್ ಫ್ಯಾಮಿಲಿ ಫೌಂಡೇಶನ್" ಎಂಬ ಎನ್‌ಜಿಒದ ವಾಟ್ಸಾಪ್ ಗುಂಪಿನೊಂದಿಗೆ ಸೂಸೈಡ್ ನೋಟ್ ಹಂಚಿಕೊಂಡಿದ್ದು, ಸಾಧ್ಯವಾದರೆ ತಮ್ಮ ಕುಟುಂಬವನ್ನು ಬೆಂಬಲಿಸುವಂತೆ ಸದಸ್ಯರನ್ನು ವಿನಂತಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT